Mandya | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಂದ ಯುವಕನ ಕೊಲೆ

ಮಂಡ್ಯ : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಮಳವಳ್ಳಿ ತಾಲೂಕು ಭೀಮನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಭೀಮನಹಳ್ಳಿ ಗ್ರಾಮದ ಮಹೇಶ್(34) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಕಿರುಗಾವಲು ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಕೊಲೆಯಾದ ಮಹೇಶ್, ಕೊಲೆ ಮಾಡಿದನೆನ್ನಲಾದ ಗೆಳೆಯನ ಅಕ್ಕನಿಗೆ ಫೋನ್ನಲ್ಲಿ ಸಂದೇಶ ಕಳಿಸುತ್ತಿದ್ದ ಹಿನ್ನೆಲೆಯಲ್ಲಿ ಕುಪಿತಗೊಂಡ ಗೆಳೆಯ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿಯು ತನ್ನ ಇತರೆ ಸ್ನೇಹಿತರ ಜೊತೆ ಸೇರಿಕೊಂಡು ಮಹೇಶನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದವರ ಪತ್ತೆಗೆ ಕ್ರಮವಹಿವಸಲಾಗಿದೆ.
ಕಿರುಗಾವಲು ಠಾಣೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story




