Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮಂಡ್ಯ | ಹೆಣ್ಣು ಭ್ರೂಣಹತ್ಯೆ ಪ್ರಕರಣ :...

ಮಂಡ್ಯ | ಹೆಣ್ಣು ಭ್ರೂಣಹತ್ಯೆ ಪ್ರಕರಣ : ಪ್ರಮುಖ ಆರೋಪಿ ಸೇರಿ 12 ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ4 Sept 2024 7:22 PM IST
share
ಮಂಡ್ಯ | ಹೆಣ್ಣು ಭ್ರೂಣಹತ್ಯೆ ಪ್ರಕರಣ : ಪ್ರಮುಖ ಆರೋಪಿ ಸೇರಿ 12 ಮಂದಿಯ ಬಂಧನ

ಮಂಡ್ಯ : ಜಿಲ್ಲೆಯಲ್ಲಿ ಪತ್ತೆಯಾಗಿದ್ದ ಹೆಣ್ಣುಭ್ರೂಣ ಪತ್ತೆ, ಹತ್ಯೆ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಗಳಾದ ಅಭಿಷೇಕ್, ವೀರೇಶ್ ಸೇರಿದಂತೆ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಬುಧವಾರ ಸಂಜೆ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣದ ಪ್ರಮುಖ ಆರೋಪಿಗಳಾದ ಜಿಲ್ಲೆಯ ಪಾಂಡವಪುರ ತಾಲೂಕು ಎಂ.ಶೆಟ್ಟಿಹಳ್ಳಿ ಗ್ರಾಮದ ಅಭಿಷೇಕ್ ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿಯ ವೀರೇಶ್ ಅವರನ್ನು ನಿನ್ನೆ(ಸೆ.3) ಬಂಧಿಸಲಾಯಿತು. ಇವರು ನೀಡಿದ ಮಾಹಿತಿ ಮೇರೆಗೆ ಇತರ ಆರೋಪಿಗಳಾದ ಪುಟ್ಟರಾಜು, ಕುಮಾರ್, ಶಾರದಮ್ಮ, ದಾಸೇಗೌಡ, ಲ್ಯಾಬ್ ಸತ್ಯ, ಮೀನಾ, ಮಲ್ಲಿಕಾರ್ಜುನ್, ಸೋಮಶೇಖರ್, ರತ್ನಮ್ಮ, ಪ್ರೇಮ ಅಲಿಯಾಸ್ ಪಾರ್ವತಿ ಅವರನ್ನು ಬಂಧಿಸಲಾಗಿದೆ ಎಂದರು.

ಬಂಧಿತ ಆರೋಪಿಗಳಿಂದ ಸುಮಾರು 23 ಲಕ್ಷ ರೂ. ಮೌಲ್ಯದ ಕೃತ್ಯಕ್ಕೆ ಉಪಯೋಗಿಸಿದ ಎರಡು ಸ್ಕ್ಯಾನಿಂಗ್ ಉಪಕರಣ, ಮೂರು ಕಾರು ಹಾಗೂ ಮೂರು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಕಾರ್ಯ ಮುಂದುವರಿದಿದೆ ಎಂದು ಅವರು ಹೇಳಿದರು.

ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ಪಾಂಡವಪುರ ಠಾಣೆಯ ಸಬ್‍ಇನ್ಸ್‌ ಪೆಕ್ಟರ್ ಎ.ಆರ್.ವಿವೇಕಾನಂದ, ಕರೆಗೋಡು ಸಿಪಿಐ ಎನ್.ವಿ.ಮಹೇಶ್, ಮದ್ದೂರರು ಗ್ರಾಮಾಂತರ ಸಿಪಿಐ ವೆಂಕಟೇಗೌಡ ಮತ್ತು ಪಿಎಸ್ಸೈ, ಸಿಬ್ಬಂದಿ ಒಳಗೊಂಡ ಅಪರಾಧ ಪತ್ತೆದಳ ತಂಡವನ್ನು ರಚಿಸಲಾಗಿತ್ತು ಎಂದು ಅವರು ಹೇಳಿದರು.

ಪಾಂಡವಪುರದ ಸರಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರೆ ಅಶ್ವಿನಿ ಅವರ ವಸತಿಗೃಹದಲ್ಲಿ ನಡೆಯುತ್ತಿದ್ದ ಹೆಣ್ಣುಭ್ರೂಣ ಹತ್ಯೆ ಪ್ರಕರಣದ ಪೈಕಿ 12 ಮಂದಿಯನ್ನು ಬಂಧಿಸಿದ್ದು, ಉಳಿದ 7 ಮಂದಿ ತಲೆಮರೆಸಿಕೊಂಡಿದ್ದಾರೆ. ಮೇಲುಕೋಟೆ ಠಾಣೆ ಪ್ರಕರಣದ ಮೂರು ಮಂದಿ ನ್ಯಾಯಾಂಗ ಬಂಧನದಲ್ಲಿದ್ದು, 4 ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇತ್ತೀಚೆಗೆ ಬೆಳ್ಳೂರು ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣದ ಮೂರು ಮಂದಿಯನ್ನು ದಸ್ತಗಿರಿ ಮಾಡಿದ್ದು, ಉಳಿದ ಓರ್ವ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದನು. ಮೈಸೂರು ನಗರದ ಉದಯಗಿರಿ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳೀ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಗಂಗಾಧರಸ್ವಾಮಿ ಸೇರಿದಂತೆ ಅಪರಾಧ ಪತ್ತೆದಳ ತಂಡದ ಅಧಿಕಾರಿ, ಸಿಬ್ಬಂದಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X