Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮಂಡ್ಯದ ಸಾಹಿತ್ಯ ಸಮ್ಮೇಳನದಲ್ಲಿ ಸಿ ಟಿ...

ಮಂಡ್ಯದ ಸಾಹಿತ್ಯ ಸಮ್ಮೇಳನದಲ್ಲಿ ಸಿ ಟಿ ರವಿಗೆ ಅವಕಾಶ ಕಲ್ಪಿಸಿದ್ದಕ್ಕೆ ಖಂಡನೆ: ಮಹಿಳಾ ಸಂಘಟನೆಗಳಿಂದ ಗೋ-ಬ್ಯಾಕ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ21 Dec 2024 1:53 PM IST
share
ಮಂಡ್ಯದ ಸಾಹಿತ್ಯ ಸಮ್ಮೇಳನದಲ್ಲಿ ಸಿ ಟಿ ರವಿಗೆ ಅವಕಾಶ ಕಲ್ಪಿಸಿದ್ದಕ್ಕೆ ಖಂಡನೆ: ಮಹಿಳಾ ಸಂಘಟನೆಗಳಿಂದ ಗೋ-ಬ್ಯಾಕ್ ಘೋಷಣೆ

ಮಂಡ್ಯ, ಡಿ.21: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಅಶ್ಲೀಲ ನಿಂದನೆ ಆರೋಪ ಎದುರಿಸುತ್ತಿರುವ ಬಿಜೆಪಿ ಎಂಎಲ್ಸಿ ಸಿ.ಟಿ.ರವಿಗೆ ಮಂಡ್ಯದ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ಕಲ್ಪಿಸಬಾರದು ಎಂದು ವಿರೋಧಿಸಿ ಮಹಿಳಾ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆಯ ಮುಂಭಾಗ ಇರುವ ಬಸವಣ್ಣನ ಪ್ರತಿಮೆ ಎದುರು ವಿವಿಧ ಮಹಿಳಾ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ʼಗೋ ಬ್ಯಾಕ್ ಸಿ.ಟಿ.ರವಿ' ಘೋಷಣೆ ಕೂಗಿ, ಮಹಿಳಾ ಪೀಡಕರಿಗೆ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಅವಕಾಶ ಕಲ್ಪಿಸಬಾರದು ಎಂದು ಆಗ್ರಹಿಸಿದರು.

ಮಂಡ್ಯದ ಸಾಹಿತ್ಯ ಸಮ್ಮೇಳನದಲ್ಲಿ ಎರಡನೇ ದಿನವಾದ ಶನಿವಾರದಂದು 'ಸಾಹಿತ್ಯದಲ್ಲಿ ರಾಜಕೀಯ; ರಾಜಕೀಯದಲ್ಲಿ ಸಾಹಿತ್ಯ' ಎಂಬ ವಿಚಾರಗೋಷ್ಠಿಯಲ್ಲಿ 'ಸಾಹಿತ್ಯ ಕೇಂದ್ರಿತವಾದ ಸೈದ್ಧಾಂತಿಕ-ರಾಜಕೀಯ ನಿಲುವು' ವಿಷಯದ ಬಗ್ಗೆ ಸಿ.ಟಿ.ರವಿ ಪ್ರಬಂಧ ಮಂಡಿಸಲು ಅವಕಾಶ ಕಲ್ಪಿಸಲಾಗಿತ್ತು. ಇದನ್ನು ಖಂಡಿಸಿ ಸಮ್ಮೇಳನದಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು.

ಈ ವೇಳೆಯಲ್ಲಿ ಜನವಾದಿ ಸಂಘಟನೆಯ ದೇವಿ ಅವರು ಮಾತನಾಡಿ, ಮಹಿಳೆಯನ್ನು ಅಶ್ಲೀಲ ಪದಗಳಿಂದ ನಿಂದಿಸಿದ ಸಿ.ಟಿ. ರವಿ ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನದ ಅತಿಥಿಯಾಗಿ ಭಾಷಣ ಮಾಡುವುದನ್ನು ಕೇಳಿಸಿಕೊಳ್ಳಲು ಮಂಡ್ಯದ ಜನ ಕಾದು ಕೂತಿಲ್ಲ. ಅವರ ಭಾಷಣ ಸಾಹಿತ್ಯಾಸಕ್ತರಿಗೆ ಅಗತ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಟಿ.ಎಲ್. ಕೃಷ್ಣಗೌಡ ಮಾತನಾಡಿ, ಮಂಡ್ಯ ಹಲವು ದಾರ್ಶನಿಕರು ಮಹನೀಯರನ್ನು ಕಂಡ ಜಿಲ್ಲೆ. ಕುವೆಂಪು ಅವರ ವೈಚಾರಿಕತೆ, ಸಾಮರಸ್ಯವನ್ನು ಮೈಗೂಡಿಸಿಕೊಂಡು ಸಮಸಮಾಜವನ್ನು ಕಟ್ಟಬೇಕೆಂಬ ಕನಸು ಹೊತ್ತು ಪ್ರೀತಿ ಮಾನವತೆಗಳನ್ನು ಹಂಚುತ್ತಾ ಹೆಸರಾಗಿರುವ ಜಿಲ್ಲೆ, ಅಂಬೇಡ್ಕರ್ ಎಂದರೆ ಈ ನೆಲದ ಉಸಿರು, ಅಸ್ತಿತ್ವ ಎಂದು ಧ್ವನಿ ಎತ್ತರಿಸುವ ಜಿಲ್ಲೆ ಇಂತಹ ಜಾಗಕ್ಕೆ ಕೋಮುಕ್ರಿಮಿ, ಸಂವಿಧಾನ ವಿರೋಧಿ, ಅದರಲ್ಲೂ ಮಹಿಳಾ ವಿರೋಧಿ ಮಾತುಗಳನ್ನಾಡುತ್ತಿರುವ ರವಿಗೆ ಮಂಡ್ಯದ ಸಾಹಿತ್ಯ ಸಮ್ಮೇಳನಕ್ಕೆ ಬರಲು ಅವಕಾಶ ಕೊಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಭರತ್ ರಾಜ್, ಕರ್ನಾಟಕ ಜನಶಕ್ತಿಯ ಕೃಷ್ಣಪ್ರಕಾಶ್, ಸಿದ್ದರಾಜು, ವಕೀಲರಾದ ಲಕ್ಷಣ್, ರಾಮಯ್ಯ, ದಸಂಸ ಕೃಷ್ಣ ಎಂ.ವಿ., ಸ್ವಾಭಿಮಾನಿ ಸಮ ಸಮಾಜದ ನರಸಿಂಹ ಮೂರ್ತಿ, ಸಮಾನ ಮನಸ್ಕರ ಸಂಘಟನೆಯ ಟಿಡಿ ನಾಗರಾಜ್ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X