Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮಂಡ್ಯದಲ್ಲಿ ಮತ್ತೊಂದು ಹೆಣ್ಣು...

ಮಂಡ್ಯದಲ್ಲಿ ಮತ್ತೊಂದು ಹೆಣ್ಣು ಭ್ರೂಣಪತ್ತೆ ಪ್ರಕರಣ ಬೆಳಕಿಗೆ | ಮೂವರ ಬಂಧನ, ಪ್ರಮುಖ ಆರೋಪಿ ಪರಾರಿ

ವಾರ್ತಾಭಾರತಿವಾರ್ತಾಭಾರತಿ16 Aug 2024 6:50 PM IST
share
ಮಂಡ್ಯದಲ್ಲಿ ಮತ್ತೊಂದು ಹೆಣ್ಣು ಭ್ರೂಣಪತ್ತೆ ಪ್ರಕರಣ ಬೆಳಕಿಗೆ | ಮೂವರ ಬಂಧನ, ಪ್ರಮುಖ ಆರೋಪಿ ಪರಾರಿ

ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣಪತ್ತೆ ಮತ್ತು ಹತ್ಯೆ ಪ್ರಕರಣಗಳು ಮುಂದುವರಿದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ತವರು ನಾಗಮಂಗಲ ತಾಲೂಕಿನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಈ ಹಿಂದೆ ಮಂಡ್ಯ ತಾಲೂಕಿನ ಹಾಡ್ಯ-ಹುಳ್ಳೇನಹಳ್ಳಿ ಮಧ್ಯೆ ಇರುವ ಆಲೆಮನೆ ಹಾಗೂ ಪಾಂಡವಪುರದ ಆರೋಗ್ಯ ಇಲಾಖೆ ಸಿಬ್ಬಂದಿ ವಸತಿಗೃಹದ ಬಳಿ ಬೆಳಕಿಗೆ ಬಂದಿದ್ದ ಪ್ರಕರಣಗಳ ಆರೋಪಿ ಅಭಿಷೇಕ್ ಎಂಬಾತ ನಾಗಮಂಗಲದ ಪ್ರಕರಣದಲ್ಲೂ ಭಾಗಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯೊಂದರಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಮನೆಯ ಮಾಲಕನೆನ್ನಲಾದ ಧನಂಜಯ, ಭ್ರೂಣ ಪತ್ತೆಗೆ ಪತ್ನಿಯೊಂದಿಗೆ ಬಂದಿದ್ದ ಹಾನಸಜಿಲ್ಲೆ ರಾಮನಾಥಪುರದ ಮನೋಹರ್ ಹಾಗೂ ಖಾಸಗಿ ನರ್ಸಿಂಗ್ ಡಿ ಗ್ರೂಪ್ ಸಿಬ್ಬಂದಿ ನಾಗಮಣಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಪೊಲೀಸರ ಸಹಕಾರದೊಂದಿಗೆ ಈ ದಾಳಿ ನಡೆಸಿದ್ದು, ಪ್ರಮುಖ ಆರೋಪಿ ಅಭಿಷೇಕ್ ನಾಪತ್ತೆಯಾಗಿದ್ದಾನೆ. ಸ್ಥಳದಲ್ಲಿ ಭ್ರೂಣಹತ್ಯೆ ಕಿಟ್, ಸ್ಕ್ಯಾನಿಂಗ್ ಯಂತ್ರ ಪತ್ತೆಯಾಗಿದೆ ಎಂದು ಡಾ.ಮೋಹನ್ ತಿಳಿಸಿದ್ದಾರೆ.

ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಕಳೆದ 2023ರ ನವೆಂಬರ್‌ನಲ್ಲಿ ಮಂಡ್ಯ ತಾಲೂಕು ಹಾಡ್ಯ ಹುಳ್ಳೇನಹಳ್ಳಿ ನಡುವಿನ ಆಲೆಮನೆಯೊಂದರ ಮೇಲೆ ದಾಳಿ ನಡೆಸಿದಾಗ ಕೊಠಡಿಯಲ್ಲಿ ಅಕ್ರಮವಾಗಿ ಹೆಣ್ಣು ಭ್ರೂಣಲಿಂಗ ಪತ್ತೆ ಕಾರ್ಯ ನಡೆಯುತ್ತಿದ್ದದ್ದು ಬೆಳಕಿಗೆ ಬಂದಿತ್ತು.

ಆಲೆಮನೆಯಲ್ಲಿ ಭ್ರೂಣಲಿಂಗ ಪರೀಕ್ಷೆ ನಡೆಸಿ ನಂತರ, ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಹೆಣ್ಣು ಭ್ರೂಣಹತ್ಯೆ ನಡೆಲಾಗುತ್ತಿತ್ತು. ಈ ಪ್ರಕರಣದಲ್ಲಿ ಹತ್ತು ಮಂದಿಯನ್ನು ಬಂಧಿಸಿದ್ದರು.

ಆಲೆಮನೆ ಪ್ರಕರಣದ ಬೆನ್ನುಹತ್ತಿ ತನಿಖೆ ಮುಂದುವರಿದಿದ್ದಾಗಲೇ ಕಳೆದ ಮೇ ತಿಂಗಳಲ್ಲಿ ಪಾಂಡವಪುರ ಪಟ್ಟಣದ ಆರೋಗ್ಯ ಇಲಾಖೆಯ ವಸತಿಗೃಹದ ಬಳಿಯ ಮನೆಯೊಂದರಲ್ಲೂ ಹೆಣ್ಣುಭ್ರೂಣ ಪತ್ತೆ ಪ್ರಕರಣ ಬೆಳಕಿಗೆ ಬಂದಿತ್ತು. ಅಲ್ಲಿನ ಸರಕಾರಿ ಆಸ್ಪತ್ರೆ ಅಂಬ್ಯುಲೆನ್ಸ್ ಚಾಲಕ ಸೇರಿದಂತೆ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದರು.

ಇದೀಗ ನಾಗಮಂಗಲ ತಾಲೂಕಿನಲ್ಲಿ ಹೆಣ್ಣುಭ್ರೂಣ ಪತ್ತೆಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮೊದಲ ಎರಡು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಎಂಬುವನು ಈ ಪ್ರಕರಣದಲ್ಲೂ ಭಾಗಿಯಾಗಿದ್ದು, ದಾಳಿ ವೇಳೆ ಪರಾರಿಯಾಗಿದ್ದಾನೆ. ಈತನ ಬಂಧನಕ್ಕೆ ಬೆಳ್ಳೂರು ಪೊಲೀಸರು ಬಲೆಬೀಸಿದ್ದಾರೆ ಎಂದು ಡಿಎಚ್‌ಒ ಡಾ.ಮೋಹನ್ ತಿಳಿಸಿದ್ದಾರೆ.

“ನಾಗಮಂಗಲದಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ ನಡೆಯುತ್ತಿರುವ ಬಗ್ಗೆ ಎರಡು ತಿಂಗಳ ಹಿಂದೆಯೇ ಮಾಹಿತಿ ದೊರಕಿತ್ತು. ಆದರೆ, ಸ್ಥಳ ಗೊತ್ತಿರಲಿಲ್ಲ. ದಂಧೆಯನ್ನು ಪತ್ತೆಹಚ್ಚಲು ಯೋಜನೆ ಹಾಕಿಕೊಂಡಿದ್ದೆವು. ಅಂತೆಯೇ ಗುರುವಾರ ತಡರಾತ್ರಿ ಬೆಂಗಳೂರಿನ ಮೇಲಾಧಿಕಾರಿ ಡಾ.ವಿವೇಕ್ ದೊರೆ ನೇತೃತ್ವದಲ್ಲಿ ದಾಳಿ ನಡೆಸಿ ಪ್ರಕರಣ ಬೇಧಿಸಿದ್ದೇವೆ. ಈ ಸಂದರ್ಭದಲ್ಲಿ ಮನೆ ಮಾಲಕ ಧನಂಜಯ ನಮ್ಮ ಇಲಾಖೆಯ ಇಬ್ಬರು ಕಾರು ಚಾಲಕರ ಮೇಲೆ ಕಾರುಹರಿಸಿ ಕೊಲೆ ಮಾಡುವ ಯತ್ನ ನಡೆಸಿದ್ದ. ಆತ ಸೇರಿದಂತೆ ಗರ್ಭಿಣಿ ಪತಿ ಹಾಗೂ ಖಾಸಗಿ ಆಸ್ಪತ್ರೆ ಡಿ ಗ್ರೂಪ್ ಮಹಿಳಾ ಸಿಬ್ಬಂದಿಯನ್ನು ಬಂಧಿಸಿದ್ದೇವೆ. ಸ್ಕ್ಯಾನಿಂಗ್ ಯಂತ್ರ, ಅಬಾರ್ಷನ್ ಕಿಟ್ ವಶಪಡಿಸಿಕೊಂಡಿದ್ದೇವೆ. ಮೊದಲ ಎರಡು ಪ್ರಕರಣಗಳ ಆರೋಪಿಯಾದ ಅಭಿಷೇಕ್ ಸ್ಥಳದಿಂದ ಪರಾರಿಯಾಗಿದ್ದಾನೆ.”

-ಡಾ.ಮೋಹನ್, ಡಿಎಚ್‌ಒ, ಮಂಡ್ಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X