Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ...

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆ ಮಾಂಸಾಹಾರವನ್ನೂ ನೀಡಬೇಕು : ವಕೀಲರ ಒಕ್ಕೂಟ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ13 Dec 2024 10:56 PM IST
share
Photo of Press meet

ಮಂಡ್ಯ : ಮಂಡ್ಯದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡೂ ಬಗೆಯ ಆಹಾರವನ್ನು ನೀಡುವ ಮೂಲಕ ಸಂವಿಧಾನದ ಆಶಯವನ್ನು ಎತ್ತಿಹಿಡಿದು ಜಿಲ್ಲಾಡಳಿತ, ಸಮ್ಮೇಳನದ ಸ್ವಾಗತ ಸಮಿತಿ ಮತ್ತು ಸರಕಾರ ಮಾದರಿಯಾಗಬೇಕು ಎಂದು ಅಖಿಲ ಭಾರತ ವಕೀಲರ ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಟಿ.ವಿಶ್ವನಾಥ್ ಒತ್ತಾಯಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಇರುವಂತೆ ನೋಡಿಕೊಳ್ಳಲಿ. ಅವರು ತೆಗೆದುಕೊಳ್ಳುವ ದಿಟ್ಟ ನಿರ್ಧಾರ ಕೋಮು ಸೌಹಾರ್ದ ಕರ್ನಾಟಕವಾಗಿ ಉಳಿಯಲು ಮತ್ತು ಬೆಳೆಯಲು ಇಂಧನವನ್ನು ಒದಗಿಸುತ್ತದೆ ಎಂದರು.

ಜನರ ತೆರಿಗೆ ಹಣದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರವನ್ನಷ್ಟೇ ಕೊಟ್ಟು, ಮಾಂಸಾಹಾರವನ್ನು ಸಂಪೂರ್ಣವಾಗಿ ನಿಷೇಧಿಸುವುದು ಈ ದೇಶದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಸಂವಿಧಾನಕ್ಕೆ ಎಸಗುವ ಅಪಮಾನವಾಗಿರುತ್ತದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡಲು ಸಂವಿಧಾನದ ಆರ್ಟಿಕಲ್ 51ಎ(ಎಚ್)ನಲ್ಲಿ ಅವಕಾಶವಿದೆ ಎಂದು ಅವರು ಹೇಳಿದರು.

ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬೇಕು ಎಂದು ಎದ್ದಿರುವ ಚಳುವಳಿಯನ್ನು ಬಗ್ಗುಬಡಿಯಲು ಕೋಮು ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ‘ಇದ್ಯಾವುದೋ ಬರಗೆಟ್ಟ ಬಾಡೂಟದ ಹೋರಾಟ, ತುಂಡೈಕಳ ಚಳುವಳಿ’ ಎಂದು ಬಿಂಬಿಸಲು ಯತ್ನಿಸುತ್ತಿವೆ. ಪ್ರಜ್ಞಾವಂತ ಜನರು ಈ ಪಿತೂರಿಗೆ ಕಿವಿಗೊಡಬಾರದು. ನಮ್ಮ ಸಂಘಟನೆ ಚಳವಳಿಗೆ ನೈತಿಕ ಬೆಂಬಲ ನೀಡುತ್ತಿದೆ ಎಂದು ಅವರು ತಿಳಿಸಿದರು.

ಈ ದೇಶದ ಶೇಖಡ 80ಕ್ಕೂ ಹೆಚ್ಚು ಜನ ಮಾಂಸಾಹಾರಿಗಳಾಗಿದ್ದು ಅವರೆಂದೂ ಸಸ್ಯಾಹಾರಿಗಳನ್ನು ನಿಕೃಷ್ಟವಾಗಿ ಕಂಡದ್ದಿಲ್ಲ. ಆದರೆ, ಆಹಾರದಲ್ಲಿ ಬೇಧವೆಣಿಸುವ ಮೂಲಕ ಸಸ್ಯಾಹಾರವನ್ನು ವಿಭಜಿಸಿ, ಕೋಮುವಾದ ಮತ್ತಿತರ ನೇತಾರರು ಬಹುಸಂಖ್ಯಾತರನ್ನು ಹಣಿಯುವ ಬಡಿಗೆಯನ್ನಾಗಿಸಿ ಪರಿವರ್ತಿಸಿಕೊಂಡಿರುವುದು ನಿಚ್ಚಳ ವಾಸ್ತವ ಎಂದು ಅವರು ಅಭಿಪ್ರಾಯಪಟ್ಟರು.

ಒಕ್ಕೂಟದ ಕಾರ್ಯದರ್ಶಿ ಚಂದನ್ ಮಾತನಾಡಿ, ಮದ್ರಾಸ್ ಹೈಕೋರ್ಟಿನ ವಿಭಾಗೀಯ ಪೀಠ ‘ಪಳನಿ ದೇವಸ್ಥಾನದ ಬೆಟ್ಟದ ಸುತ್ತ’ ಮಾಂಸಾಹಾರ ನಿಷೇಧಿಸಲು ಹಾಕಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾ ಮಾಡಿ ಕೊಟ್ಟಿರುವ ತೀರ್ಪಿನಲ್ಲಿ ‘ಮಾಂಸಾಹಾರ – ಸಸ್ಯಾಹಾರ ಎಂದು ತಾರತಮ್ಯ ಮಾಡಲು ಈ ದೇಶದಲ್ಲಿನ ಯಾವ ಕಾನೂನುಗಳು ಮತ್ತು ಸಂವಿಧಾನ ಸಮ್ಮತಿಸುವುದಿಲ್ಲ’ ಎಂದು ಸ್ಪಷ್ಟವಾಗಿ ಹೇಳಿರುವುದನ್ನು ಈ ಸಂದರ್ಭದಲ್ಲಿ ನೆನೆಯಬೇಕಾಗಿದೆ ಎಂದರು.

ವಕೀಲರಾದ ಜೆ.ರಾಮಯ್ಯ, ಆಕಾಶ್, ಸುಚೀಂದ್ರ, ಚೇತನ್ ಹಾಗೂ ಕಿಶೋರ್ ಉಪಸ್ಥಿತರಿದ್ದರು.

“ಸಂವಿಧಾನ ಆಹಾರ ಹಕ್ಕಿನಲ್ಲಿ ಯಾವುದೇ ತಾರತಮ್ಯ ಮಾಡುವಂತಿಲ್ಲ. ನೆಲದ ಯಾವ ಕಾನೂನುಗಳು ಕೂಡ ಸಸ್ಯಾಹಾರ ಶ್ರೇಷ್ಠ ಮತ್ತು ಮಾಂಸಾಹಾರ ಕನಿಷ್ಠ ಎಂದು ಹೇಳಿಲ್ಲ. ಹೀಗಿರುವಾಗ ಬಹುಸಂಖ್ಯಾತರ ಮೇಲೆ ಸಸ್ಯಾಹಾರದ ಹೇರಿಕೆ ಯಾಕೆ? ಮಾಂಸಾಹಾರವನ್ನು ಸಮ್ಮೇಳನದಲ್ಲಿ ನಿμÉೀಧಿಸಿರುವುದು ಯಾಕೆ? ಬಹುಸಂಖ್ಯಾತರ ತೆರಿಗೆ ಹಣವನ್ನು ಪ್ರಭುತ್ವ ಇಂತಹ ಸಮ್ಮೇಳನಗಳನ್ನು ನಡೆಸಲು ವಿನಿಯೋಗಿಸುತ್ತಿಲ್ಲವೇ? ಹಾಗಿದ್ದ ಮೇಲೆ ಈ ತಾರತಮ್ಯ ಯಾಕೆ?”

-ಬಿ.ಟಿ.ವಿಶ್ವನಾಥ್, ಅಖಿಲ ಭಾರತ ವಕೀಲರ ಒಕ್ಕೂಟದ ಮಂಡ್ಯ ಜಿಲ್ಲಾಧ್ಯಕ್ಷ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X