Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ʼಒಳಮೀಸಲಾತಿʼ ದಲಿತರ ಒಡಲಿನ ದೊಡ್ಡ ದೋಷ...

ʼಒಳಮೀಸಲಾತಿʼ ದಲಿತರ ಒಡಲಿನ ದೊಡ್ಡ ದೋಷ ತೋರಿಸಿತು : ಕೋಟಿಗಾನಹಳ್ಳಿ ರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ24 Aug 2025 11:55 PM IST
share
ʼಒಳಮೀಸಲಾತಿʼ ದಲಿತರ ಒಡಲಿನ ದೊಡ್ಡ ದೋಷ ತೋರಿಸಿತು : ಕೋಟಿಗಾನಹಳ್ಳಿ ರಾಮಯ್ಯ

ಮೈಸೂರು : ಒಳಮೀಸಲಾತಿಯ ಪ್ರಸಕ್ತ ವಿದ್ಯಮಾನಗಳು ದಲಿತರ ಒಡಲಿನಲ್ಲಿ ದೊಡ್ಡ ದೋಷ ತೋರಿಸಿತು. ಈ ಒಡಲು ಮಮಕಾರದಿಂದ ಕೂಡಿಲ್ಲ ಎಂಬುದನ್ನು ನಿರೂಪಿಸಿತು ಎಂದು ಸಾಹಿತಿ, ಸಂಸ್ಕೃತಿ ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.

ನಗರದ ರಂಗಾಯಣದ ಶ್ರೀರಂಗ ಸಭಾಂಗಣದಲ್ಲಿ ಜೋಳಿಗೆ ಪ್ರಕಾಶನ, ಚಾಮರಾಜನಗರದ ಅಭ್ಯಾಸಿ ಟ್ರಸ್ಟ್ ಸಹಯೋಗದಲ್ಲಿ ರವಿವಾರ ಆಯೋಜಿಸಿದ್ದ ಮಂಜು ಕೋಡಿಉಗನೆ ಅವರ ‘ಬೋಧಿ ವೃಕ್ಷದ ಹಾಡು’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಲಿತರು 50 ವರ್ಷ ಒಂದೇ ಛತ್ರಿಯಡಿ ಹೋರಾಡಿದರು. ಆದರೀಗ ಅದು ಬೇರೆ ದಿಕ್ಕಿನ ಕಡೆ ಚಲಿಸುತ್ತಿದೆ. ನಾವು ಇಷ್ಟು ದಿನ ಅಂದುಕೊಂಡಿರುವುದೆಲ್ಲವೂ ಭ್ರಮೆ ಎಂದು ಈಗ ಅನಿಸುತ್ತಿದೆ. ದಲಿತರದ್ದು ಕಲ್ಮಷವಿಲ್ಲದ ಒಡಲು ಅಲ್ಲ. ತಾಯಿ ರೀತಿಯ ಮಡಿಲೂ ಅಲ್ಲ. ಈ ಹಿಂದೆ ತುತ್ತು ಅನ್ನಕ್ಕೂ ಗತಿ ಇರಲಿಲ್ಲ. ಈಗ ಸಿಕ್ಕಿರುವ ತುತ್ತು ಅನ್ನವನ್ನು ಹಂಚಿಕೊಳ್ಳಲಾರದಂತಹ ಸ್ಥಿತಿ ತಲುಪಿದ್ದೇವೆ. ಇದು ದುರಂತವೇ ಸರಿ ಎಂದು ಕಳವಳ ವ್ಯಕ್ತಪಡಿಸಿದರು.

ಒಳಮೀಸಲಾತಿಯಲ್ಲಿ ಮೇಲುಗೈ ಸಾಧಿಸಿರುವ ಒಂದು ಸಮುದಾಯ ವಿಜಯೋತ್ಸವ ಆಚರಿಸಿ ಸಿಎಂ ಭಾವಚಿತ್ರಕ್ಕೆ ಕ್ಷೀರ ಅಭಿಷೇಕ ಮಾಡಿದೆ. ಇನ್ನೊಂದೆಡೆ, ಕೇವಲ 8 ಜನರಿರುವ ಜಾತಿಯ ಮಹಿಳೆಯೊಬ್ಬರು ಪ್ರಭುತ್ವ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ. ಇವೆರಡು ಚಿತ್ರಗಳು ಕಾಡುತ್ತಿವೆ. ಇದೀಗ ನಾಲಿಗೆ ಸತ್ತು ಹೋಗಿದೆ. ಒಳಮೀಸಲಾತಿ ಬೆಳವಣಿಗೆಗಳು ದಲಿತರ ಒಡಲು ನಾವು ಅಂದುಕೊಂಡಂತಿಲ್ಲ. ಇಷ್ಟು ದಿನ ನಾವುಗಳೆಲ್ಲ ಭ್ರಮೆಯಲ್ಲಿದ್ದವು ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಪತ್ನಿಗೆ ಬರೆದ ಪತ್ರದಲ್ಲಿ ‘ಬಲಗೈಯಲ್ಲಿ ಕಣ್ಣೀರು ಒರೆಸಿಕೊಂಡು, ಎಡಗೈಯಲ್ಲಿ ಬರೆಯುತ್ತಿವೆ’ ಎಂದು ಮಾರ್ಮಿಕವಾಗಿ ಹೇಳಿದ್ದರು. ಅದೇ ಸ್ಥಿತಿ ಇದೀಗ ನಿರ್ಮಾಣವಾಗಿದೆ. 50 ವರ್ಷ ದಲಿತ ಪ್ರಜ್ಞೆ, ಸಂವೇದನೆ ಈಗಿನ ಸಮಕಾಲಿನಲ್ಲಿ ಬೇರೆ ಏನ್ನನ್ನೋ ಬೇಡುತ್ತಿದೆ ಎಂದು ಹೇಳಿದರು.

ಸೃಜನಶೀಲ ಕೃತಿಯ ಪ್ರಾಣವೇ ಸಮಕಾಲಿನತೆ. ಅದುವೇ ಅಳತೆಗೋಲು. ಈ ಕೃತಿ ಸಮಕಾಲಿನವಾಗಿದೆ. ಸಹ ಅನೇಕ ಪ್ರಶ್ನೆಗಳನ್ನು ಹಾಕುತ್ತದೆ. ವಿವಿಧ ವಿಷಯಗಳ ಕುರಿತು ಒಳನೋಟವನ್ನೂ ಹೊಂದಿದೆ ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕ ಬಿ.ಮಹೇಶ್ ಹರವೆ, ವಿಮರ್ಶಕ ವಿ.ಎಲ್.ನರಸಿಂಹಮೂರ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿಯ ಸದಸ್ಯ ಡಾ.ರವಿಕುಮಾರ್ ಬಾಗಿ, ಕೃತಿ ಲೇಖಕ ಮಂಜು ಕೋಡಿಉಗನೆ, ಅಭ್ಯಾಸಿ ಟ್ರಸ್‌ನ ಅಧ್ಯಕ್ಷ ಕಿರಣ್ ಗಿರ್ಗಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X