Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ʼದಸರಾʼ ಗಜಪಡೆಗಳ ತೂಕ ಪರೀಕ್ಷೆ :...

ʼದಸರಾʼ ಗಜಪಡೆಗಳ ತೂಕ ಪರೀಕ್ಷೆ : ಸುಗ್ರೀವ ಬಲಶಾಲಿ

ವಾರ್ತಾಭಾರತಿವಾರ್ತಾಭಾರತಿ26 Aug 2025 11:47 PM IST
share
ʼದಸರಾʼ ಗಜಪಡೆಗಳ ತೂಕ ಪರೀಕ್ಷೆ : ಸುಗ್ರೀವ ಬಲಶಾಲಿ

ಮೈಸೂರು, ಆ.26 : ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಭಾಗವಹಿಸಿರುವ 14 ಆನೆಗಳ ಪೈಕಿ ದೇಹತೂಕದಲ್ಲಿ ಸುಗ್ರೀವ ಅಗ್ರಸ್ಥಾನದಲ್ಲಿದ್ದರೆ, ಶ್ರೀಕಂಠ ದ್ವಿತೀಯ ಸ್ಥಾನದಲ್ಲಿದ್ದಾನೆ.

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯುವ ವೈಭವಯುತ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ 14 ಆನೆಗಳನ್ನು ಮೈಸೂರಿಗೆ ಕರೆತರಲಾಗಿದೆ. ಮೊದಲ ತಂಡದ 9 ಆನೆಗಳ ಈಗಾಗಲೇ ನಗರದಲ್ಲಿ ತಾಲೀಮು ಮಾಡುತ್ತಿದ್ದು, ಎರಡನೇ ತಂಡದಲ್ಲಿ 5 ಆನೆಗಳು ಸೋಮವಾರ ಮೈಸೂರಿಗೆ ಬಂದವು. ಮಂಗಳವಾರ ಎರಡನೇ ತಂಡದ ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು.

ಸುಗ್ರೀವ 5545 ಕೆ.ಜಿ. ತೂಕದೊಂದಿಗೆ ಇಡೀ ದಸರಾ ಗಜಪಡೆಯಲ್ಲೇ ಅತಿ ತೂಕದ ಆನೆ ಎಂಬ ಹೆಗ್ಗಳಿಕೆ ಗಳಿಸಿದ. ದೈತ್ಯದೇಹಾಕೃತಿ ಹೆಸರುವಾಸಿಯಾದ ಶ್ರೀಕಂಠ, ತೂಕ ಪರೀಕ್ಷೆಯಲ್ಲಿ 5540 ಕೆ.ಜಿ. ತೂಕದೊಂದಿಗೆ ದ್ವಿತೀಯ ಸ್ಥಾನ ಗಳಿಸಿದ. ಗೋಪಿ 4990 ಕೆ.ಜಿ. ತೂಕವಿದ್ದಾನೆ. ಉಳಿದಂತೆ ಹೆಣ್ಣಾನೆ ರೂಪಾ 3320 ಕೆ.ಜಿ. ಇದ್ದರೆ, ಇಡೀ ಗಜ ಪಡೆಯ ಕಿರಿಯ ಆನೆ ಹೇಮಾವತಿ 2440 ಕೆ.ಜಿ. ತೂಕವಿದ್ದಾಳೆ.

ಮೊದಲ ತಂಡದ ಆನೆಗಳ ಪೈಕಿ ಭೀಮ 5,465 ಕೆ.ಜಿ. ತೂಗುವ ಮೂಲಕ ಬಲುಭಾರದ ಆನೆ ಎನಿಸಿಕೊಂಡಿದ್ದ. ಗಜಪಡೆಯ ಕ್ಯಾಪ್ಟನ್ ಹಾಗೂ ಅಂಬಾರಿ ಹೊರುವ ಪ್ರಮುಖ ಆನೆ ಅಭಿಮನ್ಯು 5,360 ಕೆ.ಜಿ. ತೂಕ ಇದ್ದಾನೆ.

ತಾಲೀಮು ಮುಂದುವರಿಕೆ: ಅರಮನೆ ಅಂಗಳದಿಂದ ಹೊರಟ ಆನೆಗಳು ಆಲ್ಬರ್ಟ್ ವಿಕ್ಟರ್ ರಸ್ತೆ, ನ್ಯೂ ಸಯ್ಯಾಜಿರಾವ್ ರಸ್ತೆ ಮಾರ್ಗವಾಗಿ ಸಾಗಿ ಧನ್ವಂತ್ರಿ ರಸ್ತೆಯ ಮೂಲಕ ಸಾಯಿರಾಮ್ ವೇಯಿಂಗ್ ಬ್ರಿಡ್ಜ್‌ಗೆ ಬಂದವು. ನಡಿಗೆ ತಾಲೀಮಿನ ಭಾಗವಾಗಿ ಎಲ್ಲ 14 ಆನೆಗಳೂ ವೇಯಿಂಗ್ ಬ್ರಿಡ್ಜ್‌ಗೆ ಬಂದಿದ್ದವು. ಆದರೆ ಹೊಸದಾಗಿ ಬಂದಿರುವ 5 ಆನೆಗಳನ್ನು ಮಾತ್ರ ತೂಕ ಪರೀಕ್ಷೆ ಮಾಡಲಾಯಿತು. ಪರೀಕ್ಷೆ ಬಳಿಕ ಆನೆಗಳು ಅದೇ ಮಾರ್ಗದಲ್ಲಿ ತಾಲೀಮು ಮುಂದುವರಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X