Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮಂಟೇಸ್ವಾಮಿ ಪ್ರಾಧಿಕಾರ ರಚನೆಯಾಗಬೇಕು :...

ಮಂಟೇಸ್ವಾಮಿ ಪ್ರಾಧಿಕಾರ ರಚನೆಯಾಗಬೇಕು : ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ19 Nov 2025 12:23 AM IST
share
ಮಂಟೇಸ್ವಾಮಿ ಪ್ರಾಧಿಕಾರ ರಚನೆಯಾಗಬೇಕು : ಪುರುಷೋತ್ತಮ ಬಿಳಿಮಲೆ

ಮೈಸೂರು : ಜಾನಪದ ಕಲೆಗಳ ಕೇಂದ್ರಿಕೃತವಾದ ದಾಖಲೆ ರೂಪಿಸುವುದು ಇಂದಿನ ಅಗತ್ಯವಾಗಿದೆ. ಈ ದಾಖಲೆಯಲ್ಲಿ ಕಲಾವಿದರ ಕಲೆ, ಬದುಕು, ಜೀವನವನ್ನು ತಿಳಿಸಬೇಕು. ಜೊತೆಗೆ ಮಂಟೇಸ್ವಾಮಿ ಪರಂಪರೆ ಹಾಡು ಜಾಗತಿಕವಾಗಿ ಮನ್ನಣೆ ಪಡೆಯುತ್ತಿದ್ದು, ಮಂಟೇಸ್ವಾಮಿ ಪ್ರಾಧಿಕಾರ ರಚನೆಯಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.

ನಗರದ ಮಾನಸ ಗಂಗೋತ್ರಿಯ ಪ್ರಸಾರಾಂಗದ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಮೈಸೂರು ವಿವಿ ಪ್ರಸಾರಾಂಗದ ವತಿಯಿಂದ ನಡೆದ ‘ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು’ ಮತ್ತು ‘ನಾವು ಕೂಗುವಾ ಕೂಗು’ ಕೃತಿಗಳ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಇಂದಿನ ಪೀಳಿಗೆ ಅಂತರ್ಜಲದ ಬಳಕೆ ಹೆಚ್ಚು ಮಾಡಲಿದೆ. ಈ ನಿಟ್ಟಿನಲ್ಲಿ ನಾವು ಡಿಜಟಿಲೀಕರಣ ಮಾಡಿದರೆ ಪೀಳಿಗೆಯಿಂದ ಪೀಳಿಗೆ ತಲುಪಿಸಬಹುದು. ಪುಸ್ತಕಗಳ ದಾಖಲು ಮಾಡುವ ಜೊತೆಗೆ ಡಿಜಿಟಿಲೀಕರಣ ಕೂಡ ಮಾಡಬೇಕು. ಜಾನಪದ ವಿಶ್ವವಿದ್ಯಾನಿಲಯ, ಪ್ರಸಾರಾಂಗದಿಂದ ಈ ಕೆಲಸವಾಗಬೇಕು. ದಾಖಲೆ ನಿರ್ಮಿಸುವ ಕುರಿತು ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಯಕ್ಷಗಾನ ಮತ್ತು ಭೂತರಾಧನೆ ಬಹಳ ದೊಡ್ಡ ಕಲೆಗಳು. ಪ್ರಸ್ತುತ ಸಂದರ್ಭದಲ್ಲಿ ಮುಂದಿನ 28 ವರ್ಷಗಳಿಗೆ ಆಟವೂ ಬುಕ್ ಆಗಿದ್ದು, ಅಷ್ಟೊಂದು ಜನಪ್ರಿಯತೆ ಪಡೆದುಕೊಂಡಿದೆ. ಒಟ್ಟಾರೆ 750 ಭೂತಗಳಿದ್ದು, ಈ ಭೂತ ಕಥನಗಳ ಕಾವ್ಯವೂ ಇದೆ. ಆದರೆ, ಪ್ರತಿಯೊಂದು ಭೂತಕ್ಕೂ ಒಬ್ಬೊಬ್ಬರು ಕಲಾವಿದರಿದ್ದಾರೆ. ಭೂತಾರಾಧನೆಯು ಕಲಾವಿದನ ಆತ್ಮಚರಿತ್ರೆಯ ಕಾದಂಬರಿಯಾಗಿ ಅಥವಾ ಕೃತಿಯಾಗಿ ಪ್ರಕಟವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸಾರಾಂಗ ನಿರ್ದೇಶಕ ಪ್ರೊ.ಎಂ.ನಂಜಯ್ಯ ಹೊಂಗನೂರು, ಮೈಸೂರು ವಿವಿಯ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

ನೀಲಗಾರರ ಆತ್ಮಕಥನ ಪ್ರಕಟಿಸುವುದು ಮತ್ತು ಮಂಟೇಸ್ವಾಮಿ ಕಾವ್ಯವನ್ನು ಮುಂದಿನ ಪೀಳಿಗೆಗೆ ಪೂರ್ತಿ ಉಳಿಸಬೇಕು ಎನ್ನುವ ಯೋಜನೆಗಳನ್ನು ಕೈಗೊಂಡು ಕಲಾವಿದರು ಮತ್ತು ಲೇಖಕರನ್ನು ಒಟ್ಟಿಗೆ ಸೇರಿಸಲು ನಿರ್ಧರಿಸಿ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ ಅವರ ಬಳಿ ಹೋಗಿ ಅತಿಥಿ ಗೃಹ ನೀಡುವಂತೆ ಮನವಿ ಮಾಡಿದೆ. ನನ್ನ ಮನವಿಗೆ ಸಮ್ಮತಿಸಿದ ಅವರು ಅತಿಥಿ ಗೃಹದ ಜೊತೆಗೆ ಸಕಲ ಸೌಲಭ್ಯ ನೀಡಿದರು. ಹೀಗಾಗಿ ಅವರಿಗೆ ಸುತ್ತೂರು ಶ್ರೀಗಳಿಗೆ ಕೃತಜ್ಞತೆ ತಿಳಿಸುತ್ತೇನೆ. ಈ ಎರಡು ಪುಸ್ತಕಗಳು ಆಗಲು ಮೂಲ ಕಾರಣ ಶ್ರೀ ಶಿವರಾತ್ರೀಶ್ವರ ಸ್ವಾಮೀಜಿ.

-ಕೃಷ್ಣಮೂರ್ತಿ ಹನೂರು, ಕೃತಿಗಳ ಸಂಪಾದಕರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X