Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಜಗತ್ತಿನ ಪ್ರತಿಷ್ಠಿತ ಬೂಕರ್ ಪ್ರಶಸ್ತಿ...

ಜಗತ್ತಿನ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಕನ್ನಡಕ್ಕೆ ಬರಲೆಂದು ಪ್ರಾರ್ಥಿಸಿ : ಬಾನು ಮುಷ್ತಾಕ್

ವಾರ್ತಾಭಾರತಿವಾರ್ತಾಭಾರತಿ30 April 2025 11:56 PM IST
share
ಜಗತ್ತಿನ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಕನ್ನಡಕ್ಕೆ ಬರಲೆಂದು ಪ್ರಾರ್ಥಿಸಿ : ಬಾನು ಮುಷ್ತಾಕ್

ಮೈಸೂರು : ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಕನ್ನಡಕ್ಕೆ ಬರಲೆಂದು ಪ್ರಾರ್ಥಿಸುವಂತೆ ಬೂಕರ್ ಪ್ರಶಸ್ತಿಯ ಅಂತಿಮ ಸುತ್ತಿಗೆ ಪ್ರವೇಶಿಸಿರುವ ಕತೆಗಾರ್ತಿ ಬಾನು ಮುಷ್ತಾಕ್ ಹೇಳಿದ್ದಾರೆ.

ಅಭಿರುಚಿ ಪ್ರಕಾಶನ ಮತ್ತು ಮೈಸೂರು ಬುಕ್ ಕ್ಲಬ್ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ದಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಾಹಿತಿ ಬಾನು ಮುಷ್ತಾಕ್ ಅವರ ಹಸೀನಾ ಮತ್ತು ಇತರ ಕಥೆಗಳು ಪರಿಷ್ಕೃತ ಕೃತಿ ಲೋಕಾರ್ಪಣೆ ಹಾಗೂ 2025ರ ಬೂಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಪ್ರಯುಕ್ತ ಸಂವಾದದಲ್ಲಿ ಮಾತನಾಡಿದರು.

ಈ ವರ್ಷದ ಬೂಕರ್‌ಗೆ 159 ಪ್ರಕಟನೆೆಗಳನ್ನು ಆಯ್ಕೆಗೊಂಡಿದ್ದವು. ಅದರಲ್ಲಿ ದೀಪಾ ಬಸ್ತಿ ಅನುವಾದಿಸಿರುವ ನನ್ನ 12 ಕತೆಗಳ ಕೃತಿಯೂ ಇದೆ. 6 ತೀರ್ಪುಗಾರರು 6 ತಿಂಗಳು ಅಧ್ಯಯನ ಮಾಡಿ ಅಂತಿಮ ಸುತ್ತಿಗೆ ನನ್ನ ಕೃತಿಯನ್ನು ಆಯ್ಕೆ ಮಾಡಿದ್ದಾರೆ. ಮೇ 20ರಂದು ಲಂಡನ್‌ನಲ್ಲಿ ಬೂಕರ್ ಪ್ರಶಸ್ತಿ ಘೋಷಣೆಯಾಗಲಿದೆ. ಇದಕ್ಕೆ ಕನ್ನಡಿಗರು ಮತ್ತು ಭಾರತದ ಜನತೆ ಪ್ರಾರ್ಥಿಸಬೇಕೆಂದು ಕೋರಿದರು.

ಅನುವಾದ ಮಾಡುವಿರಾ?: 2022ರಲ್ಲಿ ಹಿಜಾಬ್ ಕುರಿತು ಮುಲಾಜಿಲ್ಲದೆ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದೆ. ಸಂದರ್ಶನ ಮಾಡಲು ಬಂದ ಬಸವ ಬಿರಾದರ್ ಎಂಬ ಪತ್ರಕರ್ತರನ್ನು ನನ್ನ ಕತೆಗಳನ್ನು ಇಂಗ್ಲಿಷ್‌ಗೆ ಅನುವಾದಿಸುವಂತೆ ಕೇಳಿಕೊಂಡೆ. ಅವರು ದೀಪಾ ಬಸ್ತಿ ಹೆಸರು ಸೂಚಿಸಿದರು. ಅವರಿಗೆ ನನ್ನ ಕತೆಗಳನ್ನು ಅನುವಾದಿಸುವಿರಾ ಎಂದು ಕೇಳಿದೆ? ಬಳಿಕ ಬೇರೊಂದು ಲೋಕವೇ ತೆರೆದುಕೊಂಡಿತು ಎಂದರು.

ನನ್ನ ಕತೆಯನ್ನು ಗಿರೀಶ್ ಕಾಸರವಳ್ಳಿ ಅವರು 2004ರಲ್ಲಿ ಸಿನೆಮಾ ಮಾಡುವಾಗಲೂ ಸಂಭ್ರಮ ಇತ್ತು. ನಿಮ್ಮ ಕತೆಯನ್ನು ಸಿನೆಮಾ ಮಾಡುತ್ತೇನೆಂದು ಗಿರೀಶ್ ಕಾಸರವಳ್ಳಿ ಅವರು ಹೇಳುವ ಮಾತುಗಳನ್ನು ರಿಹರ್ಸಲ್ ಮಾಡಿಕೊಳ್ಳುತ್ತಿದೆ. 2005ರಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ ಬಂದಿತು ಎಂದು ಸ್ಮರಿಸಿದರು.

ಪ್ರಕಾಶಕ ಅಭಿರುಚಿ ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಬೂಕರ್ ಪ್ರಶಸ್ತಿಯ ಅಂತಿಮ ಸುತ್ತಿಗೆ ಬಾನು ಮುಷ್ತಾಕ್ ಅವರ ಕೃತಿ ಆಯ್ಕೆಗೊಂಡಿರುವುದು ಕನ್ನಡದ ಹಿರಿಮೆ ಮತ್ತು ಗರಿಮೆಯನ್ನು ಹೆಚ್ಚಿಸಿದೆ ಎಂದು ನುಡಿದರು.

ಲೇಖಕಿ ಪ್ರೀತಿ ನಾಗರಾಜ್ ಸಂವಾದ ನಿರ್ವಹಿಸಿದರು. ವಿಶ್ರಾಂತ ಕುಲಪತಿ ಸಬೀಹಾ ಭೂಮಿಗೌಡ, ಹಿರಿಯ ಲೇಖಕಿ ಪದ್ಮ ಶ್ರೀರಾಮ, ಶುಭ ಸಂಜಯ್ ಅರಸ್ ಇದ್ದರು.

ನೊಬೆಲ್ ನಂತರ ಪ್ರಪಂಚದ ಎರಡನೇ ಅತಿ ದೊಡ್ಡ ಪ್ರಶಸ್ತಿ ಬೂಕರ್. ನೊಬೆಲ್ ಜೀವಮಾನ ಸಾಧನೆಗೆ ಕೊಡಲಾಗುತ್ತದೆ. ಬೂಕರ್ ಸಾಹಿತ್ಯ ಕೃತಿಗೆ ನೀಡಲಾಗುತ್ತಿದೆ. ಮ್ಯಾನ್ ಬೂಕರ್, ಇಂಟರ್‌ನ್ಯಾಷನಲ್ ಬೂಕರ್ 2 ವಿಭಾಗದಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಇಂಟರ್‌ನ್ಯಾಷನಲ್ ಬೂಕರ್‌ಗೆ ಜಗತ್ತಿನ ಯಾವುದೇ ಭಾಗದಲ್ಲಿ ಯಾವುದೇ ಭಾಷೆಯಲ್ಲಿ ಬರೆದು ಇಂಗ್ಲಿಷ್‌ಗೆ ಅನುವಾದಗೊಂಡ ಕೃತಿಯನ್ನು ಸಲ್ಲಿಸಬಹುದಾಗಿದೆ.

-ಬಾನು ಮುಷ್ತಾಕ್, ಕತೆಗಾರ್ತಿ

Tags

Banu Mushtaq
share
ವಾರ್ತಾಭಾರತಿ
ವಾರ್ತಾಭಾರತಿ
Next Story
X