Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಪ್ರಧಾನಿ ನರೇಂದ್ರ ಮೋದಿ ಮುಂದೊಂದು ದಿನ...

ಪ್ರಧಾನಿ ನರೇಂದ್ರ ಮೋದಿ ಮುಂದೊಂದು ದಿನ ನನ್ನನ್ನು ಅಭಿನಂದಿಸುತ್ತಾರೆ ಎಂಬ ನಂಬಿಕೆ ಇದೆ : ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್

ವಾರ್ತಾಭಾರತಿವಾರ್ತಾಭಾರತಿ5 July 2025 8:34 PM IST
share
ಪ್ರಧಾನಿ ನರೇಂದ್ರ ಮೋದಿ ಮುಂದೊಂದು ದಿನ ನನ್ನನ್ನು ಅಭಿನಂದಿಸುತ್ತಾರೆ ಎಂಬ ನಂಬಿಕೆ ಇದೆ : ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್

ಮೈಸೂರು : ಅಂತರ್‌ ರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಂದೊಂದು ದಿನ ನನ್ನನ್ನು ಅಭಿನಂದಿಸುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನನ್ನ ಸಾಹಿತ್ಯದ ಮೂಲಕ ಭರವಸೆಯುಳ್ಳ ಪಾತ್ರಗಳನ್ನೆ ನಿರ್ಮಾಣ ಮಾಡಿದ್ದೇನೆ. ಯಾರೂ ನಿರಾಶೆಗೆ ಹೋಗಲ್ಲ. ಆಶಾವಾದದ ಪಾತ್ರಗಳನ್ನೇ ಸೃಷ್ಟಿ ಮಾಡಿದ್ದೇನೆ. ಅಂತಹದೇ ಆತ್ಮವಿಶ್ವಾಸದ ಭರವಸೆಯನ್ನು ನಾನು ಹೊಂದಿದ್ದೇನೆ. ಪ್ರಧಾನಿ ಸೇರಿದಂತೆ ಯಾರೂ ನನಗೆ ಅಭಿನಂದನೆ ಸಲ್ಲಿಸಿಲ್ಲ, ಅವರೆಲ್ಲರೂ ಈ ಪ್ರಶಸ್ತಿಗೆ ಸಂಬಂಧಿಸಿದಂತೆ ಮುಂದೊಂದು ದಿನ ಅಭಿನಂದಿಸುತ್ತಾರೆ ಎಂದು ಹೇಳಿದರು.

ಬೂಕರ್ ಪ್ರಶಸ್ತಿ ಬಂದ ಮೇಲೆ ದೇಶ ಸೇರಿದಂತೆ ಪ್ರಪಂಚದಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ರಾಜ್ಯ ಸೇರಿದಂತೆ ಹೊರ ರಾಜ್ಯಗಳ ಪತ್ರಿಕೆ, ಮ್ಯಾಗಝೀನ್‌ಗಳಲ್ಲಿ ಮುಖಪುಟದಲ್ಲಿ ಸುದ್ದಿ ಪ್ರಸಾರವಾಗುತ್ತಿವೆ. ಟರ್ಕಿ, ಶ್ರೀಲಂಕಾ, ವಿಯೇಟ್ನಾಂ ಸೇರಿದಂತೆ ಅನೇಕ ದೇಶದವರು ಆಹ್ವಾನಿಸುತ್ತಿದ್ದಾರೆ. ಆದರೆ ಶೇ.70ರಷ್ಟು ಆಹ್ವಾನಗಳಿಗೆ ನಾನು ಹೋಗಲು ಆಗುತ್ತಿಲ್ಲ ಎಂದು ಹೇಳಿದರು.

ಕೇರಳ ರಾಜ್ಯದಲ್ಲಂತೂ ಹಲವಾರು ಕಾರ್ಯಕ್ರಮಗಳಿಗೆ ಆಹ್ವಾನ ಬರುತ್ತಿದೆ. ಪಶ್ಚಿಮ ಬಂಗಾಳದಲ್ಲೂ ಸಾಕಷ್ಟು ಅಭಿನಂದನೆಗಳು ವ್ಯಕ್ತವಾಗುತ್ತಿವೆ. ಪ್ರಶಸ್ತಿ ಬಂದ ನಂತರ ಒಂದು ದಿನವೂ ನನಗೆ ಬಿಡುವು ಸಿಗುತ್ತಿಲ್ಲ. ಇದೆಲ್ಲವೂ ಜಾಗತಿಕ ಮಟ್ಟದಲ್ಲಿ ಕನ್ನಡಕ್ಕೆ ಸಂದ ಗೌರವ ಎಂದು ಹೇಳಿದರು.

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮಳೇನಾಧ್ಯಕ್ಷ ಸ್ಥಾನಕ್ಕೆ ಆಹ್ವಾನ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಅಧ್ಯಕ್ಷರ ವೈಯಕ್ತಿಕ ತೀರ್ಮಾನ ಅಲ್ಲ. ಪ್ರಜಾಸತ್ತಾತ್ಮಕವಾಗಿ ಎಲ್ಲರ ಅಭಿಪ್ರಾಯದಂತೆ ಆಹ್ವಾನ ನೀಡಿರುವುದು. ಹಾವೇರಿಯಲ್ಲಿ ನಡೆದ ಸಮ್ಮೇಳನದಲ್ಲಿ ಧಾರ್ಮಿಕ ಪೂರ್ವಾಗ್ರಹದಿಂದ ಒಂದು ಗೋಷ್ಠಿಗೂ ಮುಸ್ಲಿಮರಿಗೆ ಆಹ್ವಾನ‌ ನೀಡದಿದ್ದ ಅಧ್ಯಕ್ಷರು, ಇಂದು ಮುಸ್ಲಿಮ್ ಮಹಿಳೆಗೆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನದ ಪ್ರಾತಿನಿಧ್ಯ ನೀಡಿದ್ದಾರೆ ಎಂದರೆ ಅವರಲ್ಲಿ ಬದಲಾವಣೆಯಾಗಿದೆ, ಸಾಮಾಜಿಕ ಸ್ಥಿತ್ಯಂತರವಾಗಿದೆ ಎಂದು ತಿಳಿಯೋಣವೇ ಕಾದು ನೋಡೋಣ ಎಂದು ಹೇಳಿದರು.

1965ರಲ್ಲಿ ಬೂಕರ್ ಪ್ರಶಸ್ತಿ ಪ್ರಾರಂಭ ಆಯಿತು. ಅಲ್ಲಿಂದ ಇಲ್ಲಿವರೆಗೂ ಸಣ್ಣ ಕಥೆಗಳಿಗೆ ಬೂಕರ್ ಪ್ರಶಸ್ತಿ ಸಿಕ್ಕಿಲ್ಲ. ಆದರೆ ಆಯ್ಕೆ ಸಮಿತಿ ನನ್ನನ್ನು ಲಂಡನ್‌ಗೆ ಆಹ್ವಾನಿಸಿತು. ಅಲ್ಲಿಗೆ ಹೋದ ಸಂದರ್ಭದಲ್ಲಿ ಅಲ್ಲಿನ ಕೆಲವರು ನಿಮ್ಮ ಕಥೆ ಚೆನ್ನಾಗಿದೆ, ಆದರೆ ಸಣ್ಣ ಕಥೆಗಳಿಗೆ ಬೂಕರ್ ಸಿಗಲ್ಲ ಎಂದು ಹೇಳುತ್ತಿದ್ದರು.‌ ಇದರಿಂದ ನನಗೆ ಸಿಟ್ಟು ಬಂದು ನಾಲ್ಕು ದಿನಗಳ ಹಿಂದೆಯೇ ಭಾಷಣ ತಯಾರಿ ಮಾಡಿ ಪ್ರಶಸ್ತಿ ಸ್ವೀಕರಿಸಿದ ಮೇಲೆ ನನ್ನ ಭಾವನೆಯನ್ನು ಹಂಚಿಕೊಂಡೆ ಎಂದರು.

ಬೂಕರ್ ಪ್ರಶಸ್ತಿಯನ್ನು ಒಂದು ಎನ್.ಜಿ.ಓ ನೀಡುತ್ತಿದೆ. ಪ್ರಶಸ್ತಿಗೆ ಆಯ್ಕೆ ಮಾಡಬೇಕಾದರೆ, ಆ ಸಾಹಿತ್ಯವನ್ನು ಸಾಕಷ್ಟು ಅಧ್ಯಯನ ಮಾಡಿ ಯಾವ ಮುಲಾಜಿಗೂ ಒಳಗಾಗದೆ ಮೌಲ್ಯ ಮಾಪನ‌ಮಾಡಿ ನ್ಯಾಯಯುತ ನಿರ್ಧಾರ ಮಾಡುತ್ತಾರೆ. ಹಾಗಾಗಿ ಈ ಪ್ರಶಸ್ತಿಗೆ ಹೆಚ್ಚಿನ ಮೌಲ್ಯವಿದೆ ಎಂದು ಹೇಳಿದರು.

ಸಂವಾದದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್, ನಗರ ಉಪಾಧ್ಯಕ್ಷ ರವಿ ಪಾಂಡವಪುರ, ಗ್ರಾಮಾಂತರ ಉಪಾಧ್ಯಕ್ಷ ದಾ.ರಾ.ಮಹೇಶ್ ಉಪಸ್ಥಿತರಿದ್ದರು.

ಮಹಿಳಾ ಕಾಯ್ದೆ ಜಾರಿಗೆ ತರಬೇಕು:

ಮಹಿಳೆಯರ ಕುರಿತು ವೈಯಕ್ತಿಕ ಟೀಕೆ, ನಿಂದನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಬಲ ಮಹಿಳಾ ಕಾಯ್ದೆ ಜಾರಿಗೆ ತರಬೇಕು ಎಂದು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಹೇಳಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಸಚಿವೆ ಲಕ್ಞ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರು ಎಂದು ಹೆಬ್ಬಾಳ್ಕರ್ ಅಳುತ್ತಾ ತಮ್ಮ ನೋವನ್ನು ವ್ಯಕ್ತಪಡಿಸಿದರು.

ಇದೀಗ ಮತ್ತೊಬ್ಬ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ವಿರುದ್ಧ ವೈಯಕ್ತಿಕವಾಗಿ ನಿಂದನೆ ಮಾಡಿದ್ದಾರೆ. ಇಂತಹ ಬೆಳವಣಿಗೆಗಳು ನಡೆಯುತ್ತಲೇ ಇರುತ್ತವೆ.‌ ಇಂತಹದಕ್ಕೆ ಕಡಿವಾಣ ಹಾಕಲು ವಿಧಾನಸಭೆಯಲ್ಲಿ ಮಹಿಳಾ ನಿಂದನೆ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X