Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ನಾಡಹಬ್ಬ ಮೈಸೂರು ದಸರಾಗೆ ಬಾನು ಮುಷ್ತಾಕ್...

ನಾಡಹಬ್ಬ ಮೈಸೂರು ದಸರಾಗೆ ಬಾನು ಮುಷ್ತಾಕ್ ರಿಂದ ವಿದ್ಯುಕ್ತ ಚಾಲನೆ

ವಾರ್ತಾಭಾರತಿವಾರ್ತಾಭಾರತಿ22 Sept 2025 10:43 AM IST
share
ನಾಡಹಬ್ಬ ಮೈಸೂರು ದಸರಾಗೆ ಬಾನು ಮುಷ್ತಾಕ್ ರಿಂದ ವಿದ್ಯುಕ್ತ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ- 2025ಕ್ಕೆ ಖ್ಯಾತ ಲೇಖಕಿ, ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಸೋಮವಾರ ಬೆಳಗ್ಗೆ ವಿದ್ಯುಕ್ತ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯರ ಸಮ್ಮುಖದಲ್ಲಿ ತಮ್ಮ ಹೃದಯ ಹಣತೆಯ ಮಂದಹಾಸದಿಂದಲೇ ಹಳದಿ ಹಸಿರು ಬಣ್ಣದ ಮೈಸೂರು ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ವೇದಿಕೆಗೆ ಆಗಮಿಸಿದ ಬಾನು ಮುಷ್ತಾಕ್, ಬೆಳ್ಳಿಯ ಪಲ್ಲಕ್ಕಿಯ ಸಿಂಹಾಸನದಲ್ಲಿ ಅಲಕೃಂತಗೊಂಡ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡಿದರು.

ಈ ವೇಳೆ ವೇದಿಕೆಯ ಮುಂಭಾಗದಲ್ಲಿ ನೆರೆದಿದ್ದ ಭಕ್ತಾದಿಗಳು ಬಾನು ಮುಷ್ತಾಕ್ ಮತ್ತು ಸಿದ್ಧರಾಮಯ್ಯರ ಪರ ಜಯಘೋಷ ಕೂಗಿದರು.

ಇದಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಬಾನು ಮುಷ್ತಾಕ್ ರನ್ನು ಡೋಲು, ವಾದ್ಯ, ಚಂಡೆ ವಾದ್ಯ, ವೀರಗಾಸೆ ಕುಣಿತ, ಪಟದ ಕುಣಿತ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಬರಮಾಡಿಕೊಳ್ಳಲಾಯಿತು. ಇದೇ ವೇಳೆ ಪೂರ್ಣಕುಂಭ ಸ್ವಾಗತವನ್ನು ನೀಡಲಾಯಿತು.

ಮೊದಲಿಗೆ ಚಾಮುಂಡಿ ಬೆಟ್ಟದ ಒಳಗೆ ಪ್ರವೇಶಿಸಿದ ಅವರು ಮಂಗಳಾರತಿ ಸ್ವೀಕರಿದರು. ನಂತರ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು.

ಈ ಸಂದರ್ಭ ಅವರಿಗೆ ದೇವಸ್ಥಾನದ ವತಿಯಿಂದ ಮಲ್ಲಿಗೆ ಹಾರ ಹಾಕಿ, ಫಲ ತಾಂಬೂಲ ನೀಡಿ ಸೀರೆಯನ್ನು ಉಡುಗೊರೆಯಾಗಿ ನೀಡಲಾಯಿತು. ಅವರ ಜೊತೆ ಪುತ್ರಿ ಜೊತೆಗಿದ್ದರು.

ದಸರಾ ಉದ್ಘಾಟನೆಗೆ ರವಿವಾರವೇ ಹಾಸನದಿಂದ ಮೈಸೂರಿಗೆ ಪೊಲೀಸ್ ಬೆಂಗಾವಲಿನಲ್ಲಿ ಆಗಮಿಸಿದ ಅವರನ್ನು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯಕ್ಕೆ ಅವಕಾಶ ಮಾಡಲಾಗಿತ್ತು.

ಅಚ್ಚರಿ ಮೂಡಿಸಿದ ಬಿಜೆಪಿ ಶಾಸಕ:

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರ ಆಹ್ವಾನವನ್ನು ವಿರೋಧಿಸಿ ಚಾಮುಂಡಿ ಚಲೋಗೆ ಕರೆ ನೀಡಿ ಪ್ರತಿಭಟನೆಗೆ ಮುಂದಾಗಿದ್ದ ಕೆ.ಆರ್. ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸವ ದಸರಾ ಉದ್ಘಾಟನೆಯಲ್ಲಿ ಭಾಗವಹಿಸಿ ಅಚ್ಚರಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಎಲ್ಲಾ ಜವಾಬ್ದಾರಿಯನ್ನು ಹೊತ್ತಿದ್ದರು.

ಸಚಿವರಾದ ಕೆ.ಎಚ್.ಮುನಿಯಪ್ಪ, ಕೆ.ವೆಂಕಟೇಶ್, ಶಿವರಾಜ್ ಎಸ್.ತಂಗಡಗಿ, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಕೆ.ಹರೀಶ್ ಗೌಡ, ಡಿ.ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಕೆ.ವಿವೇಕಾನಂದ, ಮಂಜೇಗೌಡ, ಡಾ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X