Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಬಿಜೆಪಿ ಸರ್ಕಾರ ಹೆಚ್ಚಳ ಮಾಡಿದ್ದ ಎಸ್ಸಿ,...

ಬಿಜೆಪಿ ಸರ್ಕಾರ ಹೆಚ್ಚಳ ಮಾಡಿದ್ದ ಎಸ್ಸಿ, ಎಸ್ಟಿಗಳ ಮೀಸಲಾತಿಯನ್ನು ಕಸಿದುಕೊಳ್ಳುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಶ್ರೀರಾಮುಲು ಆರೋಪ

ವಾರ್ತಾಭಾರತಿವಾರ್ತಾಭಾರತಿ20 May 2026 6:02 PM IST
share
ಬಿಜೆಪಿ ಸರ್ಕಾರ ಹೆಚ್ಚಳ ಮಾಡಿದ್ದ ಎಸ್ಸಿ, ಎಸ್ಟಿಗಳ ಮೀಸಲಾತಿಯನ್ನು ಕಸಿದುಕೊಳ್ಳುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಶ್ರೀರಾಮುಲು ಆರೋಪ

ಮೈಸೂರು: ಹಿಂದಿನ ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮಾಡಿದ್ದ ಮೀಸಲಾತಿ ಹೆಚ್ಚಳವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕಸಿದುಕೊಳ್ಳುವ ಮೂಲಕ ಆ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ 30 ವರ್ಷಗಳ ನಿರಂತರ ಹೋರಾಟ ಹಾಗೂ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯ ಆಧಾರದ ಮೇಲೆ, ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ದೃಢ ನಿರ್ಧಾರ ಕೈಗೊಂಡು ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15 ರಿಂದ ಶೇ.17ಕ್ಕೆ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿತ್ತು. ಈ ನಿರ್ಧಾರಕ್ಕೆ ಅಂದು ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಸರ್ವಪಕ್ಷಗಳೂ ಒಮ್ಮತದ ಬೆಂಬಲ ಸೂಚಿಸಿದ್ದವು. ಆದರೆ, ಕಾಂಗ್ರೆಸ್ ಸರ್ಕಾರ ಈ ಮೀಸಲಾತಿ ಸೌಲಭ್ಯ ಕಸಿದುಕೊಳ್ಳುವ ಕೆಲಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಬೇಜವಾಬ್ದಾರಿಯಿಂದ ತಡೆಯಾಜ್ಞೆ: ಮೀಸಲಾತಿ ಹೆಚ್ಚಳದ ವಿರುದ್ಧ ರಾಯಚೂರಿನ ಕಾಂಗ್ರೆಸ್ ವ್ಯಕ್ತಿಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದಾಗ, ರಾಜ್ಯ ಸರ್ಕಾರದ ಪರ ವಕೀಲರು ಸಮರ್ಪಕವಾಗಿ ವಾದ ಮಂಡಿಸದ ಕಾರಣ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ತಡೆಯಾಜ್ಞೆ ಬಂದಿದೆ. ಇದರ ಬೆನ್ನಲ್ಲೇ ಎಸ್‌ಟಿ ಸಮುದಾಯದ ಮೀಸಲಾತಿಯನ್ನು ರಾತ್ರೋರಾತ್ರಿ ಮತ್ತೆ ಶೇ.3ಕ್ಕೆ ಇಳಿಸುವಂತಹ ಗೊಂದಲಕಾರಿ ಆದೇಶವನ್ನು ಸರ್ಕಾರ ಹೊರಡಿಸಿದೆ. ಇದರಿಂದಾಗಿ ವೈದ್ಯಕೀಯ, ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಪಡೆದಿದ್ದ ನೂರಾರು ಬಡ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ದೂಡಲ್ಪಟ್ಟಿದೆ. ಸರ್ಕಾರದ ಈ ಎಡವಟ್ಟಿನಿಂದ ಬೇಸತ್ತು ಈಗಾಗಲೇ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಾವುಗಳಿಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿಗಾಗಿ 6-6-5 ಮಾದರಿಯ ವರ್ಗೀಕರಣದ ಮಸೂದೆ ಅಂಗೀಕರಿಸಿ, ಡಿಸೆಂಬರ್ 2025ರಲ್ಲಿ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಯಿತು. ತದನಂತರ ರಾಜ್ಯಪಾಲರ ಬಳಿ ಹೋಗಿ ಶೇ.17ರ ವರ್ಗೀಕರಣಕ್ಕೆ ಸಹಿ ಮಾಡಿಸಿಕೊಂಡು ಬಂದ ಸರ್ಕಾರ, ಅದೇ ದಿನ ಸಂಜೆ ಸಚಿವ ಸಂಪುಟ ಸಭೆ ಕರೆದು ಸುಪ್ರೀಂ ಕೋರ್ಟ್ ಮಿತಿಯಾದ ಶೇ.50ರ ಒಳಗಡೆಯೇ ಮೀಸಲಾತಿ ನಿರ್ವಹಿಸುತ್ತೇವೆ ಎಂದು ಉಲ್ಟಾ ಹೊಡೆಯಿತು. ರಾಜಭವನಕ್ಕೆ ಒಂದು ಮಾಹಿತಿ ನೀಡಿ, ಕ್ಯಾಬಿನೆಟ್‌ನಲ್ಲಿ ಮತ್ತೊಂದು ತೀರ್ಮಾನ ಮಾಡುವ ಮೂಲಕ ಇಡೀ ಪ್ರಕ್ರಿಯೆಯನ್ನು ಕಗ್ಗಂಟಾಗಿಸಿದ್ದಾರೆ ಎಂದು ದೂರಿದರು.

ತಮಿಳುನಾಡಿನ ಮಾದರಿಯಲ್ಲಿ ಮೀಸಲಾತಿಯನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಬೇಕು ಎಂದು ಹೇಳುತ್ತಾ ಕಾಂಗ್ರೆಸ್ ನಾಯಕರು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಹಿಂದುಳಿದ ವರ್ಗಗಳ ಸ್ವಯಂ ಘೋಷಿತ ಚಾಂಪಿಯನ್ ಆಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಸಮುದಾಯದ ಮೇಲೆ ನಿಜವಾದ ಕಳಕಳಿ ಇದ್ದರೆ, ತಕ್ಷಣವೇ ಹೈಕೋರ್ಟ್‌ನಲ್ಲಿರುವ ತಾತ್ಕಾಲಿಕ ತಡೆಯಾಜ್ಞೆಯನ್ನು ತೆರವುಗೊಳಿಸುವ ಕೆಲಸ ಮಾಡಲಿ ಎಂದು ಸವಾಲು ಹಾಕಿದರು.

ಈ ಗಂಭೀರ ಸಮಸ್ಯೆಯ ಕುರಿತು ಚರ್ಚಿಸಲು ಮಾಜಿ ಸಚಿವರು, ಸಂಸದರು ಮತ್ತು ಶಾಸಕರನ್ನು ಒಳಗೊಂಡ ಬಿಜೆಪಿಯ ಉನ್ನತ ಮಟ್ಟದ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದೆ. ಒಂದು ವೇಳೆ ಸರ್ಕಾರ ಸಮಸ್ಯೆ ಬಗೆಹರಿಸದಿದ್ದರೆ, ನಾವು ರಕ್ತದಲ್ಲಿ ಬರೆದುಕೊಡುತ್ತೇವೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದ್ದು, ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸಿಗಬೇಕಾದ ಹಕ್ಕನ್ನು ಯಥಾವತ್ತಾಗಿ ಜಾರಿಗೊಳಿಸಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕರಾದ ಎನ್.ಮಹೇಶ್, ಹರ್ಷವರ್ಧನ್, ಎಲ್.ನಾಗೇಂದ್ರ, ಮಾಜಿ ಎಂಲ್‌ಸಿ ಸಿದ್ದರಾಜು, ಮಾಜಿ ಮೇಯರ್‌ಗಳಾದ ಸಂದೇಶ್‌ಸ್ವಾಮಿ, ಶಿವಕುಮಾರ್, ಮುಖಂಡರುಗಳಾದ ಎಸ್.ಮಹದೇವಯ್ಯ, ಶಿವರಾಮ್, ವಸಂತಕುಮಾರ್ ಸೇರಿದಂತೆ ಹಲವರು ಇದ್ದರು.

ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಗೊಳಿಸಿರುವುದನ್ನು ಕಡಿತಗೊಳಿಸುವುದಕ್ಕಿಂತ ಹಿಂದುಳಿದ ವರ್ಗಗಳ 2ಎ, 2ಬಿ ಸೇರಿದಂತೆ ಹಲವು ವರ್ಗಗಳ ಮೀಸಲಾತಿಯನ್ನು ತೆಗೆದು ಹಾಕಿ. ಸಿದ್ದರಾಮಯ್ಯ ಅವರೇ ಎಸ್ಸಿ, ಎಸ್ಟಿ ಮೀಸಲಾತಿ ಕಡಿತದ ಮೂಲಕ ಸಾಮಾಜಿಕ ಅನ್ಯಾಯದ ಕಳನಾಯಕರಾಗಬೇಡಿ. ಶಾಸನಬದ್ಧವಾಗಿರುವುದನ್ನು ಕಡಿತಗೊಳಿಸಿ ಸಂವಿಧಾನಕ್ಕೆ ಅಪಚಾರ ಎಸಗಿದ್ದೀರಿ. ಈ ನಿರ್ಧಾರವನ್ನು ತಕ್ಷಣವೇ ವಾಪಸ್ ಪಡೆಯಿರಿ.

-ಸಿ.ಟಿ.ರವಿ, ಮಾಜಿ ಸಚಿವ

Tags

SriramuluCongressSC/STBJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X