Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು |ಮೂವರು ಉದ್ಯಮಿಗಳ ಮನೆ ಮೇಲೆ ಐಟಿ...

ಮೈಸೂರು |ಮೂವರು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ; ದಾಖಲೆ ಪತ್ರಗಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ5 Feb 2025 8:47 PM IST
share
ಮೈಸೂರು |ಮೂವರು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ; ದಾಖಲೆ ಪತ್ರಗಳ ಪರಿಶೀಲನೆ

ಮೈಸೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮೈಸೂರಿನ ಮೂವರು ಉದ್ಯಮಿಗಳ ಮನೆ ಸೇರಿದಂತೆ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. 10 ಕಾರುಗಳಲ್ಲಿ ಆಗಮಿಸಿದ ಐವತ್ತು ಮಂದಿ ಐಟಿ ಅಧಿಕಾರಿಗಳು ಮತ್ತು ಸಿಬ್ಬಂದಿ ಏಕ ಕಾಲದಲ್ಲಿ ಮೂರು ಕಡೆ ಶೋಧ ಕಾರ್ಯ ನಡೆಸಿದ್ದಾರೆ.

ರಾಮಕೃಷ್ಣನಗರ ಐ-ಬ್ಲಾಕ್‌ನಲ್ಲಿ ಅಮ್ಮ ಕಾಂಪ್ಲೆಕ್ಸ್ ಸಮೀಪವಿರುವ ಪ್ರಥಮ ದರ್ಜೆ ಗುತ್ತಿಗೆದಾರ ಜಯಕೃಷ್ಣ (ರಾಮಕೃಷ್ಣೇಗೌಡ), ಆಲನಹಳ್ಳಿ ರಿಂಗ್ ರಸ್ತೆಯಲ್ಲಿರುವ ಉದ್ಯಮಿ ಕಾಂತರಾಜು, ಹರಿಕುಮಾರ್, ಹರಿಬಾಬು ಹಾಗೂ ವಿಜಯನಗರ 3ನೇ ಹಂತದಲ್ಲಿರುವ ಗುತ್ತಿಗೆದಾರ ರಮೇಶ್ ಮನೆ, ಕಚೇರಿಗಳ ಮೇಲೆ ಬುಧವಾರ ಮುಂಜಾನೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಆಸ್ತಿಗಳ ದಾಖಲೆ-ಪತ್ರ, ಹಣ, ಚಿನ್ನಾಭರಣ ಸೇರಿದಂತೆ ಇತರ ಸ್ಥಿರ-ಚರ, ಆಸ್ತಿಗಳ ವಿವರ ಶೋಧ ನಡೆಸಿದ ಅಧಿಕಾರಿಗಳು ಆಯಾಯ ಕುಟುಂಬ ಸದಸ್ಯರು ಹೊರಗೆ ಹೋಗದಂತೆ ನಿರ್ಬಂಧ ಹಾಕಿ, ಸಂಜೆಯವರೆಗೂ ಕಾರ್ಯಾಚರಣೆ ನಡೆಸಿದರು.

ಎಪ್ರಿಲ್ 1 ರಿಂದ ಈವರೆಗೆ ವಿವಿಧ ಇಲಾಖೆಗಳು, ಸ್ಥಳೀಯ ಸಂಸ್ಥೆಗಳಲ್ಲಿ ಟೆಂಡರ್ ಮೂಲಕ ಕಾಮಗಾರಿಗಳನ್ನು ಪಡೆದು ಪೂರ್ಣಗೊಳಿಸಿ, ಅವುಗಳ ಬಿಲ್ ಪಡೆದಿರುವುದು, ಇನ್ನಿತರ ಮೂಲಗಳಿಂದ ಗಳಿಸಿರುವ ಆದಾಯ, ಬ್ಯಾಂಕ್ ಬ್ಯಾಲೆನ್ಸ್, ಶೇರು ಮಾರುಕಟ್ಟೆಯಲ್ಲಿ ತೊಡಗಿಸಿರುವ ಹಣ, ವಿಮಾ ಕಂಪನಿಗಳಲ್ಲಿ ಹೂಡಿಕೆ ಬಗ್ಗೆಯೂ ದಾಖಲಾತಿಗಳನ್ನು ಪರಿಶೀಲಿಸಿದ್ದಾರೆ.

ಸಿವಿಲ್ ಕಾಂಟ್ರಾಕ್ಟ್, ರಿಯಲ್ ಎಸ್ಟೇಟ್, ವಾಣಿಜ್ಯೋದ್ಯಮ ಹಾಗೂ ಇನ್ನಿತರ ವೃತ್ತಿಗಳಲ್ಲಿ ಮಾಡಿರುವ ವಹಿವಾಟುಗಳಿಗೆ ಜಿಎಸ್‌ಟಿ, ಎಸ್‌ಎಸ್‌ಟಿ ಪಾವತಿಸಿರುವ ಕುರಿತಂತೆಯೂ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.

ಜಯಕೃಷ್ಣ ಅವರ ರಾಮಕೃಷ್ಣನಗರ ಮನೆ ಹಾಗೂ ಸಮೀಪದ ನಿವೇದಿತಾನಗರದಲ್ಲಿರುವ ಕಚೇರಿ, ಕಾಂತರಾಜು ಅವರಿಗೆ ಸೇರಿದ ದೇವೇಗೌಡ ಸರ್ಕಲ್ ಬಳಿಯ ವರ್ತುಲ ರಸ್ತೆಗೆ ಹೊಂದಿಕೊಂಡಂತಿರುವ ಎಂ-ಪ್ರೋ ಹೋಟೆಲ್, ಸಮೀಪದ ಮಾರುತಿನಗರದಲ್ಲಿರುವ ಮನೆ ಹಾಗೂ ಮಾನಸಿನಗರದ ಕಚೇರಿಗಳಲ್ಲಿ ತಂಡೋಪತಂಡವಾಗಿ ಏಕಕಾಲದಲ್ಲಿ ದಾಳಿ ನಡೆಸಿ, ಆಸ್ತಿಗಳ ದಾಖಲೆ ಪತ್ರಗಳನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡರು ಎಂದು ಹೇಳಲಾಗುತ್ತಿದೆ.

ಇಂದು ದಾಳಿ ನಡೆಸಲಾದವರಲ್ಲಿ ಬಹುತೇಕರು ಮೈಸೂರಿನ ಪ್ರತಿಷ್ಠಿತ ರಾಜಕಾರಣಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ದಾಳಿ ವೇಳೆ ಐಟಿ ಅಧಿಕಾರಿಗಳು ಕುವೆಂಪುನಗರ, ವಿಜಯನಗರ, ಆಲನಹಳ್ಳಿ ಪೊಲೀಸರ ಸಹಕಾರ ಪಡೆದಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X