Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಭಾರತದ ಮೂಲನಿವಾಸಿಗಳು ಆತಂಕದಲ್ಲಿದ್ದಾರೆ:...

ಭಾರತದ ಮೂಲನಿವಾಸಿಗಳು ಆತಂಕದಲ್ಲಿದ್ದಾರೆ: ಸಚಿವ ಡಾ.ಎಚ್.ಸಿ.ಮಹದೇವಪ್ಪ

ಪ.ಮಲ್ಲೇಶ್-90 ರಾಷ್ಟ್ರೀಯ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ2 March 2024 10:37 PM IST
share
ಭಾರತದ ಮೂಲನಿವಾಸಿಗಳು ಆತಂಕದಲ್ಲಿದ್ದಾರೆ: ಸಚಿವ ಡಾ.ಎಚ್.ಸಿ.ಮಹದೇವಪ್ಪ

ಮೈಸೂರು: ಪ್ರಪಂಚಕ್ಕೆ ಶಾಂತಿ, ಅಹಿಂಸೆ, ಸಹಿಷ್ಣುತೆಯನ್ನು ಭೋದನೆ ಮಾಡಿದ ರಾಷ್ಟ್ರ ಭಾರತ. ಅಹಿಂಸೆ ಹಾಗೂ ಅಸಹಕಾರದಿಂದ ಸ್ವಾತಂತ್ರ್ಯ ಪಡೆದ ಈ ದೇಶದ ಇಂದಿನ ಆಡಳಿತ ವ್ಯವಸ್ಥೆಯು ಎಲ್ಲರನ್ನೂ ತಳಮಳಗೊಳಿಸುತ್ತಿದೆ. ಸ್ವಾತಂತ್ರ್ಯದ ಉದ್ದೇಶ ಬುಡಮೇಲು ಮಾಡಲಾಗುತ್ತಿದ್ದು, ಭಾತರದ ಮೂಲನಿವಾಸಿಗಳು ಆತಂಕದಲ್ಲಿದ್ದಾರೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ.ಮಲ್ಲೇಶ್- 90ರ ಅಂಗವಾಗಿ ಶನಿವಾರ ಕಲಾಮಂದಿರದಲ್ಲಿ ನಡೆದ 'ಭಾರತ ಜನತಂತ್ರದ ಸಮಕಾಲೀನ ತಲ್ಲಣಗಳು' ಕುರಿತ ಎರಡು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ದೇಶದ ಉಜ್ವಲ ಭವಿಷ್ಯಕ್ಕೆ ಮಾರ್ಗ ತೊರಿಸುವ ಸಂವಿಧಾನ ಇಂದು ಅಪಾಯದಲ್ಲಿದೆ. ಜನರ ಜೀವನ ನಿಜಕ್ಕೂ ಕಷ್ಟದಲ್ಲಿದೆ. ಅಸ್ಪೃಶ್ಯತೆ ನಿವಾರಣೆ ಆಗಿಲ್ಲ. ಕೋಮು ಸೌಹರ್ದತೆ ಸಂಪೂರ್ಣ ಸಾಧಿಸಿಲ್ಲ. ನಮ್ಮ ದೇಶದ ಮೂಲ ಕಸುಬಾದ ಕೃಷಿ ಆಧಾರಿತ ಬದುಕು ಸಂಕಷ್ಟಕ್ಕೆ ಸಿಲುಕಿದೆ. ರೈತರು ಕೃಷಿ ನಿಲ್ಲಿಸಿ ಬೀದಿಗಿಳಿದು ಹೋರಾಟ ಮಾಡಬೇಕಾದ ಹೀನಾಯ ಪರಿಸ್ಥಿತಿ ಬಂದೊದಗಿರುವುದು ಅತ್ಯಂತ ನಾಚಿಗೇಡಿನ ಸಂಗತಿ ಎಂದರು.

ಜವಾಹರಲಾಲ್ ನೆಹರು ಅವರು ಪ್ರಧಾನಿಯಾಗಿದ್ದಾಗ ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯ ಈಡೇರಿಸಲು ಪಂಚವಾರ್ಷಿಕ ಯೋಜನೆ ಮುಖಾಂತರ ದೇಶವನ್ನು ಹಂತಹಂತವಾಗಿ ಅಭಿವೃದ್ಧಿ ಮಾಡುವಂಥ ಪ್ರಯತ್ನ ನಡೆದು ದೇಶದಲ್ಲಿ ಕೃಷಿಯ ಉತ್ಪಾದನೆಗೆ ಪ್ರೇರಕ ಶಕ್ತಿಯಾದ ಬಾಕ್ರಾನಂಗಲ್ ಅಣೆಕಟ್ಟೆ ನಿರ್ಮಾಣ ಮಾಡಲಾಯಿತು ಎಂದು ವಿವರಿಸಿದರು.

ಭೂಮಿ ಸಾಮಾನ್ಯ ಜನರಿಗೆ, ಕೃಷಿಕರಿಗೆ ಸಾಮಾಜಿಕ ಭದ್ರತೆ ಒದಗಿಸುತ್ತದೆ. ಆದರೆ ಇಂದು ಭೂಮಿಯು ಬಂಡವಾಳಶಾಹಿಗಳ ಕೈಸೇರುತ್ತಿದೆ. ಒಬ್ಬ ವ್ಯಕ್ತಿ ನೂರಾರು ಎಕ್ಕರೆ ಹೊಂದುವಂಥ ಕರಾಳ ಶಾಸನವನ್ನು ಇಂದಿನ ಬಿಜೆಪಿ ಸರ್ಕಾರ ಜಾರಿ ಮಾಡಿದೆ. ಇದರಿಂದ ಸಾಮಾಜಿಕ ನ್ಯಾಯ ಮರೀಚಿಕೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಿಂಧೂ ನಾಗರಿಕತೆ, ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ, ಪುರಾತನ ಚರಿತ್ರೆ, ನಮ್ಮ ಸಾಂಸ್ಕೃತಿಕ ಬದುಕು, ಧಾರ್ಮಿಕ ಆಚಾರ, ವಿಚಾರ, ವಿಭಿನ್ನವಾದ ಪ್ರಾಂತ್ಯಗಳ ಜನಜೀವನ ಹಾಗೂ ಸ್ವತಃ ನೋವನ್ನು ಅನುಭವಿಸಿ, 15 ಕ್ಕೂ ಹೆಚ್ವು ರಾಷ್ಟ್ರಗಳ ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿ ಬಾಬಾಸಾಹೇಬರು ಭಾರತದ ಸಂವಿಧಾನ ರಚಿಸಿದ್ದಾರೆ. ಸಮಾನತೆ, ಸಮಾನ ಅವಕಾಶ, ಸಂಪತ್ತಿನ ಹಂಚಿಕೆ, ಸಾಮಾಜಿಕವಾಗಿ, ಆರ್ಥಿಕವಾಗಿ ಶೈಕ್ಷಣಿಕವಾಗಿ ಹಂಚುವುದು ಸೇರಿದಂತೆ ಸಂವಿಧಾನದ ನೀತಿ, ನಿರ್ದೇಶನಗಳು ಇನ್ನೂ ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಹೇಳಿದರು.

ಪ್ರಪಂಚದ ಇತಿಹಾಸದಲ್ಲಿ ಚಳುವಳಿಗಳು ಜನಜೀವನದಲ್ಲಿ ಅಮೂಲಾಗ್ರವಾದ ಬದಲಾವಣೆ ತಂದಿವೆ. ಆದರೆ ಇಂದು ಪ್ರಜಾಸತ್ಯಾತ್ಮಕ ನಿರ್ಧಾರಗಳನ್ನು ಬಲಪಡಿಸುವಂಥ ಚಳುವಳಿಗಳು ಕ್ಷೀಣಿಸುತ್ತಿದೆ. ಅಧ್ಯಯನ ಶೀಲತೆ ಕಡಿಮೆಯಾಗುತ್ತಿದೆ. ಎಂಬತ್ತನೇ ದಶಕದ ಹೋರಾಟ, ಜೆಪಿ ಅವರ ಸಮಗ್ರ ಕ್ರಾಂತಿ, ನಂಜುಂಡಸ್ವಾಮಿಯವರ ಭಾರತ ಚಳಿವಳಿ, ದಲಿತ ಸಂಘಟನೆಗಳ ಶಾಂತಿಯುವಾದ ಹೋರಾಟಗಳು, ಅನ್ಯಾಯದ ವಿರುದ್ಧದ ಧ್ವನಿ ಕವಲಾಗಿ ಹೊಡೆದುಹೋಗುತ್ತಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ಸರ್ವಾಧಿಕಾರ ಎಂದಿಗೂ ಉಳಿಯುವುದಿಲ್ಲ:

ಪ್ರಸ್ತುತ ನಮ್ಮೆಲ್ಲರ ವಾಕ್ ಸ್ವಾತಂತ್ರ್ಯಕ್ಕೆ ದಕ್ಕೆ ಒದಗಿದೆ. ಇದರ ಕತ್ತು ಹಿಚುಕಿದರೆ ಪ್ರಜಾಪ್ರಭುತ್ವ ಸಂಪೂರ್ಣ ನಾಶವಾಗಲಿದೆ. ವ್ಯಕ್ತಿಪೂಜೆ ಸರ್ವಾಧಿಕಾರಕ್ಕೆ ಪ್ರೇರಣವಾಗಲಿದೆ. ಸರ್ವಾಧಿಕಾರಿಯು ಪ್ರಜಾಪ್ರಭುತ್ವ ನಾಶಮಾಡುತ್ತಾನೆ. ಇದರಿಂದ ದೇಶ ಅವನತಿ ಕಾಣಲಿದೆ. ಅಂತಹ ಕಾಲಗಟ್ಟದಲ್ಲಿ ನಾವು ನಿಂತಿದ್ದೇವೆ. ಈ ದೇಶವು ಅನೇಕ ಹೋರಾಟ ಕಂಡು, ಜೀರ್ಣಿಸಿಕೊಂಡಿದೆ. ಹೀಗಾಗಿ ಬಹಳಷ್ಟು ಕಾಲ ಸರ್ವಾಧಿಕಾರ ಉಳಿಯುವುದಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಂತ್ರಿಗಳ ರಾಜಕೀಯ ಸಲಹೆಗಾರ ಬಿ.ಆರ್.ಪಾಟೀಲ, ಪ್ರೊ.ಕಾಂಚಾಲಯ್ಯ, ಸುಕನ್ಯ ಕಮರಳ್ಳಿ, ಚಿಂತಕ ಬಸವರಾಜು, ಸವಿತಾ ಮಲ್ಲೇಶ್, ರಂಗಕರ್ಮಿ ಜನ್ನಿ, ಉಗ್ರನರಸಿಂಹಗೌಡ, ಸಾಹಿತಿ ನಾ.ದಿವಾಕರ, ಪ್ರೊ.ಕಾಳಚನ್ನೇಗೌಡ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X