Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ದಲಿತರು ಒಳಮೀಸಲಾತಿ ಜಾರಿಯಾದರೆ...

ದಲಿತರು ಒಳಮೀಸಲಾತಿ ಜಾರಿಯಾದರೆ ಒಡಕುಂಟಾಗುತ್ತದೆ ಎಂಬ ಆತಂಕ ಬಿಟ್ಟು ತಮ್ಮ ಪಾಲನ್ನು ಹೆಚ್ಚಿಸಿಕೊಳ್ಳಲು ಹೋರಾಟ ಮಾಡಬೇಕು: ಚಿಂತಕ ಶಿವಸುಂದರ್

ಒಳಮೀಸಲಾತಿ ಒಳನೋಟ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ16 Sept 2024 11:21 PM IST
share
ದಲಿತರು ಒಳಮೀಸಲಾತಿ ಜಾರಿಯಾದರೆ ಒಡಕುಂಟಾಗುತ್ತದೆ ಎಂಬ ಆತಂಕ ಬಿಟ್ಟು ತಮ್ಮ ಪಾಲನ್ನು ಹೆಚ್ಚಿಸಿಕೊಳ್ಳಲು ಹೋರಾಟ ಮಾಡಬೇಕು: ಚಿಂತಕ ಶಿವಸುಂದರ್

ಮೈಸೂರು: ಒಳಮೀಸಲಾತಿ ಜಾರಿಯಾದರೆ ದಲಿತರಲ್ಲಿ ಒಡಕುಂಟಾಗುತ್ತದೆ ಎಂಬ ಆತಂಕವನ್ನು ಬಿಟ್ಟು, ತಮ್ಮ ಪಾಲನ್ನು ಹೆಚ್ಚಳ ಮಾಡಿಕೊಳ್ಳುವ ನಿಟ್ಟಿಲ್ಲಿ ದಲಿತರು ಹೋರಾಟ ಮಾಡಬೇಕು ಎಂದು ಚಿಂತಕ ಶಿವಸುಂದರ್ ಅಭಪ್ರಾಯಪಟ್ಟರು.

ನಗರದ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಸೋಮವಾರ ದಲಿತ ಸಂಘರ್ಷ ಸಮಿತಿ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು 'ಮೇಲು-ಕೀಳುಅಪರಾಧ' ಕುರಿತು ಭಾಷಣ ಮಾಡಿದ ದಿನದ ಅಂಗವಾಗಿ "ಮೀಸಲಾತಿಯ ಒಳನೋಟ" ಕುರಿತ ವಿಚಾರ ಸಂಕಿರಣದಲ್ಲಿ ವಿಷಯ ಮಂಡನೆ ಮಾಡಿ ಅವರು ಮಾತನಾಡಿದರು.

ಸುಪ್ರೀಂ‌ಕೋಟ್೯ ಆದೇಶದಂತೆ ಆಳುವ ಸರ್ಕಾರಗಳು ಒಳ ಮೀಸಲಾತಿ ಜಾರಿ ಮಾಡಬೇಕು.ಒಳ ಮೀಸಲು ಜಾರಿಗೊಳಿಸಲು ಯಾವುದೇ ಸಾಂವಿಧಾನಿಕ ತೊಡಕಿಲ್ಲ, ಎಲ್ಲಾ ರಾಜಕೀಯ ಪಕ್ಷಗಳು ಸರ್ಕಾರ ಮೀನಾ ಮೇಷ ಎಣಿಸದೆ ನಾಟಕ ಆಡುವುದನ್ನು ಬಿಟ್ಟು ಒಳಮೀಸಲಾತಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಒಳಮೀಸಲಾತಿ ಜಾರಿಯಾದರೆ ನಮ್ಮಲ್ಲೇ ಒಡಕುಂಟಾಗಲಿದೆ ಎಂಬ ಆತಂಕ ನಿಮ್ಮಲ್ಲಿದೆ. ನಿಮ್ಮಲ್ಲೇ ಅನ್ಯಾಯವಾಗಿರುವವರಿಗೆ ನ್ಯಾಯ ಒದಗಿಸುವ ಕೆಲಸವನ್ನು ನೀವೆ ಮಾಡಿದರೆ ನಿಮ್ಮಲ್ಲಿ ಇನ್ನಷ್ಟು ಒಗ್ಗಟ್ಟು ಹೆಚ್ಚಾಗಲಿದೆ. ಸರ್ಕಾರ ತಮ್ಮ ಪಾಲನ್ನು ಕೊಡದೆ ನಮ್ಮಲ್ಲೇ ಜಗಳ ಹಚ್ಚಲು ಪ್ರಯತ್ನಿಸುತ್ತಿವೆ. ಆದರೆ ನಾವುಗಳು ಒಗ್ಗಟ್ಟಾಗಿ ನಮ್ಮ ಪಾಲನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹೋರಾಟ ಮಾಡಬೇಕಿದೆ ಎಂದು ಹೇಳಿದರು.

ಒಳಮೀಸಲಾತಿ ಜಾರಿ ಮಾಡಲು ಮನಸ್ಸಿಲ್ಲದ ಪಕ್ಷಗಳು ಮತ್ತು ಸರ್ಕಾರ ಇನ್ನಿಲ್ಲದ ಸಬೂಬುಗಳನ್ನು ಹೇಳುತ್ತಿವೆ.‌ಕೆನೆಪದರ ವಿಚಾರ ಮುಂದಿಟ್ಟುಕೊಂಡು ಒಳಮೀಸಲಾತಿ ಜಾರಿಗೆ ಆಕ್ಷೇಪ ವ್ಯಕ್ತಪಡಿಸುತ್ತಿವೆ. ದಲಿತರಲ್ಲಿ ಅನ್ಯಾಯಕ್ಕೊಳಗಾದವರಿಗೆ ಮೀಸಲಾತಿಯ ಅಗತ್ಯವಿದೆ.‌ ಅದನ್ನು ಪ್ರಮಾಣಿಕವಾಗಿ ಸರ್ಕಾರಗಳು ಮಾಡಬೇಕಿದೆ ಎಂದು ಹೇಳಿದರು.

ಒಳಮೀಸಲಾತಿ ಜಾರಿಯಾಗಬೇಕಾದರೆ ಅನ್ಯಾಯಕ್ಕೊಳಗಾಗಿದ್ದಾರೆ ಎಂಬುದನ್ನು ತಿಳಿಯಲು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡುವಂತೆ ಸುಪ್ರೀಂ‌ಕೋಟ್೯ ಹೇಳಿದೆ. ಅದರಂತೆ ಆಯಾ ರಾಜ್ಯಗಳು ಸಮೀಕ್ಷಾ ವರದಿಯನ್ನು ಸಿದ್ಧಪಡಿಸಿ ಸುಪ್ರೀಂ ಕೋಟ್೯ಗೆ ನೀಡುವ ಕೆಲಸ ಮಾಡಬೇಕು ಎಂದು ಹೇಳಿದರು.

ಒಳಮೀಸಲಾತಿ ವಿಚಾರದಲ್ಲಿ ಎನ್.ಡಿ.ಎ ಮೈತ್ರಿಕೂಟದಲ್ಲೇ ಭಿನ್ನ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇದಕ್ಕೆ ಕಾಂಗ್ರೆಸ್ ಪಕ್ಷ ಏನು ಹೊರತಾಗಿಲ್ಲ, ಕರ್ನಾಟಕದಲ್ಲಿ ದಲಿತರ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಕೂಡ ಒಳ ಮೀಸಲು ಜಾರಿ ಮಾಡಲು ಮೀನಾಮೇಷ ಎಣಿಸುತ್ತಿದೆ. ಇವರಿಗೆ ನಿಜವಾಗಿ ದಲಿತರ ಮೇಲೆ ಕಾಳಜಿ ಇದ್ದರೆ ಒಳ‌ಮೀಸಲಾತಿ ಜಾರಿ ಮಾಡಲು ಮುಂದಾಗಬೇಕು ಎಂದರು.

ಒಳಮೀಸಲಾತಿ ಜಾರಿ ಮಾಡಿದರೆ ನಮ್ಮ ಪಾಲು ಕಡಿಮೆಯಾಗಲಿದೆ ಎಂಬ ಆತಂಕ ದಲಿತರಲ್ಲೇ ಇದೆ. ಆದರೆ ನಿಮ್ಮ ಪಾಲನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ನಿಮ್ಮ ಹೋರಾಟವನ್ನು ಮುಂದುವರೆಸಬೇಕು. ಮೀಸಲಾತಿಯಲ್ಲಿ 50% ಮೇಲ್ಮಿತಿಯನ್ನು ರದ್ದುಗೊಳಿಸವಂತೆ ಒತ್ತಾಯಿಸಬೇಕು.‌ಯಾವ ಸಂವಿಧಾನದಲ್ಲಿ 50% ಮೇಲ್ಮಿತಿ ಹಾಕಬೇಕು ಎಂಬ ಅಂಶವಿದೆ ಎಂದು ಪ್ರಶ್ನಿಸಿದರು.

ಜನಸಂಖ್ಯಾವಾರು ಎಷ್ಟು ಜನಸಂಖ್ಯೆ ಹೆಚ್ಚಳವಾಗುತ್ತಿದೆ ಅದರ ಪಾಲನ್ನು ಹೆಚ್ಚಿಗೆ ಕೊಡುವಂತೆ ಕೇಳಬೇಕು, ಖಾಸಗೀಕರಣ ರದ್ದುಮಾಡಬೇಕು, ಉದ್ಯೋಗಗಳ ಸಂಖ್ಯೆ ಹೆಚ್ಚಳ ಮಾಡಿ, ಬ್ಯಾಕ್ ಲಾಗ್ ಭರ್ತಿ ಮಾಡಬೇಕು, ಸರ್ಕಾರಿ ಶಾಲೆ, ಉದ್ಯೋಗಗಳನ್ನು ಜಾಸ್ತಿ ಮಾಡಿದರೆ ಸಮಾಜಿಕ ನ್ಯಾಯ ಸಿಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಬುದ್ಧ ದಮ್ಮ ಸಮಿತಿ ಕಾರ್ಯದರ್ಶಿ ಆರ್.ಮಹದೇವಪ್ಪ, ವಿಚಾರವಾದಿ ಡಾ.ಕೃಷ್ಣಮೂರ್ತಿ ಚಮರಂ, ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಕಿರಂಗೂರು ಸ್ವಾಮಿ ಉಪಸ್ಥಿತರಿದ್ದರು.

ಜಾತಿ ವಿನಾಶಕ್ಕಾಗಿ ಹೋರಾಟ ಮಾಡಬೇಕಾದ ಮಠಗಳು ಇಂದು ತಮ್ಮ ಜಾತಿಗಳನ್ನು ಪ್ರಬಲವಾಗಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ದುರದೃಷ್ಟಕರ. ಸರ್ಕಾರ ಕೂಡ ಅಂತಹ ಮಠಗಳಿಗೆ ಹೆಚ್ಚಿನ ಅನುದಾನ‌ಕೊಡುವುದಲ್ಲದೇ ನೂರಾರು ಎಕರೆ ಭೂಮಿಯನ್ನು ನೀಡುತ್ತಿರುವುದು ವಿಷಾದನೀಯ.

-ಆರ್.ಮಹದೇವಪ್ಪ,

ಕಾರ್ಯದರ್ಶಿ, ಕರ್ನಾಟಕ ಬುದ್ಧ ದಮ್ಮ ಸಮಿತಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X