Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಕಾಂತರಾಜ್ ವರದಿ ಯಾವುದೋ ಆಫೀಸಿನಲ್ಲಿ...

ಕಾಂತರಾಜ್ ವರದಿ ಯಾವುದೋ ಆಫೀಸಿನಲ್ಲಿ ರಸ್ತೆಯಲ್ಲಿ ಕುಳಿತು ಮಾಡಿರುವುದಲ್ಲ: ಕೆ.ಎನ್.ಲಿಂಗಪ್ಪ ಸಮರ್ಥನೆ

ರಾಜ್ಯದ 1.35 ಲಕ್ಷ ಕುಟುಂಬಗಳನ್ನು ಭೇಟಿ ಮಾಡಿ ಸಿದ್ಧಪಡಿಸಿರುವ ವರದಿ

ವಾರ್ತಾಭಾರತಿವಾರ್ತಾಭಾರತಿ29 Nov 2023 4:36 PM IST
share
ಕಾಂತರಾಜ್ ವರದಿ ಯಾವುದೋ ಆಫೀಸಿನಲ್ಲಿ ರಸ್ತೆಯಲ್ಲಿ ಕುಳಿತು ಮಾಡಿರುವುದಲ್ಲ: ಕೆ.ಎನ್.ಲಿಂಗಪ್ಪ ಸಮರ್ಥನೆ

ಮೈಸೂರು: ಕಾಂತರಾಜ್ ಆಯೋಗದ ನೇತೃತ್ವದಲ್ಲಿ ನಡೆದಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಯಾವುದೋ ಒಂದು ಕಚೇರಿ ಅಥವಾ ರಸ್ತೆಯಲ್ಲಿ ಕುಳಿತು ಸಿದ್ಧಪಡಿಸಿದ ವರದಿಯಲ್ಲ, ಪ್ರತಿ ಮನೆಗೆ ಮನೆಗೆ ಭೇಟಿ ನೀಡಿ ರಾಜ್ಯದ 1.35 ಲಕ್ಷ ಕುಟುಂಬಗಳ ಸ್ಥತಿಗತಿಗಳನ್ನು ಅವಲೋಕಿಸಿ ಮಾಡಿರುವ ಸಮೀಕ್ಷೆ ಎಂದು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ.ಎನ್.ಲಿಂಗಪ್ಪ ಪ್ರತಿಪಾದಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, 2013 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ಧರಾಮಯ್ಯ ಅವರು ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಬೇಕು ಎಂದು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ನೇತೃತ್ವದಲ್ಲಿ ಒಟ್ಟು ಐದು ಜನ ಸಮಿತಿ ಸದಸ್ಯರನ್ನು ನೇಮಕ ಮಾಡಿ ಜವಾಬ್ದಾರಿ ವಹಿಸಿದ್ದರು. ಅದರಂತೆ ಎಲ್ಲೂ ಲೋಪವಾಗದಂತೆ ವೈಜ್ಞಾನಿಕವಾಗಿ ಸಮೀಕ್ಷೆಯನ್ನು ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಸಮೀಕ್ಷೆ ಯಲ್ಲಿ 1,33,410 ಜನರ ಮೂಲಕ ಜಾತಿಗಣತಿ ಮಾಡಿಸಲಾಗಿದೆ. 22,289 ಮೇಲ್ವಿಚಾರಕರನ್ನು ನೇಮಿಸಲಾಗಿತ್ತು. ಈ ಎಲ್ಲರಿಗೂ ಬೆಂಗಳೂರಿನಲ್ಲಿ 2500 ಮಂದಿಯಿಂದ ಮೂರು ದಿನಗಳ ತರಬೇತಿಯನ್ನು ನೀಡಿ ಯಾವ ರೀತಿ ಸಮೀಕ್ಷೆ ಮಾಡಬೇಕು. ಯಾವ ಕಾಲಂಗಳಲ್ಲಿ ಅವರ ಸ್ಥಿಗತಿಗಳನ್ನು ಬರೆಯಬೇಕು ಎಂಬ ಬಗ್ಗೆ ಮಾಹಿತಿ ನೀಡಲಾಗಿತ್ತು ಅದರಂತೆ ಈ ಜಾತಿಗಣತಿ ನಡೆದಿದೆ ಎಂದು ಸಮರ್ಥಿಸಿಕೊಂಡರು.

ಆಯೋಗದ ಅಧ್ಯಕ್ಷರಾಗಲಿ ಸದಸ್ಯರಾಗಲಿ ಸಮೀಕ್ಷೆ ಮಾಡಲು ಮನೆಗಳಿಗೆ ಭೇಟಿ ನೀಡಿಲ್ಲ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ಜಿ.ಪಂ. ಸಿಇಓ,ತಹಶೀಲ್ದಾರ್ ಸೇರಿದಂತೆ ಇತರೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಮನೆಯಲ್ಲಿ ಯಾರೂ ಇಲ್ಲ ಎಂದರೆ ಎರಡೆರಡು ಬಾರಿ ನಮ್ಮ ಸಿಬ್ಬಂದಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡು ನಾವು ಸಿದ್ಧಪಡಿಸಿದ್ದ 50 ಕಾಲಂ ಗಳಲ್ಲೂ ಮನೆಯ ಕುಟುಂಬದವರ ಮಾಹಿತಿ ಪಡೆದು ಅವರು ಯಾವ ಸ್ಥಿತಿಯಲ್ಲಿದ್ದಾರೆ. ಅವರ ಜಾತಿ ಯಾವುದು. ಆರ್ಥಿಕ ಸ್ಥಿತಿ ಹೇಗಿದೆ. ಶೈಕ್ಷಣಿಕವಾಗಿ ಯಾವ ಮಟ್ಟದಲ್ಲಿದ್ದಾರೆ ಎಂಬ ಅಂಶಗಳನ್ನು ದಾಖಲು ಮಾಡಿ ನಂತರ ಮನೆಯವರಿಗೆ ಎಲ್ಲಾ ಮಾಹಿತಿಯೂ ಸರಿಯಾಗಿದಿಯೇ ಎಂಬುದನ್ನು ತೋರಿಸಿ ಅವರ ಬಳಿ ಸಹಿಯನ್ನು ಪಡೆಯಲಾಗಿದೆ ಎಂದು ತಿಳಿಸಿದರು.

ನಾವು ಸಮೀಕ್ಷೆ ಮಾಡಿದ ಮೇಲೆ ರಾಜ್ಯದಲ್ಲಿ 1351 ಜಾತಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.‌ಎಲ್ಲಾ ಅಂಕಿ ಅಂಶಗಳನ್ನು ಸಿದ್ಧಪಡಿಸಿ ಇದನ್ನು ಪ್ರಿಂಟ್ ಮಾಡಲು ಸರ್ಕಾರಿ ಮುದ್ರಣಾಲಯಕ್ಕೆ ಕೊಡಲಾಗಿತ್ತು. ಅಷ್ಟರೊಳಗೆ ನಮ್ಮ ಮೂರು ವರ್ಷದ ಅವಧಿ ಮುಗಿದು ಹೋಗಿತ್ತು.‌ ವರದಿ ಬಾಕಿ ಇರುವ ಕಾರಣ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂತರಾಜ್ ಆಯೋಗವನ್ನು ಮರು ಮುಂದುವರಿಕೆ ಮಾಡಿದರು ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X