Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಎಸ್.ಐ.ಆರ್ ಹೆಸರಿನಲ್ಲಿ ರಾಜ್ಯದಲ್ಲಿ 86...

ಎಸ್.ಐ.ಆರ್ ಹೆಸರಿನಲ್ಲಿ ರಾಜ್ಯದಲ್ಲಿ 86 ಲಕ್ಷ ಮತದಾರರನ್ನು ಕೈಬಿಡಲು ಬಿಜೆಪಿ ಹುನ್ನಾರ : ಎಂ.ಲಕ್ಷ್ಮಣ್ ಆರೋಪ

ವಾರ್ತಾಭಾರತಿವಾರ್ತಾಭಾರತಿ12 May 2026 6:20 PM IST
share
ಎಸ್.ಐ.ಆರ್ ಹೆಸರಿನಲ್ಲಿ ರಾಜ್ಯದಲ್ಲಿ 86 ಲಕ್ಷ ಮತದಾರರನ್ನು ಕೈಬಿಡಲು ಬಿಜೆಪಿ ಹುನ್ನಾರ : ಎಂ.ಲಕ್ಷ್ಮಣ್ ಆರೋಪ

ಮೈಸೂರು, ಮೇ.12 : ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್) ಹೆಸರಿನಲ್ಲಿ ರಾಜ್ಯದಲ್ಲಿ 86 ಲಕ್ಷ ಮತದಾರರನ್ನು ಕೈ ಬಿಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಮತಗಳನ್ನು ಕದಿಯುವ ಮೂಲಕ ಹಗಲು ದರೋಡೆಗೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಚುನಾವಣಾ ಆಯೋಗದ ಮೂಲಕ ದೇಶಾದ್ಯಂತ ಎಸ್.ಐ.ಆರ್ ಅಡಿಯಲ್ಲಿ ಮತಗಳನ್ನು ಕದಿಯುತ್ತಿದ್ದಾರೆ. ಈಗಾಗಲೇ ಹರಿಯಾಣ, ಬಿಹಾರ, ಮಹರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಮತದಾರರನ್ನು ಕೈಬಿಟ್ಟು ಚುನಾವಣೆ ಗೆದ್ದಿದ್ದಾರೆ. ಈಗ ಕರ್ನಾಟಕದಲ್ಲೂ ಚುನಾವಣಾ ಮ್ಯಾಪಿಂಗ್ ಗೆ ಮುಂದಾಗಿದ್ದಾರೆ ಎಂದು ತಿಳಿಸಿದರು.

ಈಗಾಗಲೇ 15 ದಿನಗಳ ಹಿಂದೆಯೇ ರಾಜ್ಯಾದ್ಯಂತ ಮ್ಯಾಪಿಂಗ್ ಕಾರ್ಯ ಮುಗಿದಿದೆ. ರಾಜ್ಯದಲ್ಲಿ 2025-2026 ರಲ್ಲಿ ಒಟ್ಟು 5.5 ಕೋಟಿ ಮತದಾರರು ಇದ್ದಾರೆ. ಶೇ.85 ರಷ್ಟು ಮ್ಯಾಪಿಂಗ್ ಮಾಡಿದ್ದು ಶೇ.15 ರಷ್ಟು ಅಂದರೆ 86 ಲಕ್ಷದಷ್ಟು ಮ್ಯಾಪಿಂಗ್ ಮಾಡದೆ ಮತದಾರರ ಪಟ್ಟಿಯಿಂದ ಹೊರಗಿಟ್ಟಿದ್ದಾರೆ. ಚುನಾವಣಾ ಆಯೋಗವನ್ನು ಕೇಳಿದರೆ ಕೈ ಬಿಡುವುದಿಲ್ಲ ಎಂದು ಹೇಳುತ್ತಾರೆ. ಆದರೆ ಚುನಾವಣಾ ಸಮಯದಲ್ಲಿ ಕೈಬಿಟ್ಟು ಬಿಜೆಪಿಯವರಿಗೆ ಪೂರಕ ವಾತಾವರಣ ಸೃಷ್ಟಿ ಮಾಡಲಿದ್ದಾರೆ ಎಂದು ಕಿಡಿಕಾರಿದರು.

ಉದಾಹರಣೆಗೆ ಮೈಸೂರು ಜಿಲ್ಲೆಯಲ್ಲಿ ಮ್ಯಾಪಿಂಗ್ ಕಾರ್ಯ ಮುಗಿದಿದೆ. ಮೈಸೂರು ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರಗಳಿದ್ದು, ಒಟ್ಟು 27,99,744 ಮತದಾರರಿದ್ದಾರೆ. ಇದರಲ್ಲಿ 3,48,544 ಮಂದಿಯನ್ನು ಕೈ ಬಿಡಲು ಮುಂದಾಗಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 71,521 ಮತದಾರರನ್ನು ಕೈಬಿಡಲು ಸಿದ್ಧತೆ ನಡೆಸಿದ್ದಾರೆ. ಅದೇ ರೀತಿ ನರಸಿಂಹರಾಜ ಕ್ಷೇತ್ರದಲ್ಲಿ 59,749 ಮತದಾರರನ್ನು ಕೈಬಿಡಲು ಮುಂದಾಗಿದ್ದಾರೆ. ಇದರಲ್ಲಿ 40 ಸಾವಿರ ಮುಸ್ಲಿಮ್ ಮತದಾರೇ ಇದ್ದಾರೆ. ಹೀಗಾದರೆ ತನ್ವೀರ್ ಸೇಠ್ ಅಂತ ಅಲ್ಪಸಂಖ್ಯಾತ ನಾಯಕರು ಹೇಗೆ ಚುನಾವಣೆ ಗೆಲ್ಲಲು ಸಾಧ್ಯ ಎಂದು ಪ್ರಶ್ನಿಸಿದರು.

1985ರ ನಂತರ ಹುಟ್ಟಿದವರು ಮ್ಯಾಪಿಂಗ್ ಗೆ ಒಳಪಡುವುದಿಲ್ಲ. ಬಳಿಕ ಹುಟ್ಟಿದವರು 2002ರ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಏನಿತ್ತು 2025ರಲ್ಲಿ ಏನಿದೆ ಅವೆರೆಡೂ ಮ್ಯಾಪಿಂಗ್ ಆಗಬೇಕು. ಅದರಲ್ಲಿ ಸ್ವಲ್ಪ ವ್ಯತ್ಯಾಸ ಆದರೂ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುತ್ತದೆ. ಎಲ್ಲವೂ ಸರಿಯಾಗಬೇಕು ಎಂದರೆ ನಮ್ಮ, ತಂದೆ ಮತ್ತು ತಾತ ಅವರ ಮತದಾರರ ಕಾರ್ಡ್‌ ಗಳನ್ನು ತರಬೇಕು. ಅವುಗಳನ್ನು ತರಲು ಸಾಧ್ಯವೇ ಎಂದು ಕೇಳಿದರು.

ಎಸ್.ಐ.ಆರ್ ನಲ್ಲಿ ತಂದೆಯದು ಮ್ಯಾಪಿಂಗ್ ಆಗಲಿಲ್ಲ ಎಂದರೆ ಅವರ ಮಕ್ಕಳು ಮ್ಯಾಪಿಂಗ್ ಗೆ ಒಳಪಡುವುದಿಲ್ಲ. ಹೀಗೆ ಹಲವಾರು ರೀತಿ ಹುನ್ನಾರ ಮಾಡಿ 2028ಕ್ಕೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಯತ್ನಿಸುತ್ತಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರೇಮಾ ಶಂಕರ್, ಮುಖಂಡರುಗಳಾದ ಬಿ.ಎಂ.ರಾಮು, ಅಬ್ರಹಾರ್, ಗಿರೀಶ್, ಮಾಧ್ಯಮ ವಕ್ತಾರ ಕೆ.ಮಹೇಶ್ ಉಪಸ್ಥಿತರಿದ್ದರು.

ದೇಶದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಏನು ತಿನ್ನಬೇಕು, ಏನು ಬಳಸಬೇಕು, ಏನು ಉಳಿಸಬೇಕು ಎಂಬುದನ್ನು ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

ಚಿನ್ನ ಖರೀದಿಸಬೇಡಿ, ವಿದೇಶಕ್ಕೆ ಹೋಗಬೇಡಿ, ಪೆಟ್ರೋಲ್ ಮತ್ತು ಗ್ಯಾಸ್ ಮಿತವಾಗಿ ಬಳಸಿ. ರಸಗೊಬ್ಬ ಬಳಸಬೇಡಿ, ಮೆಟ್ರೋದಲ್ಲಿ ಓಡಾಡಿ.‌ ಮನೆಯಲ್ಲೇ ಕೆಲಸಮಾಡಿ ಎಂದು ಮೋದಿ ಕರೆಕೊಟ್ಟಿದ್ದಾರೆ. 12 ವರ್ಷ ಆಡಳಿತ ನಡೆಸಿದ ಪ್ರಧಾನಿ ಜನಸಾಮಾನ್ಯರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡಿರುವುದು ಖಂಡನೀಯ ಎಂದರು.

Tags

M. Laxman
share
ವಾರ್ತಾಭಾರತಿ
ವಾರ್ತಾಭಾರತಿ
Next Story
X