Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಪ್ರೊ.ಮುಜಾಫರ್ ಅಸ್ಸಾದಿ ಇರುತ್ತಿದ್ದರೆ...

ಪ್ರೊ.ಮುಜಾಫರ್ ಅಸ್ಸಾದಿ ಇರುತ್ತಿದ್ದರೆ ಎಸ್‌ಐಆರ್ ಬಗ್ಗೆ ಚರ್ಚಿಸುತ್ತಿದ್ದರು: ದಿನೇಶ್ ಅಮಿನ್ ಮಟ್ಟು

ಪ್ರೊ.ಮುಜಾಫರ್ ಅಸ್ಸಾದಿ ಸ್ಮರಣಾರ್ಥ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 Aug 2026 11:11 PM IST
share
ಪ್ರೊ.ಮುಜಾಫರ್ ಅಸ್ಸಾದಿ ಇರುತ್ತಿದ್ದರೆ ಎಸ್‌ಐಆರ್ ಬಗ್ಗೆ ಚರ್ಚಿಸುತ್ತಿದ್ದರು: ದಿನೇಶ್ ಅಮಿನ್ ಮಟ್ಟು

ಮೈಸೂರು: ಪ್ರೊ. ಮುಜಾಫರ್ ಅಸ್ಸಾದಿ ಅವರು ಇರುತ್ತಿದ್ದರೆ ಚುನಾವಣೆಯ ಪ್ರಕ್ರಿಯೆಯ ಎಸ್‌ಐಆರ್ ಬಗ್ಗೆ ಮಾತನಾಡುತ್ತಿದ್ದರು. ಅಲ್ಲದೇ ಜೆನ್ ಝೀಗಳ ಹೋರಾಟದ ರೂಪುರೇಷೆಗಳ ಬಗ್ಗೆ ವಿಸ್ತೃತ ಚರ್ಚೆ ಮಾಡುತಿದ್ದರು. ಇವರ ನಿರ್ವಾತ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮಿನ್‌ ಮಟ್ಟು ಹೇಳಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗ, ಸಾರ್ವಜನಿಕ ಆಡಳಿತ ವಿಭಾಗ ಮತ್ತು ಮೈಸೂರು ಓಪನ್ ಫೋರಂ ವತಿಯಿಂದ ಮಾನಸಗಂಗೋತ್ರಿಯ ಬಿ.ಎಂ.ಶ್ರೀಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರೊ.ಮುಜಾಫರ್ ಅಸ್ಸಾದಿ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶ್ವವಿದ್ಯಾನಿಲಯ ಪ್ರವೇಶಿಸಲಾಗದವರ ಬಳಿಗೆ ತೆರಳಿದ ಸಾಮಾಜಿಕ ಬುದ್ಧಿಜೀವಿ ಪ್ರೊ.ಮುಜಾಫರ್ ಅಸ್ಸಾದಿ. ವಿವಿ ಆವರಣಕ್ಕೆ ಕೂಲಿಕಾರ್ಮಿಕರು, ಆದಿವಾಸಿಗಳು, ಬಡವರಿಗೆ ಪ್ರವೇಶ ಇಲ್ಲ. ವಿವಿಗಳಿಗೆ ಪ್ರವೇಶ ದೊರೆಯದ ಜನಗಳ ಬಳಿಗೆ ಹೋದವರು ಅಸ್ಸಾದಿ. ಅವರು ದಂತಗೋಪುರದ ಪ್ರಾಧ್ಯಾಪಕರಾಗಲಿಲ್ಲ. ಬೀದಿಯಲ್ಲಿ ನಿಂತು ಹೋರಾಟ ಮಾಡುತ್ತಿದ್ದರು. ನೊಂದವರ ಪರ ಬರೆಯುತ್ತಿದ್ದರು. ಅವರಿಗಾಗಿ ಹೋರಾಡುತ್ತಿದ್ದರು ಎಂದು ತಿಳಿಸಿದರು.

ಅಸ್ಸಾದಿ ಅವರಿಗೆ ಹೊಂದಾಣಿಕೆ ಮನೋಭಾವ ಇದ್ದಿದ್ದರೆ, ವಿಶ್ವವಿದ್ಯಾನಿಲಯವೊಂದರ ಕುಲಪತಿಯಾಗಿ ನಿವೃತ್ತರಾಗಬೇಕಿತ್ತು. ಆದರೆ, ಅವರ ಜೀವನದುದ್ದಕ್ಕೂ ಸೈದ್ಧಾಂತಿಕವಾಗಿ ಬದುಕಿದವರು. ಅಸ್ಸಾದಿ ಅವರಿಗೆ ಹುದ್ದೆಗಿಂತ ಸೈದ್ಧಾಂತಿಕ ನಿಲುವು ತುಂಬ ಮುಖ್ಯವಾಗಿತ್ತು ಎಂದು ನುಡಿದರು.

ರಾಜ್ಯಶಾಸ್ತ್ರ ಅಧ್ಯಯನ ವಿಭಾಗ ಮುಖ್ಯಸ್ಥ, ಪ್ರೊ.ಕೃಷ್ಣ ಹೊಂಬಾಳ್ ಮಾತನಾಡಿ, ವ್ಯಕ್ತಿಗೆ ವೈಯಕ್ತಿಕ, ಸಾಮುದಾಯಿಕ, ಧಾರ್ಮಿಕ ಹಾಗೂ ರಾಷ್ಟ್ರೀಯತೆ ಬಗ್ಗೆ ಯಾವ ನಿಲುವು ಹೊಂದಬೇಕು ಎಂದು ಸಂದಿಗ್ಧತೆ ಇರುತ್ತದೆ. ಆ ಸಂದಿಗ್ಧತೆಯನ್ನು ಮೀರಿದವರು ಮುಜಾಫರ್ ಅಸ್ಸಾದಿ ಎಂದು ನುಡಿದರು.

ತುಮಕೂರು ವಿವಿಯ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಕೆ.ಮಹಾಲಿಂಗು ಅವರು, ಸಾಮಾಜಿಕ ಚಳವಳಿ ಮತ್ತು ಮೌಲ್ಯಾಧಾರಿತ ವಿಚಾರಗಳು ಕುರಿತು ವಿಷಯ ಮಂಡನೆ ಮಾಡಿದರು.

ಮೈವಿವಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ರವಿ ಜೋಶಿ, ಹೈದರಾಬಾದ್‌ನ ಎಂಎಎನ್‌ಯುಯು ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಡಾ.ಶಬನ ಫರ್ಹಾನ್, ಸಂಚಾಲಕರಾದ ಡಾ.ಜಿ.ಟಿ.ರಾಮಚಂದ್ರಪ್ಪ, ಡಾ.ಸಿ.ಎಲ್.ಸೋಮಶೇಖರ್, ಪ್ರೊ.ಉಮಾಪತಿ, ಪ್ರೊ.ಬೆಳ್ಳಿಯಪ್ಪ, ಪ್ರೊ.ಮುಜಾಫರ್ ಅಸ್ಸಾದಿ ಅವರ ಪತ್ನಿ ಮತ್ತಿತರರು ಹಾಜರಿದ್ದರು.

ಜೆನ್-ಝೀ ನಿಲುವುಗಳ ಬಗ್ಗೆ ಅನುಮಾನ ಇದೆ. ಅಹಿಂದ ಸಮಾನ ದುಃಖಿಗಳ ಸಂಘಟನೆ ಆಗಬೇಕು. ಸಾಮಾಜಿಕ ಬುದ್ಧಿಜೀವಿಗಳನ್ನು ಸಾಮ, ದಾನ, ದಂಡವನ್ನು ಬಳಿಸಿ ಹತ್ತಿಕ್ಕಲಾಗುತ್ತಿದೆ. ಪ್ರಗತಿಪರ ಮುಸ್ಲಿಮರು ಮೌನ ವಹಿಸಿದ್ದಾರೆ. ವಿಶ್ವವಿದ್ಯಾನಿಲಯಗಳಲ್ಲಿ ಮುಸ್ಲಿಮ್ ಅಧ್ಯಾಪಕರ ಸಂಖ್ಯೆ ಕ್ಷೀಣಿಸುತ್ತಿದೆ.

-ದಿನೇಶ್ ಅಮಿನ್‌ ಮಟ್ಟು, ಹಿರಿಯ ಪತ್ರಕರ್ತ.

Tags

Prof. Muzaffar AssadiDinesh Amin Mattu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X