Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ದಸರಾ ಮಹೋತ್ಸವ | 10 ಕೋಟಿ...

ದಸರಾ ಮಹೋತ್ಸವ | 10 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ : ಸಚಿವ ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ23 Sept 2024 8:14 PM IST
share
ದಸರಾ ಮಹೋತ್ಸವ | 10 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ : ಸಚಿವ ಮಹದೇವಪ್ಪ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 10 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ದೀಪಾಲಂಕರ ಆಯೋಜಿಸಲಾಗಿದ್ದು, ವಿದ್ಯುತ್ ದೀಪಾಲಂಕಾರದ ಪೋಸ್ಟರ್ ಅನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬಿಡುಗಡೆಗೊಳಿಸಿದರು.

ನಗರದ ವಿಜಯನಗರ ಎರಡನೇ ಹಂತದಲ್ಲಿರುವ ಸೆಸ್ಕ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ನಗರದ 130 ಕಿ.ಮೀ ಪ್ರದೇಶದಲ್ಲಿ ವಿವಿಧ ಬಣ್ಣಗಳಿಂದ ಅ.3 ರಿಂದ‌ 21 ದಿನಗಳ ವರೆಗೆ ಲೈಟಿಂಗ್ಸ್ ಜಗಮಗಿಸಲಿದ್ದು, 6.5‌ ಕೋಟಿ ರೂ. ವೆಚ್ಚವಾಗಲಿದೆ. ಈ ಬಾರಿ ವಿಶೇಷವಾಗಿ ಡ್ರೋನ್ ಶೋ ಆಯೋಜಿಸಲಾಗಿದೆ. ಇದಕ್ಕೆ 3.5 ಕೋಟಿ ರೂ. ವೆಚ್ಚವಾಗಲಿದೆ ಎಂದು ಮಾಹಿತಿ ನೀಡಿದರು.

ನಗರದ ಕೆ.ಆ‌ರ್.ವೃತ್ತದಿಂದ ಡಿ.ದೇವರಾಜ ಅರಸು ರಸ್ತೆ, ಕಾಫಿ ಡೇ ವೃತ್ತ ಮತ್ತು ಹಳೆ ಜಿಲ್ಲಾಧಿಕಾರಿಗಳ ಕಛೇರಿ ರಸ್ತೆ ಹಾಗೂ ಹೊರ ವರ್ತುಲ ರಸ್ತೆಯ ಬಳಿ ಇರುವ ಹಿನಕಲ್ ಮೇಲ್ಸೇತುವೆ ಎಲ್.ಇ.ಡಿ ಬಲ್ಬ್‌ಗಳ ವಿಶೇಷ ವಿನ್ಯಾಸ ಮಾಡಲಾಗುವುದು. 100 ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಇರಲಿದೆ ಎಂದು ಹೇಳಿದರು.

ಭಾರತದಲ್ಲಿ ಪ್ರಜಾಪ್ರಭುತ್ವ ಸಾಗಿಬಂದ ಹಾದಿ, ಭುವನೇಶ್ವರಿ, ಸೋಮನಾಥೇಶ್ವರ ದೇವಾಲಯ, ಭಾರತದ ಸಂವಿಧಾನದ ಪ್ರಸ್ತಾವನೆ, ಮೈಸೂರು ರಾಜ ಮನೆತನದ ಅರಸರಾದ ರಾಜ ಮುಮ್ಮಡಿ ಕೃಷ್ಣರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪನಂಜಮ್ಮಣ್ಣಿ ದೇವಿ, ರಾಜ ಜಯಚಾಮರಾಜೇಂದ್ರ ಒಡೆಯರ್, ರಾಜ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೇರಿದಂತೆ 65 ಪ್ರತಿಕೃತಿಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಡ್ರೋನ್ ಶೋ:

ಇದೇ ಮೊದಲ ಬಾರಿಗೆ ಬೃಹತ್ ಡ್ರೋನ್ ಶೋ. ಕಾರ್ಯಕ್ರಮವನ್ನು ಆಯೋಜಿಸಲು ಯೋಚಿಸಲಾಗಿದೆ. ಎಲ್.ಇ.ಡಿ. ಬಲ್ಬ್‌ಗಳನ್ನು ಅಳವಡಿಸಿರುವ ಸುಮಾರು 1,500 ಸಂಖ್ಯೆ ಡ್ರೋನ್‌ಗಳನ್ನು ಬಳಸಿ ಆಕಾಶದಲ್ಲಿ ಅದ್ಭುತ ವಿನ್ಯಾಸಗಳನ್ನು ಮೂಡಿಸಲು ಯೋಜಿಸಲಾಗಿದೆ ಎಂದರು.

ಡ್ರೋನ್ ಶೋ ಅ.6 ಮತ್ತು ಅ.7 ಹಾಗೂ ಅ.11 ಮತ್ತು ಅ.12 ರಂದು ನಗರದ ಬನ್ನಿಮಂಟಪದಲ್ಲಿರುವ ಪಂಜಿನ ಕವಾಯತು ಮೈದಾನದಲ್ಲಿ ರಾತ್ರಿ 8 ಗಂಟೆಯಿಂದ 8.15 ವರೆಗೆ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅ.6 ಮತ್ತು ಅ.7 ರಂದು ಸಾರ್ವಜನಿಕರಿಗೆ ಉಚಿತವಾಗಿ ವೀಕ್ಷಿಸಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಚೆಸ್ಕಾಂ ಅಧ್ಯಕ್ಷ ರಮೇಶ್ ಬಾಬು ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಸೆಸ್ಕ್ ಎಂಡಿ ಜಿ.ಶೀಲಾ, ತಾಂತ್ರಿಕ ವಿಭಾಗದ ನಿರ್ದೇಶಕ ಎಂ.ಮುನಿಗೋಪಾಲ ರಾಜು, ಹಣಕಾಸು ವಿಭಾಗದ ನಿರ್ದೇಶಕ ಶೇಖ್ ಮಹೀಮುಲ್ಲಾ, ಅಧೀಕ್ಷ ಇಂಜಿನಿಯರ್ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X