Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಉದಯಗಿರಿ ಕಲ್ಲುತೂರಾಟ ಪ್ರಕರಣ | ಪೊಲೀಸರು...

ಉದಯಗಿರಿ ಕಲ್ಲುತೂರಾಟ ಪ್ರಕರಣ | ಪೊಲೀಸರು ಅಮಾಯಕರನ್ನು ಬಂಧಿಸುತ್ತಿದ್ದಾರೆ : ಎಂ.ಲಕ್ಷ್ಮಣ್ ಆರೋಪ

"ಒಂದು ಸಾವಿರ ಜನರ ಮೇಲೆ ಎಫ್‌ಐಆರ್ ಹಾಕಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ13 Feb 2025 5:27 PM IST
share
ಉದಯಗಿರಿ ಕಲ್ಲುತೂರಾಟ ಪ್ರಕರಣ | ಪೊಲೀಸರು ಅಮಾಯಕರನ್ನು ಬಂಧಿಸುತ್ತಿದ್ದಾರೆ : ಎಂ.ಲಕ್ಷ್ಮಣ್ ಆರೋಪ

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಎದುರು ನಡೆದ ಕಲ್ಲು ತೂರಾಟ ಘಟನೆ ಸಂಬಂಧ ನೂರಾರು ಅಮಾಯಕ ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.

ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಪೊಲೀಸರು ತಮ್ಮ ಕರ್ತವ್ಯ ಲೋಪವನ್ನು ಮುಚ್ಚಿಕೊಳ್ಳಲು ಬರೋಬ್ಬರಿ ಒಂದು ಸಾವಿರ ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿಲ್ಲ, ಜನರ ನಡುವೆ ಅವಿತಿದ್ದ ಆರೆಸ್ಸೆಸ್‌ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಸೂಕ್ತವಾದ ತನಿಖೆ ನಡೆಸಬೇಕು, ಯಾವುದೇ ಕಾರಣಕ್ಕೂ ಅಮಾಯಕರನ್ನು ಬಂಧಿಸಬಾರದು ಎಂದು ಆಗ್ರಹಿಸಿದರು.

ಕಲ್ಲು ತೂರಾಟ ಘಟನೆಗೂ ಮುನ್ನ ಧರ್ಮನಿಂದನೆ ಪೋಸ್ಟ್ ಹಾಕಿದ್ದ ಪಾಂಡುರಂಗ ಅಲಿಯಾಸ್ ಸತೀಶ್ ಎಂಬಾತನನ್ನು ಠಾಣೆಗೆ ಕರೆತಂದ ಪೊಲೀಸರು ಸೂಕ್ತ ವಿಚಾರಣೆ ನಡೆಸದೆ ಆತನಿಗೆ ಕಾಫಿ, ತಿಂಡಿ ಕೊಟ್ಟು ರಾಜಾತಿಥ್ಯ ನೀಡಿದ್ದರು. ದೂರು ನೀಡಲು ಬಂದವರಿಗೆ ಇಂತಹದ್ದೆಲ್ಲ ಮಾಮೂಲು ಇದಕ್ಕೆಲ್ಲ ಎಫ್‌ಐಆರ್ ಹಾಕುತ್ತಾ ಕೂರಲು ಸಾಧ್ಯವೇ? ಎಂದು ಉಡಾಫೆಯಾಗಿ ಉತ್ತರಿಸಿದ್ದನ್ನು ಕಂಡು ಜನರು ಕುಪಿತರಾಗಿ ಪ್ರತಿಭಟನೆ ನಡೆಸಿದ್ದಾರೆ. ಇದೇ ಸಂದರ್ಭವನ್ನು ಕಾಯುತ್ತಿದ್ದ ಆರೆಸ್ಸೆಸ್‌ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ ಅದರ ಆರೋಪಗಳು ಮುಸ್ಲಿಂ ಸಮುದಾಯದ ಮೇಲೆ ಬರುವಂತೆ ವ್ಯವಸ್ಥಿತವಾಗಿ ಸಂಚು ನಡೆಸಿದ್ದಾರೆ ಎಂದು ಹೇಳಿ, ಆರೋಪಿ ಪಾಂಡುರಂಗ ಅಲಿಯಾಸ್ ಸತೀಶ್ ಎಂಬಾತನು ಆರೆಸ್ಸೆಸ್‌ ಬೈಠಕ್‌ನಲ್ಲಿ ಭಾಗವಹಿಸಿರುವ ಭಾವಚಿತ್ರಗಳನ್ನು ಪ್ರದರ್ಶಿಸಿದರು.

ಕಮೀಷನರ್ ಎದುರು ಕುಳಿತ ರೌಡಿಶೀಟರ್ :

ʼವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ಇಲ್ಲಿಗೆ ಬಂದು ಪೊಲೀಸ್ ಠಾಣೆಯಲ್ಲಿ ಸಭೆ ಮಾಡಿದ್ದಾರೆ. ಇವರನ್ನು ಪೊಲೀಸರು ಇಲ್ಲಿಗೆ ಬಿಟ್ಟಿದ್ದೇ ತಪ್ಪುʼ ಎಂದು ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದರು.

ʼಒಬ್ಬ ವಿರೋಧ ಪಕ್ಷದ ನಾಯಕರಾಗಿ ಅಶೋಕ್ ಅವರು, ಧರ್ಮ ನಿಂದನೆ ಪೋಸ್ಟ್ ಹಾಕಿದ್ದ ವ್ಯಕ್ತಿಯ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ಎಂದು ಪೊಲೀಸರಿಗೆ ತಿಳಿವಳಿಕೆ ನೀಡುವ ಬದಲು ಕೇವಲ ಮುಸ್ಲಿಂ ಸಮುದಾಯದ ವಿರುದ್ಧ ಮಾತನಾಡಿದ್ದಾರೆ. ಅಲ್ಲದೇ, ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ಜೊತೆ ರೌಡಿಶೀಟರ್ ರಾಕೇಶ್‌ಗೌಡ ಅಲಿಯಾಸ್ ರಾಕಿ ಎಂಬಾತನನ್ನು ಕರೆತಂದು ಪೊಲೀಸ್ ಆಯುಕ್ತರು, ಉಪ ಆಯುಕ್ತರ ಎದುರು ಕುರ್ಚಿಯಲ್ಲಿ ಕೂರಿಸಿದ್ದಾರೆ. ಈ ರೌಡಿಶೀಟರ್ ಬಗ್ಗೆ ಗೊತ್ತಿದ್ದರೂ ಹಿರಿಯ ಪೊಲೀಸ್ ಅಧಿಕಾರಿಗಳು ಇವನ ಎದುರು ಘಟನಾವಳಿ ಬಗ್ಗೆ ಚರ್ಚೆ ಮಾಡಿದ್ದಾರೆ. ಇದು ನಾಚಿಕೆಗೇಡಿನ ವಿಷಯʼ ಎಂದರು.

Tags

M.LaxmanUdayagiri stone pelting case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X