Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಕೊಲೆ ಪ್ರಕರಣ: ನಟ ಚಾಲೆಂಜಿಂಗ್ ಸ್ಟಾರ್...

ಕೊಲೆ ಪ್ರಕರಣ: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ವಾರ್ತಾಭಾರತಿವಾರ್ತಾಭಾರತಿ11 Jun 2024 10:31 AM IST
share
ಕೊಲೆ ಪ್ರಕರಣ: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಮೈಸೂರು, ಜೂ.11: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಖ್ಯಾತ ಕನ್ನಡ ಚಲನಚಿತ್ರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಿತ್ರದುರ್ಗ ನಿವಾಸಿ ರೇಣುಕಾ ಸ್ವಾಮಿ ಎಂಬವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಅವರನ್ನು ಮೈಸೂರಿನಲ್ಲಿರುವ ಜಿಮ್ ನಿಂದ‌ ಹೊರಡುತ್ತಿದ್ದ ವೇಳೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜೂ.9 ರ ರವಿವಾರ ಮೈಸೂರಿಗೆ ಆಗಮಿಸಿದ ನಟ ದರ್ಶನ್, ರಾಡಿಸನ್ ಬ್ಲೂ ಹೋಟೆಲ್ ನ ಕೊಠಡಿಯೊಂದರಲ್ಲಿ ವಾಸ್ತವ್ಯ ಹೂಡಿದ್ದರು. ಜೂ.10 ರಂದು ಬೆಳಿಗ್ಗೆ ಟಿ.ನರಸೀಪುರ ರಸ್ತೆಯಲ್ಲಿರುವ ಅವರ ಫಾಮ್೯ ಹೌಸ್ ಗೆ ಭೇಟಿ ನೀಡಿದ ಬಳಿಕ ನಗರದ ಲಲಿತ್ ಮಹಲ್ ನಲ್ಲಿ ನಡೆಯುತ್ತಿರುವ ದೇವಿ ಚಿತ್ರ ಚಿತ್ರೀಕರಣದಲ್ಲಿ ಭಾಗವಹಿಸಿ ಸಂಜೆ ಇದೇ ಹೋಟೆಲ್ ನಲ್ಲಿ ತಂಗಿದ್ದರು ಎನ್ನಲಾಗಿದೆ.

ಮಂಗಳವಾರ ಬೆಳಿಗ್ಗೆ 8 ಗಂಟೆ ವೇಳೆಗೆ ಕುವೆಂಪು ನಗರದಲ್ಲಿರುವ ಗೋಲ್ಡನ್ ಜಿಮ್ ನಿಂದ ಹೊರಬಂದು ಪಕ್ಕದಲ್ಲಿದ್ದ ಜ್ಯೂಸ್ ಅಂಗಡಿಯಲ್ಲಿ ಕಲ್ಲಂಗಡಿ ಜ್ಯೂಸ್ ಕುಡಿದು ಕಾರು ಹತ್ತುವ ವೇಳೆ ಸುತ್ತುವರಿದು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು, ದರ್ಶನ್ ಅವರು ವಾಸ್ತವ್ಯ ಹೂಡಿದ್ದ ರಾಡಿಸನ್ ಬ್ಲೂ ಹೋಟೆಲ್ ಗೆ ಕರೆದುಕೊಂಡು ಬಂದು ಕೊಠಡಿ ಪರಿಶೀಲಿಸಿದ ಬಳಿಕ ಪೊಲೀಸ್ ವಾಹನದಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಮೂಲತಃ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆ ನಿವಾಸಿಯಾಗಿದ್ದ ರೇಣುಕಾಸ್ವಾಮಿ ಬೆಂಗಳೂರಿನ ಮೆಡಿಕಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಜೂ.8ರಂದು ಬೆಳಗ್ಗೆಯಿಂದ ಮನೆಯಿಂದ ಕೆಲಸಕ್ಕೆಂದು ಹೋಗಿದ್ದ ರೇಣುಕಾಸ್ವಾಮಿ ವಾಪಸ್ ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಮನೆಯವರು ಪೊಲೀಸ್ ದೂರು ನೀಡಿದ್ದರು. ಈ ನಡುವೆ ಜೂ.9ರಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಮೋರಿಯೊಂದರಲ್ಲಿ ರೇಣುಕಾಸ್ವಾಮಿಯ ಮೃತದೇಹ ಪತ್ತೆಯಾಗಿತ್ತು.

ಈ ಬಗ್ಗೆ ತನಿಖೆ ನಡೆಸಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದಲ್ಲಿ ನಟ ದರ್ಶನ್ ಸಹಿತ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಮೈಸೂರಿನಲ್ಲಿ ಓಡಾಡಲು ಇಟ್ಟುಕೊಂಡಿದ್ದ ಲ್ಯಾಂಡ್ ರೋವರ್ ಕಾರು ಕೆ.ಎ.01-ಎಂ.ವೈ.7999 ಕಾರನ್ನು ಹೋಟೆಲ್ ಮುಂಭಾಗದಲ್ಲೇ ನಿಲ್ಲಿಸಲಾಗಿದೆ. ನಟ ದರ್ಶನ್ ಗೆ ಪ್ರಿಯಾವಾದ ನಂಬರ್ ಇದಾಗಿದ್ದು ಇದೇ ನಂಬರಿನ ಹಲವು ಕಾರುಗಳು ನಟ ದರ್ಶನ್ ಬಳಿ ಇದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X