Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ವೀರನಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ...

ವೀರನಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಸಚಿವ ಈಶ್ವರ್ ಖಂಡ್ರೆ ಚಾಲನೆ

ಮೇಳೈಸಿದ ಸಾಂಸ್ಕೃತಿಕ ಕಲಾ ತಂಡಗಳ ವೈಭವ: ಕಿಕ್ಕಿರಿದು ತುಂಬಿದ್ದ ಜನರು

ವಾರ್ತಾಭಾರತಿವಾರ್ತಾಭಾರತಿ4 Aug 2025 5:02 PM IST
share
ವೀರನಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಸಚಿವ ಈಶ್ವರ್ ಖಂಡ್ರೆ ಚಾಲನೆ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಗಜಪಯಣಕ್ಕೆ ಸೋಮವಾರ ವೀರನಹೊಸಹಳ್ಳಿಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡುವ ಮೂಲಕ ದಸರೆಗೆ ಮುನ್ನುಡಿ ಬರೆದರು.

ಮೊದಲ ತಂಡದ ಅಭಿಮನ್ಯು ಸಾರಥ್ಯದಲ್ಲಿ ಧನಂಜಯ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಮಹೇಂದ್ರ, ಕಾವೇರಿ, ಬಳ್ಳೆ‌ಲಕ್ಷ್ಮಿ ಆನೆಗಳಿಗೆ ಪುರೋಹಿತರು ಪೂಜೆ ಸಲ್ಲಿಸಿದರು. ಸಚಿವ ಈಶ್ವರ್ ಖಂಡ್ರೆ ಪುಷ್ಪಾರ್ಚನೆ ಮಾಡಿ ಶುಭ ಹಾರೈಸಿದರು.

ದಸರಾ ಆಚರಣೆಯ ಮೊದಲ ಕಾರ್ಯಕ್ರಮ ಇದಾಗಿದ್ದು, ಇಂದಿನಿಂದ ದಸರಾ ಮಹೋತ್ಸವದ ಸಿದ್ಧತೆಗಳು ಆರಂಭಗೊಂಡಂತಾಗಿದೆ. ಇದೇ ಮೊದಲ ಬಾರಿಗೆ ಬಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ಕಿಕ್ಕಿರಿದು ಸೇರಿದ್ದು ಜಾತ್ರಾ ಮಹೋತ್ಸವದ ವಾತಾವರಣ ಸೃಷ್ಟಿಯಾಗಿತ್ತು.

ದಸರಾ ಗಜಪಯಣ ಆರಂಭ ಹಿನ್ನಲೆಯಲ್ಲಿ ವೀರನಹೊಸಹಳ್ಳಿ ಗ್ರಾಮ ತಳಿರು ತೋರಣಗಳಿಂದ ಸಿಂಗಾರಗೊಂಡಿತ್ತು. ಮಾವುತರು ಮತ್ತು ಮತ್ತು ಕುಟುಂಬದವರು ಗಜಯಪಯಣದೊಂದಿಗೆ ಮೈಸೂರಿನತ್ತ ಪ್ರಯಾಣ ಬೆಳೆಸಲು ಎಲ್ಲಾ ಸಾಮಾಗ್ರಿಗಳನ್ನು ಹೊತ್ತು ತಂದು ಸಿದ್ಧರಾಗಿದ್ದರು.

ಗಜಪಯಣದ ಬೀಳ್ಕೊಡಲು ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳೈಸಿದವು. ವೀರಗಾಸೆ, ಕಂಸಾಳೆ, ಪಟದ ಕುಣಿತ, ಪೂಜಾ ಕುಣಿತ, ಡೊಳ್ಳು ಕುಣಿತದೊಂದಿಗೆ ಹಾಡಿಮಕ್ಕಳ ಅರಣ್ಯ ಕುಣಿತ ಕಣ್ಮನ ಸೆಳೆಯಿತು.

ಅರ್ಜುನ‌ ಪ್ರಶಸ್ತಿ ಪ್ರಧಾನ:

ಹಾಸನ ಜಿಲ್ಲೆಯಲ್ಲಿ ಕಾಡಾನೆ ಸೆರೆ ವೇಳೆ ಮೃತಪಟ್ಟ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಹೆಸರಿನ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ಪ್ರಧಾನ‌ಮಾಡಲಾಯಿತು.

ಮೊದಲ ಸಾಲಿನ ಪ್ರಶಸ್ತಿಗೆ ಭೀಮ ಆನೆಯ ಮಾವುತ ಗುಂಡಣ್ಣ ಹಾಗೂ ಕಾವಾಡಿ ನಂಜುಡಸ್ವಾಮಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಜಿ.ಡಿ.ಹರೀಶ್ ಗೌಡ ವಹಿಸಿದ್ದರು. ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಡಿ.ರವಿಶಂಕರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ , ಜಿ.ಪಂ.ಸಿಇಓ ಯುಕೇಶ್ ಕುಮಾರ್, ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಎಸ್ಪಿ ವಿಷ್ಣುವರ್ಧನ್, ಹುಣಸೂರು ಉಪ ವಿಭಾಗಾಧಿಕಾರಿ ವಿಜಯಕುಮಾರ್, ತಹಶೀಲ್ದಾರ್ ಮಂಜುನಾಥ್, ಡಿಸಿಎಫ್ ಪ್ರಭುಗೌಡ, ಮಾಲತಿ ಪ್ರಿಯಾ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಸಂಯೋಜಕ ಎನ್.ಭಾಸ್ಕರ್, ವಕೀಲ ಕಾಂತರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X