Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ಫೆಲೆಸ್ತೀನಿನಲ್ಲಿ ಶಾಂತಿ...

ಮೈಸೂರು | ಫೆಲೆಸ್ತೀನಿನಲ್ಲಿ ಶಾಂತಿ ಸ್ಥಾಪನೆಗೆ ಆಗ್ರಹ : ವಿಶ್ವಶಾಂತಿಗೆ ಒತ್ತಾಯಿಸಿ ಎಡಪಕ್ಷಗಳ ಜಂಟಿ ಸಮಿತಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Nov 2024 11:33 PM IST
share
Photo of protest

ಮೈಸೂರು : ಯುದ್ದ ವಿರೋಧಿಸಿ, ವಿಶ್ವಶಾಂತಿಗೆ ಒತ್ತಾಯಿಸಿ, ಫೆಲೆಸ್ತೀನ್‌ನಲ್ಲಿ ಶಾಂತಿ ಮರುಸ್ಥಾಪಿಸಲು ಆಗ್ರಹಿಸಿ, ಲಿಬರೇಶನ್ ಎಡಪಕ್ಷಗಳ ಜಂಟಿ ಸಮಿತಿ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

ಗಾಂಧಿ ಚೌಕ್‌ನಲ್ಲಿ ಸಮಾವೇಶಗೊಂಡು ಶಾಂತಿ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನಾ ನಿರತರು ವಿವಿಧ ಘೋಷಣೆಗಳನ್ನು ಕೂಗಿದರು. ಫೆಲೆಸ್ತೀನ್ ಸ್ವತಂತ್ರ ದೇಶವಾಗಬೇಕು. ಇಸ್ರೇಲ್ ಅಕ್ರಮಣ ನಿಲ್ಲಿಸಬೇಕು. ಶಾಂತಿ ಸಮಾಧಾನ ನೆಲೆಗೊಳ್ಳಬೇಕೆಂದು ಆಗ್ರಹಿಸಿದರು.

2023ರ ಅಕ್ಟೋಬರ್ 7ರ ಘಟನೆಗೆ ಪ್ರತಿಕಾರವೆಂದು ಇಸ್ರೇಲ್ ಈಗ ಗಾಝಾದ ಮೇಲೆ ಆಕ್ರಮಣ ನಡೆಸಿ ಅವರ ಮನೆ, ಆಸ್ಪತ್ರೆ, ಶಾಲೆ, ವಾಣಿಜ್ಯ ಕಟ್ಟಡಗಳೆಲ್ಲವನ್ನೂ ಧ್ವಂಸ ಮಾಡಿದೆ. 42 ಸಾವಿರ ಜನರಲ್ಲಿ 16 ಸಾವಿರ ಮಕ್ಕಳು ಮತ್ತು ಮಹಿಳೆಯರ ಹತ್ಯೆ ಮಾತ್ರವಲ್ಲದೇ, ಇಸ್ರೇಲ್‌ಗೆ ಪ್ರತಿರೋಧ ಒಡ್ಡುವ ಗುಂಪುಗಳಾದ ಹಮಾಸ್, ಹಿಝ್ಬುಲ್ಲಾ, ಹೌದಿಗಳಿಗೆ ಇರಾನ್, ಲೆಬನಾನ್, ಜೋರ್ಡಾನ್‌, ಇರಾಕ್ ದೇಶಗಳು ಬೆಂಬಲ ನೀಡುತ್ತಿವೆ ಎಂದು ಆ ದೇಶಗಳ ಮೇಲೆ ಅಕ್ರಮಣ ಮಾಡಲಾಗುತ್ತಿದೆ ಎಂದು ಪ್ರತಿಭಟನಾ ನಿರತರು ಅಸಮಾಧಾನ ವ್ಯಕ್ತಪಡಿಸಿದರು.

ಇದು ಜಗತ್ತಿನಲ್ಲಿ 3ನೇ ಮಹಾಯುದ್ಧದ ಹೊಸ್ತಿಲಿಗೆ ತಂದು ನಿಲ್ಲಿಸಿದೆ. ಮದ್ಯ ಪ್ರಾಚ್ಯದಲ್ಲಿ ಅರಬ್ ದೇಶಗಳನ್ನು ಹೆದರಿಸಿ ತನ್ನ ತಾಳಕ್ಕೆ ತಕ್ಕಂತೆ ಕುಣಿಯುವಂತೆ ಮಾಡಲು ಅಮೆರಿಕ-ಬ್ರಿಟನ್ ಮತ್ತಿತರ ಸಾಮಾಜ್ಯಶಾಹಿಗಳು ಈ ಯುದ್ಧದಲ್ಲಿ ಇಸ್ರೇಲ್ ಸೋಲದಂತೆ ತನ್ನ ಬೆಂಬಲ ಮುಂದುವರಿಸಿದೆ. ಅಮೆರಿಕ ನೇರವಾಗಿ ತನ್ನ ವಿಮಾನ ವಾಹಕ ಯುದ್ಧ ಹಡಗುಗಳನ್ನು ಇಸ್ರೇಲ್ ಹತ್ತಿರ ತಂದು ನಿಲ್ಲಿಸಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ, ತೀರಾ ಬಲಪಂಥೀಯ ಇಸ್ರೇಲ್ ಸರಕಾರಕ್ಕೆ ಮೋದಿ ಸರಕಾರ ಬೆಂಬಲ ನೀಡುತ್ತಿದೆ. ಫೆಲೆಸ್ತೀನ್ ಬೆಂಬಲಿಸಿದ ಚಾರಿತ್ರಿಕ ನಿರ್ಣಯವನ್ನು ಮೋದಿ ಸರಕಾರ ಬದಲಾಯಿಸಲು ಹೊರಟಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಕೂಡಲೇ ಫೆಲೆಸ್ತೀನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ನರಹತ್ಯೆಯನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿದರು.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಎನ್.ವಿಜಯ್ ಕುಮಾರ್, ಜಿ.ಜಯರಾಂ, ಜಗನ್ನಾಥ್, ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯರಾದ ಎಚ್.ಆರ್.ಶ್ರೇಷಾದ್ರಿ, ದೇವದಾಸ್, ಬೆಲವತ್ತ ರಾಜು, ಡಿ.ಜಗನ್ನಾಥ್, ಸಿಪಿಐ(ಎಂಎಲ್) ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ಚೌಡಳ್ಳಿ ಜವರಯ್ಯ, ಇನ್ಸಾಫ್ ಮುಖಂಡರಾದ ನೂರ್ ಮರ್ಚೆಂಟ್ ಮೆಹಬೂಬ್, ಸುಬ್ರಮಣ್ಯ, ರಾಜೀಂದ್ರ, ಅಣ್ಣಪ್ಪ, ಅಭಿ, ಭರತ್, ಉಗ್ರನರಸಿಂಹೇಗೌಡ ಮುಂತಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X