Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ಮೆಸ್ಕೋ ಶಿಕ್ಷಣ ಸಂಸ್ಥೆಯಲ್ಲಿ...

ಮೈಸೂರು | ಮೆಸ್ಕೋ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ26 Jan 2026 5:27 PM IST
share
ಮೈಸೂರು | ಮೆಸ್ಕೋ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಮೈಸೂರು: ಮೆಸ್ಕೋ ಶಿಕ್ಷಣ ಸಂಸ್ಥೆಯಲ್ಲಿ ಜ.26ರಂದು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಹಶಿಕ್ಷಕಿ ಆಯಿಷ ಪರ್ವೀನ್ ಅವರು ಸಂವಿಧಾನದ ಪೀಠಿಕೆಯನ್ನು ಎಲ್ಲರಿಗೂ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಡಿಡಿಪಿಐ ರುಕ್ಸಾನ ನಾಝ್ನೀನ್ ಅವರು ಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನದ ಮೂಲಕ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಮಕ್ಕಳಿಂದ ಪ್ರದರ್ಶಿಸಲಾದ ಪ್ರತಿಯೊಂದು ಕಾರ್ಯಕ್ರಮವೂ ವೈವಿಧ್ಯತೆಯಲ್ಲಿ ಏಕತೆ ಹಾಗೂ ಸಾಂವಿಧಾನಿಕ ಹಕ್ಕುಗಳ ಘನತೆಯನ್ನು ಅತ್ಯಂತ ಅದ್ಭುತವಾಗಿ ಮೂಡಿಬಂದಿದೆ ಎಂದು ಶ್ಲಾಘಿಸಿದರು.

ಮುನ್ನೂರು ವರ್ಷಗಳ ಬ್ರಿಟಿಷರ ಆಳ್ವಿಕೆಯ ನಂತರ ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಜನರಿಂದ ಜನರಿಗಾಗಿ ರಚಿಸಲಾದ ಕಾನೂನು ನಿಯಮಗಳನ್ನು ನಾವು ಸಂವಿಧಾನ ಎನ್ನುತ್ತೇವೆ. ಕಡ್ಡಾಯ ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ಉತ್ತಮ ನಾಗರಿಕರಾಗಿ ಬದುಕುವ ಜವಾಬ್ದಾರಿ ಮುಂದಿನ ತಲೆಮಾರಿನ ಮೇಲಿದೆ. ಅದಕ್ಕೆ ಪೂರಕವಾದ ವಾತಾವರಣ ನಿರ್ಮಾಣ ಕುಟುಂಬ ಮತ್ತು ಶಾಲೆಯ ಹೊಣೆಗಾರಿಕೆಯಾಗಿದೆ. ಇದರ ಬಗ್ಗೆ ಜಾಗೃತರಾಗಬೇಕು ಎಂದು ಹೇಳಿದರು.

ಪ್ರೊ.ಶಬ್ಬೀರ್ ಮುಹಮ್ಮದ್‌ ಮುಸ್ತಫಾ ಮಾತನಾಡಿ, ವಿಶ್ವದ ಅತ್ಯುತ್ತಮ ಸಂವಿಧಾನ ನಮ್ಮ ದೇಶದ ಸಂವಿಧಾನವಾಗಿದ್ದು, ಅದು ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಸಮರ್ಪಕವಾಗಿ ಒಳಗೊಂಡಿದೆ. ಸಂವಿಧಾನವನ್ನು ಕಾರ್ಯಗತಗೊಳಿಸದೇ ಹೋದರೆ ಅದು ಕೇವಲ ಪುಸ್ತಕದಲ್ಲೇ ಉಳಿಯುವ ಅಪಾಯವಿದೆ ಎಂಬ ಡಾ. ಅಂಬೇಡ್ಕರ್ ಅವರ ಮಾತುಗಳನ್ನು ಅವರು ನೆನಪಿಸಿದರು. ಅಧಿಕಾರ ಒಬ್ಬ ವ್ಯಕ್ತಿಯಲ್ಲಿ ಕೇಂದ್ರಿತವಾದರೆ ಸರ್ವಾಧಿಕಾರ ಧೋರಣೆಗೆ ದಾರಿ ಮಾಡಿಕೊಡುತ್ತದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಬ್ದುಲ್ ಖಾದರ್ ಸೇಠ್ ಮಾತನಾಡಿ, ಅನೇಕ ಜಾತಿ, ಮತ, ಪಂಥ, ಭಾಷೆ ಹಾಗೂ ಪ್ರಾಂತ್ಯಗಳಿದ್ದರೂ, ಎಲ್ಲರೂ ಏಕತೆಯಿಂದ ಬದುಕುತ್ತಿರುವುದೇ ದೇಶದ ಹಿರಿಮೆ ಎಂದು ಹೇಳಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳು :

ಕಾರ್ಯಕ್ರಮದಲ್ಲಿ ದೇಶಭಕ್ತಿಗೀತೆಗಳಿಗೆ ನೃತ್ಯ, ಸಂವಿಧಾನದ ಹಕ್ಕುಗಳ ಮಹತ್ವ ಸಾರುವ ನಾಟಕ, ಭಾಷಣಗಳು, ದೇಶದ ವಿವಿಧ ರಾಜ್ಯಗಳ ಉಡುಗೆ-ತೊಡುಗೆ, ಸಂಸ್ಕೃತಿ, ಆಹಾರ ಪದ್ಧತಿ, ಪ್ರಸಿದ್ಧ ಸ್ಮಾರಕಗಳು ಹಾಗೂ ವೈವಿಧ್ಯತೆಯಲ್ಲಿ ಏಕತೆ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ಖಾದರ್ ಸೇಠ್, ಗೌರವ ಕಾರ್ಯದರ್ಶಿ ಪ್ರೊ.ಶಬ್ಬೀರ್ ಮುಹಮ್ಮದ್‌ ಮುಸ್ತಫಾ, ಖಜಾಂಚಿ ಶಕೀಲ್ ಅಹ್ಮದ್ ಖಾನ್, ಪದಾಧಿಕಾರಿ ಮಝ್ಹರುಲ್ ಹಖ್, ಮುಖ್ಯ ಅತಿಥಿ ರುಕ್ಸಾನ ನಾಝ್ನೀನ್, ಮೆಸ್ಕೋ ಐಟಿಐ ಕಾಲೇಜಿನ ಪ್ರಾಂಶುಪಾಲ ಎಂ.ಕಲೀಂ ಅಹ್ಮದ್, ಪಿಯುಸಿ ಹಾಗೂ ಪದವಿ ಕಾಲೇಜಿನ ಪ್ರಾಚಾರ್ಯ ಆಸಿಫ್ ಖಾನ್ ಸೂರ್ಯಾನಿ, ಮುಖ್ಯೋಪಾಧ್ಯಾಯರಾದ ಶಾಹಿನ್ ಶಾತಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಹಶಿಕ್ಷಕಿ ಆಯಿಷಾ ಸಿದ್ದೀಖಾ ಸ್ವಾಗತಿಸಿದರು. ನುಜ್ಜತ್ ಖಾನಂ ವಂದನಾರ್ಪಣೆ ಸಲ್ಲಿಸಿದರು. ಗೌರವ ಅತಿಥಿಗಳ ಪರಿಚಯವನ್ನು ಆಯಿಷಾ ಪರ್ವೀನ್ ಮಾಡಿಕೊಟ್ಟರು. ಕಾರ್ಯಕ್ರಮ ನಿರೂಪಣೆಯನ್ನು ಹಲೀಮಾ ಖಾನಂ ನೆರವೇರಿಸಿದರು.

Tags

Education77th Republic Daymysuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X