Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು: ಪ್ರತಾಪ್ ಸಿಂಹ ವಿರುದ್ಧ FIR...

ಮೈಸೂರು: ಪ್ರತಾಪ್ ಸಿಂಹ ವಿರುದ್ಧ FIR ದಾಖಲಿಸುವಂತೆ ಕಾಂಗ್ರೆಸ್ ದೂರು

ವಾರ್ತಾಭಾರತಿವಾರ್ತಾಭಾರತಿ20 Sept 2026 12:03 AM IST
share
ಮೈಸೂರು: ಪ್ರತಾಪ್ ಸಿಂಹ ವಿರುದ್ಧ FIR ದಾಖಲಿಸುವಂತೆ ಕಾಂಗ್ರೆಸ್ ದೂರು

ಮೈಸೂರು: ಟಿ.ನರಸೀಪುರದಲ್ಲಿ ಶುಕ್ರವಾರ ನಡೆದ ಗಣಪತಿ ವಿಸರ್ಜನೆ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಮಸೀದಿ ಎದುರು ಪ್ರಚೋದನಕಾರಿಯಾಗಿ ಸರ್ಕಾರ ಮತ್ತು ಇನ್ಸ್ ಪೆಕ್ಟರ್ ವಿರುದ್ಧ ಮಾತನಾಡಿದ್ದರೂ ಏಕೆ ಆತನ ಮೇಲೆ FIR ದಾಖಲಿಸಿಲ್ಲ ಎಂದು ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ನಿಯೋಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಪ್ರಶ್ನಿಸಿತು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬೀರಿಹುಂಡಿ ಬಸವಣ್ಣ ಸೇರಿದಂತೆ ಕಾಂಗ್ರೆಸ್ ನಿಯೋಗ ಶನಿವಾರ ಎಸ್ಪಿ ಕಚೇರಿ ಭೇಟಿ ನೀಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ತಕ್ಷಣ ಪ್ರಕರಣ ದಾಖಲಿಸುವಂತೆ ದೂರು ಸಲ್ಲಿಸಿದರು.

ಪ್ರತಾಪ್ ಸಿಂಹ ಸರ್ಕಾರ ಮತ್ತು ಇನ್ಸ್ ಪೆಕ್ಟರ್ ವಿರುದ್ಧ ಪ್ರಚೋದನಾಕಾರಿಯಾಗಿ ಮಾತನಾಡಿದರೂ ಆತನ ಮೇಲೆ FIR ದಾಖಲು ಮಾಡದೆ ಏಕೆ ಬಿಟ್ಟಿರಿ. ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಎಂ.ಲಕ್ಷ್ಮಣ್ ಅಸಮಾಧಾನ ವ್ಯಕ್ತಪಡಿಸಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇದಿಯೋ ಬಿಜೆಪಿ ಪಕ್ಷ ಇದಿಯೋ ಗೊತ್ತಾಗುತ್ತಿಲ್ಲ.‌ ನಮ್ಮ ಪಕ್ಷ ಅಧಿಕಾರದಲ್ಲಿದ್ದರೂ ಅಧಿಕಾರಿಗಳು ಮಾತ್ರ ತಮ್ಮ ನಡೆಯನ್ನು ಇನ್ನೂ ಬಲಾಯಿಸಿಕೊಂಡಿಲ್ಲ. ತಕ್ಷಣ ಆತನ ವಿರುದ್ಧ ಕ್ರಮ‌ಕೈಗೊಳ್ಳದಿದ್ದರೆ ಕಾಂಗ್ರೆಸ್ ಪಕ್ಷದಿಂದ ದೊಡ್ಡ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬೀರಿಹುಂಡಿ ಬಸವಣ್ಣ ಮಾತನಾಡಿ, ಪ್ರತಾಪ್ ಸಿಂಹ ಪದೇ ಪದೇ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪೊಲೀಸರ ವಿರುದ್ಧ ಮಾತನಾಡಿದರೂ ಆತನ‌ ಮೇಲೆ ಕ್ರಮ ಜರುಗಿಸಲು ಏಕೆ ಹಿಂಜರಿಯುತ್ತಿದ್ದೀರಿ. ಕೂಡಲೇ ಕ್ರಮ ಜರುಗಿಸಿ ಎಂದು ಒತ್ತಾಯಿಸಿದರು.

ನಿಯೋಗದಲ್ಲಿ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್.ಭಾಸ್ಕರ್, ವಕೀಲರಾದ ಕಾಂತರಾಜ್, ತಿಮ್ಮಯ್ಯ, ಕಾಂಗ್ರೆಸ್ ಮುಖಂಡ ಮಹದೇವ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ರಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚಂದನ್, ಮಾಧ್ಯಮ‌ ವಕ್ತಾರ ಮಹೇಶ್ ಸೇರಿದಂತೆ ಹಲವರು ಇದ್ದರು.

Tags

Prathap simhamysuruCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X