Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಜಗತ್ತಿನಲ್ಲಿ ಹಿಂದೆಂದೂ ಕಾಣದಷ್ಟು ಹಿಂಸೆ...

ಜಗತ್ತಿನಲ್ಲಿ ಹಿಂದೆಂದೂ ಕಾಣದಷ್ಟು ಹಿಂಸೆ ತಾಂಡವವಾಡುತ್ತಿವೆ : ಆಶಾದೇವಿ

ರಾಜ್ಯ ಮಟ್ಟದ ಕವಿಗೋಷ್ಠಿ, ಕವನ ಸಂಕಲನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ11 May 2025 12:08 AM IST
share
ಜಗತ್ತಿನಲ್ಲಿ ಹಿಂದೆಂದೂ ಕಾಣದಷ್ಟು ಹಿಂಸೆ ತಾಂಡವವಾಡುತ್ತಿವೆ : ಆಶಾದೇವಿ

ಮೈಸೂರು : ಇಡೀ ನಾಗರಿಕತೆಗೆ ತಾತ್ವಿಕತೆಯ ಅರಾಜಕತೆ ಬಂದಿದೆ. ಜಗತ್ತಿನಲ್ಲಿ ಹಿಂದೆಂದೂ ಕಾಣದಷ್ಟು ಹಿಂಸೆ ತಾಂಡವವಾಡುತ್ತಿವೆ ಎಂದು ವಿಮರ್ಶಕಿ ಡಾ.ಎಂ.ಎಸ್. ಆಶಾದೇವಿ ಕಳವಳ ವ್ಯಕ್ತಪಡಿಸಿದ್ದಾರೆ.

ಮಾಲಗತ್ತಿ ದಶಬಲ ಟ್ರಸ್ಟ್ ರೈಟ್ಸ್ ಅಕಾಡಮಿ ವತಿಯಿಂದ ಮಾನಸಗಂಗೋತ್ರಿ ಬಿಎಂಶ್ರೀ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಕಾವ್ಯ ಢಮರುಗ 2025’ ರಾಜ್ಯ ಮಟ್ಟದ ಕವಿಗೋಷ್ಠಿ, ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಅರವಿಂದ ಮಾಲಗತ್ತಿ ಅವರ ‘ಯವ್ವ ತಾಯವ್ವ ಮಾತೆಯ ಮಹಾಗೀತೆ ಖಂಡ’ ಕಾವ್ಯ ಕೃತಿ ಕುರಿತು ಮಾತನಾಡಿದರು.

ಈ ಹೊತ್ತು ಸಾಹಿತ್ಯ ಸೇರಿ ಎಲ್ಲ ಕಲಾ ಪ್ರಕಾರಗಳು ಸಮುದಾಯದಲ್ಲಿ ನಿರ್ವಹಿಸಬೇಕಾದ ಪಾತ್ರ ಯಾವುದು? ಆ ಪಾತ್ರವನ್ನು ನಿರ್ವಹಿಸುತ್ತಿವೆಯೇ? ಎಂದು ಅನಿಸುತ್ತದೆ. ಆದರೆ, ಕಲೆಯ ಕಡೆಗೆ ನೋಡಬೇಕಾದ ಅನಿವಾರ್ಯತೆ ಎದುರಿಗಿದೆ. ಕಲೆಗಳನ್ನು ವೈದ್ಯರ ಪಾತ್ರದಲ್ಲಿ ಕಾಣಬೇಕಿದೆ. ಅನೇಕ ಬಗೆಯ ಬಿಕ್ಕಟ್ಟು ಹಾಗೂ ಮನಸ್ಥಿತಿ ಶುದ್ಧ ಮಾಡುವ ಮಾಂತ್ರಿಕ ಶಕ್ತಿ ಕಲೆಗಳಿಗಿದೆ ಎಂದು ಅವರು ನುಡಿದರು.

ಅರವಿಂದ ಮಾಲಗತ್ತಿ ಅವರ ಕಾವ್ಯ ಈ ಹೊತ್ತಿನ ಅಗತ್ಯವನ್ನು ಎತ್ತಿ ಹಿಡಿಯುತ್ತದೆ. ತಾಯಿ ವಿಶ್ವಪ್ರಜ್ಞೆಯಾಗಿ ಭಾವಪೂರ್ಣ ನಿರೂಪಣೆ ಇದೆ. ಸ್ವಾತಂತ್ರ್ಯೋತ್ತರ ಭಾರತದ ಹೆಣ್ಣು ಮಕ್ಕಳ ಝಲಕ್ ಇದೆ. ತಾಯ್ತನ ಅನ್ನೋದು ಅಮರ ಎಂದು ಮಾಲಗತ್ತಿ ಅವರ ಕೃತಿಯ ಬಗ್ಗೆ ವಿಶ್ಲೇಷಿಸಿದರು.

ಕವಯತ್ರಿ ಡಾ.ಧರಣಿದೇವಿ ಮಾಲಗತ್ತಿ ಢಮರುಗ ನುಡಿಸಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಿವ ಢಮರುಗ ನುಡಿಸಿದಾಗ ದನಿ ಉತ್ಪತ್ತಿಯಾಯಿತು. ದನಿಯಿಂದ ಭಾಷೆ ಸೃಷ್ಟಿಯಾಯಿತು. ಅದನ್ನು ಪಾಣಿನಿ 14 ಶಿವ ಸ್ತೋತ್ರಗಳಾಗಿ ಸೃಷ್ಟಿಸಿದೆ. ಭಾಷೆ ಉತ್ಪತ್ತಿಯ ಪ್ರತಿಮೆಯಾಗಿ ನಾವಿದನ್ನು ಬಳಸುತ್ತಿದ್ದೇವೆ. ಭಾಷೆ ಕೇಳುಗರ ಮತ್ತು ಅನುಕರಣೆಯಿಂದ ಬೆಳೆಯಿತು. ಲಿಖಿತ ಪರಂಪರೆ ನಂತರ ಬಂದದ್ದು. ಕಾವ್ಯ ಹೇಗಿರಬೇಕು? ಒಳ್ಳೆಯ ಭಾಷೆ, ಒಂದು ಪದ ಹೆಚ್ಚಾಗದಂತೆ ಹದವಾಗಿರಬೇಕು. ಪ್ರಾಸ, ಛಂದಸ್ಸು, ಲಯ ಮುಖ್ಯ. ಇವುಗಳನ್ನು ಹೊರತುಪಡಿಸಿ ಕಾವ್ಯ ಸೃಷ್ಟಿಯಾಗಿವೆ ಎಂದರು.

ದಶಬಲ ಟ್ರಸ್ಟ್ ಉಪಾಧ್ಯಕ್ಷ ಡಾ.ಡಿ.ಕೆ.ರಾಜೇಂದ್ರ ಅಧ್ಯಕ್ಷತೆ ವಹಿಸಿದ್ದರು. ಕಾವ್ಯ ಢಮರುಗ ಕೃತಿಯನ್ನು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕಿ ಡಾ.ಎನ್.ಕೆ. ಲೋಲಾಕ್ಷಿ ಬಿಡುಗಡೆ ಮಾಡಿದರು. ನೀ.ಗೂ ರಮೇಶ್ ಪ್ರಾಸ್ತಾವಿಕ ನುಡಿಯೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X