ಮೈಸೂರು | ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ: ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

ಕಬಿನಿ ಜಲಾಶಯ
ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಜಲಾಶಯವು ಪ್ರಸ್ತುತ ಭರ್ತಿಯಾಗುವ ಹಂತದಲ್ಲಿದೆ. ಹಾಗಾಗಿ ಕಬಿನಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳಲು ಕೋರಲಾಗಿದೆ.
ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 20000 ಕ್ಯೂಸೆಕ್ಸ್ ಗೂ ಹೆಚ್ಚು ಇದ್ದು, ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆ ಕಬಿನಿ ಜಲಾಶಯದಿಂದ 20000 ರಿಂದ 30000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಯಾವುದೇ ಕ್ಷಣದಲ್ಲಾದರೂ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇರುತ್ತದೆ.
ಆದ್ದರಿಂದ ಸಾರ್ವಜನಿಕರು, ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರ ಎ.ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





