Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ನಾವು ಮಕ್ಕಳ ಭವಿಷ್ಯ ನಿರ್ಧರಿಸಬಾರದು :...

ನಾವು ಮಕ್ಕಳ ಭವಿಷ್ಯ ನಿರ್ಧರಿಸಬಾರದು : ಪ್ರಕಾಶ್ ರಾಜ್

ಮಕ್ಕಳ ಬಹುರೂಪಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ15 Jan 2025 11:13 PM IST
share
ನಾವು ಮಕ್ಕಳ ಭವಿಷ್ಯ ನಿರ್ಧರಿಸಬಾರದು : ಪ್ರಕಾಶ್ ರಾಜ್

ಮೈಸೂರು : ಮಕ್ಕಳ ಹಾರುವ ರೆಕ್ಕೆಗಳಿಗೆ ಶಕ್ತಿ ಕೊಡಬೇಕು. ಹಾರುವ ದಿಗಂತ ಅವರಾದ್ದಾಗಬೇಕು ಎಂದು ಕವಿ ಖಲೀಲ್ ಗಿಬ್ರಾನ್ ಹೇಳಿದ್ದಾರೆ. ನಾವು ಮಕ್ಕಳು ಹಾರಬೇಕಾದ ದಿಗಂತ ನಿರ್ಧಾರ ಮಾಡುತ್ತಿರುವುದು ತಪ್ಪು ಮತ್ತು ಪ್ರಕೃತಿ ವಿರೋಧವಾದದ್ದು ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಅಭಿಪ್ರಾಯಪಟ್ಟಿದ್ದಾರೆ.

ಕಲಾಮಂದಿರದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬುಧವಾರ ಮಕ್ಕಳ ಬಹುರೂಪಿಗೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಈಗಲಾದರೂ ನಾವು ಎಚ್ಚೆತ್ತುಕೊಂಡು ಮಕ್ಕಳ ಭಾಷೆಯ ಕುತೂಹಲವನ್ನು ಪೋಷಿಸಬೇಕು ಎಂದರು.

ಬಹುರೂಪಿಯಲ್ಲಿ ಮಕ್ಕಳ ರಂಗಭೂಮಿ ಈ ವರ್ಷದಿಂದ ಶುರು ಮಾಡುತ್ತಿರುವುದು ಆರೋಗ್ಯಕರ ಬೆಳವಣಿಗೆ. ನಿರ್ದಿಂಗತದಲ್ಲಿ ಮಕ್ಕಳ ರಂಗಭೂಮಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಮಕ್ಕಳ ಬಗ್ಗೆ ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ. ಮಕ್ಕಳ ರಂಗಭೂಮಿ ಪ್ರಯೋಗ ನಡೆಯುತ್ತಿದೆ. ಶಿಕ್ಷಣದಲ್ಲಿ ರಂಗಭೂಮಿ ಎಷ್ಟು ಮುಖ್ಯ ಎಂಬ ಬಗ್ಗೆ ಗಂಭೀರ ಚಿಂತನೆ ಮಾಡುತ್ತಿದ್ದೇವೆ ಎಂದರು.

ಪ್ರಕೃತಿಯಲ್ಲಿ ಒಂದು ಮಾತಿದೆ. ಬೆಳೆಸುತ್ತೇನೆ ಎನ್ನುವುದು ಅಹಂಕಾರ. ಬೆಳೆಸಲು ಬಿಡುತ್ತೇನೆ ಎನ್ನುವುದು ವಿನಯ. ಪ್ರಕೃತಿಯಲ್ಲಿ ಅಡುಗೆ ಮಾಡುವುದು ಯಾರು? ಸೂರ್ಯ ಒಬ್ಬನೇ ಅಡುಗೆ ಮಾಡುವುದು. ಮಾವಿನ ಮರದಲ್ಲಿ ಮಾವು ತೆಂಗಿನ ಮರದಲ್ಲಿ ತೆಂಗು, ಜಿಂಕೆಗಳಿಗೆ ಹುಲ್ಲು, ಇಡೀ ಪ್ರಪಂಚದ ಎಲ್ಲ ಜೀವರಾಶಿಗಳು ಪ್ರಕೃತಿ ಏನನ್ನಾದರೂ ಕೊಡುತ್ತದೆ. ಮನುಷ್ಯ ಬುದ್ಧಿವಂತ ಈರುಳ್ಳಿ ಬೆಳ್ಳುಳಿ ಬಳಸಿಕೊಂಡು ಬಿರಿಯಾನಿ ಮಾಡಿಕೊಂಡ. ಅದನ್ನು ಮೀರುತ್ತಿರುವುದು ಅಪಾಯಕಾರಿ ಎಂದು ತಿಳಿಸಿದರು.

ಮಕ್ಕಳ ವಿಷಯದಲ್ಲಿ ಎಡವುತ್ತಿದ್ದೇವೆ. ಮಕ್ಕಳು ಯಾವ ರೀತಿ ನಡೆದುಕೊಳ್ಳಬೇಕು. ಏನನ್ನು ನೋಡಬೇಕು ಎಂಬುದು ದೊಡ್ಡವರು ನಿರ್ಧಾರ ಮಾಡುತ್ತಿದ್ದಾರೆ. ಮಗುವಿನ ಇವತ್ತಿನ ಪ್ರಪಂಚ ಮರೆಯಾಗುತ್ತಿದೆ. ತನ್ನನ್ನು ತಾನು ರೂಪಿಸಿಕೊಳ್ಳುವ ಪ್ರಪಂಚ ಇದೆ. ಸೂಕ್ಷ್ಮಗೊಳಿಸುವ ಪ್ರಪಂಚ ಇಲ್ಲ. ನಮ್ಮ ಭಯ, ಒತ್ತಡ, ಭವಿಷ್ಯದ ಕಲ್ಪನೆಯ ಮೂರ್ಖತೆಯನ್ನು ಮಕ್ಕಳ ಮೇಲೆ ಹೇರುತ್ತಿದ್ದೇವೆ. ಇದು ಅಪಾಯಕಾರಿ ಎಂದರು.

ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರ್ ಪ್ರಸ್ತಾವಿಕವಾಗಿ ಮಾತನಾಡಿದರು. ರಂಗ ಸಮಾಜದ ಸದಸ್ಯ ಶಶಿಧರ್ ಬಾರಿಘಾಟ್, ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜವರೇಗೌಡ ಇದ್ದರು. ರಂಗಾಯಣದ ಉಪ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಸ್ವಾಗತಿಸಿದರು. ಧನಂಜಯ ಆರ್.ಸಿ. ಮತ್ತು ತಂಡದವರು ರಂಗಗೀತೆ ಹಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X