Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ನಾವು ಸಂಘರ್ಷ ಮಾಡಿಯೇ ಪಕ್ಷ, ದೇಶ...

ನಾವು ಸಂಘರ್ಷ ಮಾಡಿಯೇ ಪಕ್ಷ, ದೇಶ ಕಟ್ಟಿರುವುದು: ಸಂಸದ ಪ್ರತಾಪ್ ಸಿಂಹ

“ಮಹಿಷ ದಸರಾ ಮಾಡುವವರನ್ನು ತುಳಿದು ಹಾಕುತ್ತೇವೆ”

ವಾರ್ತಾಭಾರತಿವಾರ್ತಾಭಾರತಿ9 Oct 2023 6:15 PM IST
share
ನಾವು ಸಂಘರ್ಷ ಮಾಡಿಯೇ ಪಕ್ಷ, ದೇಶ ಕಟ್ಟಿರುವುದು: ಸಂಸದ ಪ್ರತಾಪ್ ಸಿಂಹ

ಮೈಸೂರು: ಸಂಘರ್ಷ ಮಾಡಿಯೇ ನಾವು ಪಕ್ಷ, ದೇಶ ಕಟ್ಟಿರುವುದು, ಸಂಘರ್ಷ ಮಾಡಿಯೇ ಮಹಿಷ ದಸರಾ ಆಚರಣೆ ಮಾಡಲು ಬರುವವರನ್ನು ತುಳಿದು ಹಾಕುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಅಕ್ಟೋಬರ್ 13 ರಂದು ಮಹಿಷ ದಸರಾ ವಿರೋಧಿಸಿ ಹಮ್ಮಿಕೊಂಡಿರುವ ಚಾಮುಂಡಿ ಚಲೋ ಪೋಸ್ಟರ್ ಬಿಡುಗಡೆಗೊಳಿಸಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಮಹಿಷ ದಸರಾ ಆಚರಣೆ ಮಾಡುವ ಮೂಲಕ ಹಿಂದೂ ಭಾವನೆಗಳಿಗೆ ನೋವುಂಟು ಮಾಡುತ್ತಿದ್ದಾರೆ. ನಾಲ್ಕು ಜನ ಸಂಘ ಕಟ್ಟಿಕೊಂಡು ದೆವ್ವ ನ ದೇವರು ಮಾಡಿ ದೇವರನ್ನು ದೆವ್ವ ಎಂದು ಹೇಳುತ್ತಿದ್ದಾರೆ. ಇವರನ್ನು ಈಗಲೇ ಮಟ್ಟ ಹಾಕದಿದ್ದರೆ ಮುಂದೊಂದು ದಿನ ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗಿ ವೀರಪ್ಪನ್ ರಾಜ. ಮೂಲನಿವಾಸಿಗಳ ನಾಯಕ ಎಂದು ಮಲೈ ಮಹದೇಶ್ವರಿನಿಗೂ ಅವಮಾನ ಮಾಡುತ್ತಾರೆ. ಹಾಗಾಗಿ ಇವರನ್ನು ಈಗಲೇ ಹೊಸಕಿ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ಸಂಘರ್ಷಕ್ಕೆ ಸಿದ್ಧರಾಗಿಯೇ ಅವರು ನಿಗದಿ ಪಡಿಸಿರುವ ಸಮಯಕ್ಕೆ ಚಾಮುಂಡಿ ಬೆಟ್ಟ ಚಲೋಗೆ ಕರೆ ಕೊಟ್ಟಿರುವುದು. ನಾವು ತಾವರೆ ಕಟ್ಟೆ ಬಳಿ ಜಮಾವಣೆಗೊಂಡು ನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ಮಹಿಷನ ಸುತ್ತಾ ಪಾರವಾಗಿ ಕುಳಿತುಕೊಳ್ಳುತ್ತೇವೆ. ಅವರು ಬರಲಿ ನಾವು ಸಂರ್ಘ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದರು.

ಮಹಿಷ ದಸರಾಗೆ 50 ವರ್ಷಗಳ ಇತಿಹಾಸ ಇದೆ ಎಂದು ಇತಿಹಾಸವನ್ನೇ ತಿರುಚುವ ಕೆಲಸವನ್ನು ಮಾಡುತ್ತಿದ್ದಾರೆ. ಇವರು ಬರೀ ಸುಳ್ಳುಗಳನ್ನು ಹೇಳಿಕೊಂಡು ಹಿಂದೂ ಭಾವನೆಗೆ ಮತ್ತು ಮೈಸೂರಿನ ಜನರಿಗೆ ಅವಮಾನ ಮಾಡುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ 2016 ರಲ್ಲಿ ಮೊದಲ ಬಾರಿಗೆ ಮಹಿಷ ದಸರಾ ಆಚರಣೆ ಮಾಡಿದರು. ಈಗ 50 ವರ್ಷ ಇತಿಹಾಸ ಇದೆ ಎಂದು ಸುಳ್ಳು ಹೇಳುತ್ತಿದ್ದಾರೆ.

ನನ್ನ ಬಗ್ಗೆ ಕೆಲವರು ಪತ್ರಿಕಾಗೋಷ್ಠಿ ನಡೆಸಿ ಏಕ ವಚನದಲ್ಲಿ ಮಾತನಾಡುತ್ತಿದ್ದಾರೆ. ನನಗೂ ಏಕವಚನದಲ್ಲಿ ಮಾತನಾಡುವುದು ಗೊತ್ತು.‌ ನಾನು ನಿಮಗೆ ಅದೇ ಭಾಷೆಯಲ್ಲೇ ಉತ್ತರ ಕೊಡಬಲ್ಲೆ. ನನ್ನ ಬಗ್ಗೆ ಮಾತನಾಡಬೇಕಿದ್ದರೆ ಎಚ್ಚರಿಕೆಯಿಂದ ಮಾತನಾಡಿ ಎಂದು ಎಚ್ಚರಿಕೆ ನೀಡಿದರು.

ಚಾಮುಂಡಿ ಚಲೋಗೆ ಸಂಸದ ವಿ.ಶ್ರಿನಿವಾಸ ಪ್ರಸಾದ್ ಅವರು ಭಾಗವಹಿಸುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ವಿ.ಶ್ರೀನಿವಾಸ ಪ್ರಸಾದ್ ನಮ್ಮ ನಾಯಕರು, ಅವರ ಮಾರ್ಗದರ್ಶನದಲ್ಲೇ ನಾವು ಹೋಗುತ್ತಿರುವುದು. ಅವರು ಬರುತ್ತಾರೆ, ಹಲವು ನಾಯಕರು ಧರ್ಮಾತೀತವಾಗಿ, ಜಾತ್ಯಾತೀತವಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಂಘರ್ಷ ಬೇಡ ಮಹಿಷ ದಸರಾ ಆಚರಣೆ ತಡೆಗೆ ಬೇಕಿದ್ದರೆ ನ್ಯಾಯಾಲಯಕ್ಕೆ ಹೋಗಲಿ ಎಂದು ಜ್ಞಾನಪ್ರಕಾಶ್ ಸ್ವಾಮೀಜಿ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ಸ್ವಾಮೀಜಿ ಎಂಬ ವ್ಯಕ್ತಿಯೇ ಅಪ್ರಸ್ತುತ, ಇಂತಹ ಸ್ವಾಮೀಜಿಗಳನ್ನು ಬಹಳಷ್ಟು ನೋಡಿದ್ದೇನೆ. ಇವರು 2019 ರಲ್ಲಿಯೇ ನನ್ನ ಬಳಿಗೆ ಬಂದಿದ್ದರು. ಆಗ ಚಾಮುಂಡಿ ಬೆಟ್ಟದಲ್ಲಿ ಮಹಿಷನ ಪುಷ್ಪಾರ್ಚನೆಗೆ ಅವಕಾಶ ನೀಡುವುದಿಲ್ಲ, ನಿಮ್ಮ ಮನೆಯಲ್ಲೇ ಮಹಿಷನ ಫೋಟೋ ಇಟ್ಟುಕೊಂಡು ಪೂಜೆ ಮಾಡಿ ಮಹಿಷ ನಂತಹ ಮಗ ಹುಟ್ಟಲಿ ಎಂದು ಕೇಳಿಕೊಳ್ಳಿ ಎಂದು ಹೇಳಿ ಕಳುಹಿಸಿದ್ದೆ ಎಂದು ಸ್ವಾಮೀಜಿ ವಿರುದ್ಧ ಕಿಡಿಕಾರಿದರು.

Tags

Mahisha Dasara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X