Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಒಳ ಮೀಸಲಾತಿ ವರದಿ ಬಲಗೈ ಸಮುದಾಯದ ಮರಣ...

ಒಳ ಮೀಸಲಾತಿ ವರದಿ ಬಲಗೈ ಸಮುದಾಯದ ಮರಣ ಶಾಸನ : ಜ್ಞಾನಪ್ರಕಾಶ್ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ12 Aug 2025 11:57 PM IST
share
ಒಳ ಮೀಸಲಾತಿ ವರದಿ ಬಲಗೈ ಸಮುದಾಯದ ಮರಣ ಶಾಸನ : ಜ್ಞಾನಪ್ರಕಾಶ್ ಸ್ವಾಮೀಜಿ
ವರದಿ ವಿರೋಧಿಸಿ ಆ. 14ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

ಮೈಸೂರು: ನ್ಯಾ.ನಾಗಮೋಹನ್ ದಾಸ್ ಆಯೋಗದ ಒಳ ಮೀಸಲಾತಿ ವರದಿ ಬಲಗೈ ಸಮುದಾಯದ ಮರಣ ಶಾಸನವಾಗಿದೆ. ಇದರ ವಿರುದ್ಧ ಆ.14 ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಉರಿಲಿಂಗಿಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ತಿಳಿಸಿದ್ದಾರೆ.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ್ಯಾ.ನಾಗಮೋಹನ್ ದಾಸ್ ಆಗಸ್ಟ್ 4 ರಂದು ರಾಜ್ಯ ಸರಕಾರಕ್ಕೆ ಸಲ್ಲಿಸಿರುವ ಒಳ ಮೀಸಲಾತಿ ವರದಿಯು ಅವೈಜ್ಞಾನಿಕ, ಅಪೂರ್ಣ ಮತ್ತು ದುರುದ್ದೇಶ ಪೂರಿತವಾಗಿದೆ. ಸರಕಾರದ ನಿಬಂಧನೆಗಳ ಉಲ್ಲಂಘನೆ ಹಾಗೂ ಅಧಿಕಾರದ ವ್ಯಾಪ್ತಿ ಮೀರಿ ಮಾಡಿರುವ ಶಿಫಾರಸ್ಸುಗಳಾಗಿರುವುದರಿಂದ ಈ ವರದಿಯನ್ನು ಸರಕಾರ ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.

1901 ರಿಂದ 1911, 1950,2011 ಮತ್ತು 2017 ರವರೆಗೂ 40 ಲಕ್ಷ ಇದ್ದ ಪರಿಶಿಷ್ಟ ಜಾತಿ ಬಲಗೈ ಸಮುದಾಯವನ್ನು ರಾಜಕೀಯ, ಧಾರ್ಮಿಕ ಮತ್ತು ಶೈಕ್ಷಣಿಕ ಹಕ್ಕುಗಳಿಂದ ವಂಚಿತರನ್ನಾಗಿ ಮಾಡುವ ಷಡ್ಯಂತರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾವುದೋ ಒಂದು ಸಮುದಾಯ ವನ್ನು ರಕ್ಷಿಸಲು ಹೋಗಿ ಮತ್ತೊಂದು ಸಮುದಾಯವನ್ನು ವಂಚಿಸಲಾಗಿದೆ. ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ. ಎಡಗೈ ಸಮುದಾಯ ದವರು ನಮ್ಮ ಸಹೋದರರೇ, ಅವರಿಗೆ ಶೇ.6ರಷ್ಟು ಕೊಟ್ಟಿರುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ನಮ್ಮ ಬಲಗೈ ಸಮುದಾಯದ ಅಂಕಿ ಅಂಶಗಳ ಪ್ರಕಾರ ಒಳ ಮೀಸಲಾತಿ ವರದಿ ನೀಡದಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿದರು.

ಆಗಸ್ಟ್ 14 ರಂದು ಮೈಸೂರಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಿದ್ಧಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು,

ಬಲಗೈ ಸಮುದಾಯದವರು ಭಾಗವಹಿ ಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಪುರುಷೋತ್ತಮ್, ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನಗ.ಭಾಸ್ಕರ್, ಸಾಹಿತಿ ಹಾಗೂ ಲೇಖಕ ಸಿದ್ಧಸ್ವಾಮಿ, ಜೋಗಿ ಮಹೇಶ್, ಸೋಮಯ್ಯ ಮಲೆಯೂರು, ಆಟೋ ಪುಟ್ಟರಾಜು ಉಪಸ್ಥಿತರಿದ್ದರು.

ಒಂದು ಸಮುದಾಯದ ಹಕ್ಕುಗಳನ್ನು ಕಸಿದುಕೊಳ್ಳುವುದು ರಾಷ್ಟ್ರದ್ರೋಹ ಮತ್ತು ಸಂವಿಧಾನಕ್ಕೆ ಮಾಡಿದ ಅಪಚಾರ ಹಾಗೂ ಸಾಮಾಜಿಕ ನ್ಯಾಯಕ್ಕೆ ಮಾಡಿದ ಅಪಚಾರ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಇದ್ದ ಸಂವಿಧಾನದ ಆಶಯವನ್ನು ನ್ಯಾ.ನಾಗಮೋಹನ್ ದಾಸ್ ನುಚ್ಚು ನೂರು ಮಾಡಿದ್ದಾರೆ.

- ಜ್ಞಾನಪ್ರಕಾಶ್ ಸ್ವಾಮೀಜಿ, ಉರಿಲಿಂಗಿ ಪೆದ್ದಿಮಠ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X