Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಬ್ರಾಹ್ಮಣ, ಬಂಡವಾಳ ಶಾಹಿಗಳ ವಿರುದ್ಧ...

ಬ್ರಾಹ್ಮಣ, ಬಂಡವಾಳ ಶಾಹಿಗಳ ವಿರುದ್ಧ ಭೀಮಾ ಕೋರೆಗಾಂವ್ ಮಾದರಿಯ ಹೋರಾಟ ಅನಿವಾರ್ಯ: ಶಿವಸುಂದರ್

ಮೈಸೂರಿನಲ್ಲಿ ಭೀಮಾ ಕೋರೆಗಾಂವ್ 207ನೇ ವಿಜಯೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ3 Jan 2025 11:58 PM IST
share
ಬ್ರಾಹ್ಮಣ, ಬಂಡವಾಳ ಶಾಹಿಗಳ ವಿರುದ್ಧ ಭೀಮಾ ಕೋರೆಗಾಂವ್ ಮಾದರಿಯ ಹೋರಾಟ ಅನಿವಾರ್ಯ: ಶಿವಸುಂದರ್

ಮೈಸೂರು : ಪೇಶ್ವೆಗಳ ವಿರುದ್ಧ ಮಹಾರ್ ಸೈನಿಕರು ಯುದ್ಧ ಮಾಡಿ ಭೀಮಾ ಕೋರೆಂಗಾವ್ ವಿಜಯೋತ್ಸವ ಆಚರಿಸಿದರು. ಇಂದು ನವ ಬ್ರಾಹ್ಮಣ ಶಾಹಿ, ನವ ಬಂಡವಾಳ ಶಾಹಿಗಳ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಚಿಂತಕ ಶಿವಸುಂದರ್ ಹೇಳಿದ್ದಾರೆ.

ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿ, ಜೈ ಭೀಮ್ ಸ್ಪೋರ್ಟ್ಸ್ ಕ್ಲಬ್, ಡ್ರೀಮ್ ಬಾಯ್ಸ್ ಸ್ಪೋರ್ಟ್ಸ್ ಕ್ಲಬ್, ವತಿಯಿಂದ ಗುರುವಾರ ನಗರದ ಅಶೋಕಪುರಂನ ಜಯನಗರ ರೈಲ್ವೆ ಗೇಟ್ ಬಳಿ ಇರುವ ಕೋರೆಗಾಂವ್ ವಿಜಯ ಸ್ಥಂಭದ ಬಳಿ ನಡೆದ ಭೀಮಾ ಕೋರೆಗಾಂವ್ 207 ನೇ ವರ್ಷದ ಸಂಭ್ರಮಾಚರಣೆ ಹಾಗೂ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.

ಅಂದು ಪೇಶ್ವೆಗಳ ವಿರುದ್ಧ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ರಾತ್ರಿಯೆಲ್ಲಾ ಯುದ್ಧ ಮಾಡಿ ವಿಜಯ ಸಾಧಿಸಿದರು. ಆ ಯುದ್ಧ ತಮ್ಮ ಅಸ್ಮಿತೆಯ ಉಳಿವಿಗಾಗಿ ನಡೆಯಿತು. ಇಂದು ಮುಂದಿನ ಭವಿಷ್ಯದ ದೃಷ್ಟಿಯಿಂದ ಬ್ರಾಹ್ಮಣ ಶಾಹಿ ವಸಾಹತುಗಳು ಮತ್ತು ಬಂಡವಾಳ ಶಾಹಿಗಳ ಕಪಿಮುಷ್ಟಿಯಿಂದ ಹೊರಬರಲು ಮತ್ತೊಂದು ಕೋರೆಗಾಂವ್ ಮಾದರಿಯ ಹೋರಾಟ ಅಗತ್ಯವಾಗಿದೆ ಎಂದು ಹೇಳಿದರು.

ಕೋರೆಂಗಾವ್ ಯುದ್ಧದ ನಂತರ ವಸಾಹತು ಶಾಹಿಗಳು ದಲಿತರು, ದಮನಿತರ ವಿರುದ್ಧ ಸಂಚನ್ನು ರೂಪಿಸಿದ್ದರು. ಆ ಸಂಚನ್ನು ತಿಳಿದೇ ಅಂಬೇಡ್ಕರ್ ಅವರು ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವದ ಸಂದೇಶ ಸಾರಿದ್ದರು ಎಂದು ಹೇಳಿದರು.

ದಲಿತರ ಬಗ್ಗೆ ಅಪಾರ ಕಾಳಜಿ, ನಾವೇ ಸಂವಿಧಾನ ರಕ್ಷಕರು ಎಂಬಂತೆ ಬಿಜೆಪಿಯವರು ಬಿಂಬಿಸುತ್ತಿದ್ದಾರೆ. ಕಾಂಗ್ರೆಸ್ ನವರು ಸಂವಿಧಾನ ವಿರೋಧಿಗಳು ಅಂಬೇಡ್ಕರ್ ಅವರನ್ನು ಸೋಲಿಸಿದರು ಎಂಬೆಲ್ಲಾ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನವರು ಸಂವಿಧಾನವನ್ನು ಸೋಲಿಸಿದರೆ, ಬಿಜೆಪಿಯವರು ಸಂವಿಧಾನವನ್ನು ಸಾಯಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿದ್ವಾಂಸ ಡಾ.ರಹಮತ್ ತರೀಕೆರೆ, ಇಂದು ದೇಶದಲ್ಲಿ ದಲಿತರು, ಮಹಿಳೆಯರು ಮತ್ತು ಮುಸ್ಲಿಮರು ದಮನಿಸಲ್ಪಡುತ್ತಿದ್ದಾರೆ. ಆಹಾರ, ವಸ್ತ್ರ ಮತ್ತಿತರ ವಿಚಾರವಾಗಿ ಅವರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಮೂರು ವರ್ಗವು ಒಂದು ರಾಜಕೀಯ ಶಕ್ತಿಯಾಗಿ ರೂಪಗೊಳ್ಳಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭೋದಿ ದತ್ತ ಬಂತೇಜಿ, ಮಾಜಿ ಮೇಯರ್ ಪುರುಷೋತ್ತಮ್, ರಂಗಕರ್ಮಿ ಜನಾರ್ಧನ್ (ಜನ್ನಿ), ಐಜಿಪಿ ಆಪ್ತ ಸಹಾಯಕ ಮಹೇಶ್, ಲೇಖಕ ಎಚ್.ಚನ್ನಪ್ಪ ಹನೂರು, ಮಾಜಿ ಎಪಿಎಂಸಿ ಉಪಾಧ್ಯಕ್ಷ ಅಹಿಂದ ಜವರಪ್ಪ, ಆದಿಕರ್ನಾಟಕ ಮಹಾಸಂಸ್ಥಾನದ ಅಧ್ಯಕ್ಷ ಸುನೀಲ್, ಜಯರಾಜ್ ಹೆಗಡೆ, ಜೋಗಿ ಮಹೇಶ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X