Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ವರ್ತಮಾನಕ್ಕೆ ತಕ್ಕಂತೆ ಚಳವಳಿಯ ಸ್ವರೂಪ...

ವರ್ತಮಾನಕ್ಕೆ ತಕ್ಕಂತೆ ಚಳವಳಿಯ ಸ್ವರೂಪ ಬದಲಾಗಬೇಕು : ದಿನೇಶ್ ಅಮಿನ್ ಮಟ್ಟು

ವಾರ್ತಾಭಾರತಿವಾರ್ತಾಭಾರತಿ22 Jun 2025 10:36 PM IST
share
ವರ್ತಮಾನಕ್ಕೆ ತಕ್ಕಂತೆ ಚಳವಳಿಯ ಸ್ವರೂಪ ಬದಲಾಗಬೇಕು : ದಿನೇಶ್ ಅಮಿನ್ ಮಟ್ಟು

ಮೈಸೂರು : ಈಗಿನ ದಿನಗಳಿಗೆ ಅನ್ವಯವಾಗುವಂತೆ ಚಳವಳಿಗಳ ಮಾದರಿಗಳನ್ನು ಬದಲಾವಣೆ ಮಾಡಿಕೊಂಡು ಹೋರಾಟಗಳನ್ನು ರೂಪಿಸಬೇಕಾದ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅಭಿಪ್ರಾಯಪಟ್ಟಿದ್ದಾರೆ.

ರಂಗಾಯಣದ ಬಿ.ವಿ.ಕಾರಂತ ರಂಗ ಚಾವಡಿಯಲ್ಲಿ ದೇಸಿ ರಂಗ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರವಿವಾರ ಆಯೋಜಿಸಿದ್ದ ಪ್ರೊ.ಕೆ. ರಾಮದಾಸ್ ನೆನಪಿನಲ್ಲಿ- ಸಂವಾದ, ಪುಸ್ತಕ ಬಿಡುಗಡೆ, ಲೇಖನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಎಪ್ಪತ್ತು -ಎಂಭತ್ತರ ದಶಕದಲ್ಲಿದ್ದ ಚಳವಳಿಗಳ ಸ್ವರೂಪವೇ ಬೇರೆ. ಈಗಿನ ಸ್ವರೂಪವೇ ಬೇರೆ. ಆಗ ಕಲಿಯದವರು, ಅನಕ್ಷರಸ್ಥರು ಬಹಳ ಸಂಖ್ಯೆಯಲ್ಲಿ ಇದ್ದರು. ಅವರಿಗೆ ವಿಷಯದ ಕುರಿತು ತಿಳಿವಳಿಕೆ ನೀಡಿ, ಜಾಗೃತಿ ಮೂಡಿಸಿದರೇ ಸಾಕಾಗಿತ್ತು. ಅವರು ಪರಿಸ್ಥಿತಿಯನ್ನು ಅರಿತುಕೊಂಡು ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ಆದರೆ ಈಗ ಅಕ್ಷರ ಕಲಿತವರಿಗೆ ಮನದಟ್ಟು ಮಾಡಿಸುವುದು ಬಹಳ ಕಷ್ಟವಾಗಿದೆ. ಏಕೆಂದರೆ ಸಾಮಾಜಿಕ ಜಾಲತಾಣಗಳಲ್ಲಿ ಬರುವುದನ್ನೆಲ್ಲ ತಮ್ಮ ಮೆದುಳಿಗೆ ತುಂಬಿ ಕೊಂಡಿರುತ್ತಾರೆ. ಅದನ್ನು ಹೊರ ಹಾಕಿಸಿ ವಿಚಾರಗಳನ್ನು ಅಲ್ಲಿಗೆ ತುಂಬುವುದಕ್ಕೆ ಶ್ರಮ ಪಡಬೇಕಾಗಿದೆ. ಇವರಿಗಿಂತ ರೈತರು, ಹಳ್ಳಿಗಾಡಿನ ಜನರು ಎಲ್ಲವನ್ನು ತುಲನೆ ಮಾಡುವ ಶಕ್ತಿಯನ್ನು ಹೊಂದಿದ್ದಾರೆ. ಯಾವುದರ ದರ ಹೆಚ್ಚಾಗಿದೆ, ಮೊದಲು ಹೇಗಿತ್ತು. ನಾವು ಯಾರಿಗೆ ಮತ ಚಲಾಯಿಸಬೇಕು ಎನ್ನುವ ಪರಿಜ್ಞಾನ ಮತ್ತು ಅರಿವು ಅವರಿಗೆ ಇದೆ. ಹೀಗಾಗಿ ಈಗ ಚಳವಳಿಗಳನ್ನು ರೂಪಿಸುವವರು ಹಿಂದಿನ ಗತ ವೈಭವಗಳನ್ನು ನೆನಪು ಮಾಡಿಕೊಳ್ಳುತ್ತಾ ಹೊಸ ಮಾದರಿಗಳನ್ನು ಹುಟ್ಟುಹಾಕಬೇಕು ಎಂದರು.

ದೇಶದಲ್ಲಿ ಮೇಲು ಮಧ್ಯಮ ವರ್ಗದ ಜನರು ಹೆಚ್ಚಾಗಿದ್ದಾರೆ. ಇವರು ಸಾಮಾಜಿಕ ಚಿಂತನೆಗಳಿಂದ ಯಾವಾಗಲೂ ದೂರವಿರುತ್ತಾರೆ. ತಾವಾಯಿತು ತಮ್ಮ ಕುಟುಂಬವಾಯಿತು. ಮಕ್ಕಳು ಹುಟ್ಟಿದ ತಕ್ಷಣವೇ ಅವರನ್ನು ಇಂಜಿನಿಯರ್ ಮಾಡಬೇಕೋ, ಡಾಕ್ಟರ್ ಮಾಡಬೇಕೋ ಎನ್ನುವುದನ್ನು ಆಗಲೇ ನಿರ್ಧಾರ ಮಾಡಿ ಬಿಡುತ್ತಾರೆ. ಆ ಮಗು ಬೇರೆ ಯಾವುದು ಲಲಿತಕಲಾ ಚಟುವಟಿಕೆಗಳಲ್ಲಿ ಭಾಗವಹಿಸಲು ಅನುವು ಮಾಡಿಕೊಡುವುದಿಲ್ಲ. ಕೇವಲ ಸಿಇಟಿಯತ್ತ ಮಾತ್ರ ಲಕ್ಷ್ಯ ವಹಿಸುವಂತೆ ನೋಡಿಕೊಳ್ಳುತ್ತಾರೆ. ಇಂತಹ ವರ್ಗವನ್ನು ಚಳವಳಿಯತ್ತ ಹೇಗೆ ಸೆಳೆಯಬೇಕು ಎನ್ನುವ ಸವಾಲು ಹೋರಾಟಗಾರರ ಮುಂದೆ ಇದೆ ಎಂದರು.

ಹಿರಿಯ ರಂಗ ಕರ್ಮಿ ಪ್ರಸನ್ನ ಅಧ್ಯಕ್ಷತೆ ವಹಿಸಿದ್ದರು. ಆರ್.ಪಿ. ವೆಂಕಟೇಶ ಮೂರ್ತಿ ಪುಸ್ತಕ ಬಿಡುಗಡೆಗೊಳಿಸಿದರು. ಚಿಂತಕ ನಾ.ದಿವಾಕರ್ ಪುಸ್ತಕದ ಕುರಿತು ಮಾತನಾಡಿದರು. ರುದ್ರಪ್ಪ ಅನಗವಾಡಿ ಲೇಖನ ಪ್ರಶಸ್ತಿ ಪ್ರದಾನ ಮಾಡಿದರು. ಸಂಸ್ಕೃತಿ ಸುಬ್ರಹ್ಮಣ್ಯ, ಕೃಷ್ಣ ಜನಮನ, ಡಾ.ದಿನಮಣಿ ಮತ್ತಿತರರು ಹಾಜರಿದ್ದರು.

ಪ್ರೊ.ಕೆ.ರಾಮದಾಸ್ ಅವರು ಹೋರಾಟಗಾರರಾಗಿದ್ದರು. ಚಳವಳಿಗಳನ್ನು ರೂಪಿಸುತ್ತಿದ್ದರು. ಆದರೆ ಅವರು ಸರ್ವಾಧಿಕಾರಿ ಧೋರಣೆಯನ್ನು ತೋರಿಸಲಿಲ್ಲ. ಬದಲಾಗಿ ಹೋರಾಟದಲ್ಲಿ ಭಾಗಿಯಾಗುವ ಕಾಲಾಳು ಎಂದುಕೊಂಡು ಕೆಲಸವನ್ನು ಮಾಡುತ್ತಿದ್ದರು. ಅವರು ಹೋರಾಟಗಾರರ ನಡುವೆ ಇದ್ದ ಪರಸ್ಪರ ಮುನಿಸುಗಳನ್ನು ನಿವಾರಣೆ ಮಾಡಿಸಿ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಗುಣವನ್ನು ಬೆಳೆಸಿಕೊಂಡಿದ್ದರು.

-ದಿನೇಶ್ ಅಮಿನ್ ಮಟ್ಟು, ಹಿರಿಯ ಪತ್ರಕರ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X