Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಈ ಚುನಾವಣೆ ರಾಜವಂಶಸ್ಥ ಮತ್ತು ಸಾಮಾನ್ಯ...

ಈ ಚುನಾವಣೆ ರಾಜವಂಶಸ್ಥ ಮತ್ತು ಸಾಮಾನ್ಯ ಪ್ರಜೆಯ ನಡುವಿನ ಹೋರಾಟ : ಕಾಂಗ್ರೆಸ್‌‍ ಅಭ್ಯರ್ಥಿ ಎಂ.ಲಕ್ಷ್ಮಣ್

"ಮೈಸೂರು ಲೋಕಸಭಾ ಕ್ಷೇತ್ರಕ್ಕೆ 1977 ರ ನಂತರ ಕಾಂಗ್ರೆಸ್ ಪಕ್ಷ ಒಕ್ಕಲಿಗ ಸಮುದಾಯಕ್ಕೆ ಅವಕಾಶ ಮಾಡಿಕೊಟ್ಟಿದೆ"

ವಾರ್ತಾಭಾರತಿವಾರ್ತಾಭಾರತಿ22 March 2024 3:55 PM IST
share
ಈ ಚುನಾವಣೆ ರಾಜವಂಶಸ್ಥ ಮತ್ತು ಸಾಮಾನ್ಯ ಪ್ರಜೆಯ ನಡುವಿನ ಹೋರಾಟ : ಕಾಂಗ್ರೆಸ್‌‍ ಅಭ್ಯರ್ಥಿ ಎಂ.ಲಕ್ಷ್ಮಣ್

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಪಕ್ಷವೂ 1977ರ ನಂತರ ಒಕ್ಕಲಿಗ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗೆ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಮತದಾರರು ನನಗೆ ಬೆಂಬಲ ನೀಡಬೇಕಾಗಿ ಕಾಂಗ್ರೆಸ್‌‍ ಅಭ್ಯರ್ಥಿ ಎಂ. ಲಕ್ಷ್ಮಣ್‌ ಮನವಿ ಮಾಡಿದರು.

ನಗರದ ಕಾಂಗ್ರೆಸ್‌‍ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌‍ ಪಕ್ಷವು ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಟಿಕೆಟ್‌ ನೀಡಿದೆ. ಈ ಚುನಾವಣೆಯೂ ರಾಜವಂಶಸ್ಥ ಮತ್ತು ಸಾಮಾನ್ಯ ಪ್ರಜೆಯ ನಡುವಿನ ಹೋರಾಟ ಎಂದು ಹೇಳಿದರು.

ನಾನೊಬ್ಬ ಸಾಮಾನ್ಯ ಪ್ರಜೆ. ನನ್ನ ಹೆಸರಿನ ಜತೆ ರಾಜ, ಮಹಾರಾಜ, ಒಡೆಯರ್‌ ಇಲ್ಲ. ಎಂ. ಲಕ್ಷ್ಮಣ್‌ ಅಷ್ಟೇ. ಕೆಲವರು ಲಕ್ಷ್ಮಣ್‌ ಗೌಡ ಎಂದು ಹೆಸರು ಬದಲಿಸಿಕೊಳ್ಳುವಂತೆ ಸಲಹೆ ನೀಡಿದರು. ಆದರೆ ಚುನಾವಣೆಗಾಗಿ ಹೆಸರು ಬದಲಿಸಿಕೊಳ್ಳಲಿಲ್ಲ. ಸಿದ್ದರಾಮಯ್ಯ ಅವರು ಒಕ್ಕಲಿಗ ಸಮುದಾಯದ ವಿರೋಧಿ ಅಲ್ಲ ಎನ್ನುವುದನ್ನು ನಿರೂಪಿಸಲು ನನಗೆ ಟಿಕೆಟ್‌ ನೀಡಲಾಗಿದೆ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಕೊಡುಗೆಗಳ ಬಗ್ಗೆ ನನಗೆ ಸ್ಮರಣೆ ಇದೆ. ಮೀಸಲಾತಿ, ಸಾಮಾಜಿಕ ನ್ಯಾಯ, ದಲಿತರು, ಬಡವರ ವಿರುದ್ಧ ಇರುವ ಪಕ್ಷದಿಂದ ಯದುವೀರ್‌ ಸ್ಪರ್ಧಿಸಿರುವುದು ಬೇಸರ ತಂದಿದೆ. 24 ಗಂಟೆಯು ಜನರ ಮನೆ ಬಾಗಿಲಲ್ಲಿ ನಿಂತು ಕೆಲಸಮಾಡುವ ವ್ಯಕ್ತಿ ಬೇಕೋ, ನೀವೇ ಬೇರೆಯವರ ಮನೆಯ ಮುಂದೆ ಹೋಗಿ ನಿಲ್ಲುವಂತ ವ್ಯಕ್ತಿ ಬೇಕಾ ಎನ್ನುವುದನ್ನು ಜನರು ತೀರ್ಮಾನಿಸಬೇಕು ಎಂದು ಹೇಳಿದರು.

ಬಿಜೆಪಿ ಸೇರಿದರೆ ಒಳ್ಳೆಯ ನಾಯಕರು. ಸೇರಲ್ಲ ಅಂದರೆ ಜೈಲಿಗೆ ಹೋಗುವ ಪರಿಸ್ಥಿತಿ ಬರುತ್ತದೆ. ಇದಕ್ಕೆ ಕೇಜ್ರಿವಾಲ್‌‍ ಉದಾಹರಣೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌‍ 22 ಸ್ಥಾನ ಗೆಲ್ಲುತ್ತದೆ. ಬಿಜೆಪಿ ಒಂದು ಪಕ್ಷ, ಆರು ಬಾಗಿಲು. ಜೆಡಿಎಸ್‌‍ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಸ್ತಿತ್ವವೇ ಇಲ್ಲದಂತೆ ಆಗಿದೆ. ಕೇವಲ ಎರಡು ಸೀಟು ಪಡೆಯಲು ಪರದಾಟುವಂತಾಗಿದೆ. ನಂಬಿಸಿ ಕತ್ತುಕೊಯ್ಯುವ ಕೆಲಸವನ್ನು ಬಿಜೆಪಿ ಮಾಡಿದೆ. ಇದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ಒಕ್ಕಲಿಗ ವಿರೋಧಿ. ಪ್ರತಾಪ್‌ ಸಿಂಹ, ಸದಾನಂದ ಗೌಡ, ಸಿ.ಟಿ. ರವಿಗೆ ಟಿಕೆಟ್‌ ಕೊಡದಿರುವ ಬಿಜೆಪಿ ಒಕ್ಕಲಿಗ ವಿರೋಧಿ ಎಂದರು.

ರಾಜ್ಯಾದ್ಯಂತ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಒಕ್ಕಲಿಗ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಬಿಜೆಪಿ ಕೇವಲ ಒಂದು ಕಡೆ ಮಾತ್ರ ಒಕ್ಕಲಿಗರಿಗೆ ಟಿಕೆಟ್ ನೀಡಿದೆ. ನಿಜವಾದ ಒಕ್ಕಲಿಗ ವಿರೋಧಿಗಳು ಬಿಜೆಪಿಯವರು ಎಂದು ಹೇಳಿದರು.

ಕಾಂಗ್ರೆಸ್‌‍ ನಗರಾಧ್ಯಕ್ಷ ಆರ್‌. ಮೂರ್ತಿ, ಮಾಜಿ ಮೇಯರ್‌ ಬಿ.ಕೆ. ಪ್ರಕಾಶ್‌‍, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ. ರಾಮು, ನಗರ ಪ್ರಧಾನ ಕಾರ್ಯದರ್ಶಿ ಎಂ. ಶಿವಣ್ಣ, ಭಾಸ್ಕರ್‌ ಎಲ್‌‍.ಗೌಡ, ಉಪಾಧ್ಯಕ್ಷ ತಿವಾರಿ, ಎನ್‌‍. ಭಾಸ್ಕರ್‌, ಬೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ. ಸೀತಾರಾಮ್‌‍, ಎನ್‌‍.ಎಸ್‌‍. ಗೋಪಿನಾಥ್‌‍, ಎನ್‌. ಶಿವಮಲ್ಲು, ಕೆ. ಮಹೇಶ್‌ ಇದ್ದರು.

ಈ ಬಾರಿ ಜನತೆ ಕೈ ಹಿಡಿಯದಿದ್ದರೆ ನಾನು ಸತ್ತಂತೆ

ಕಾಂಗ್ರೆಸ್‌‍ ನನಗೆ ಕೊನೆಯ ಅವಕಾಶ ನೀಡಿದೆ. ಎರಡು ಬಾರಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋತಿದ್ದೇನೆ. ಈ ಬಾರಿ ಜನತೆ ಕೈ ಹಿಡಿಯದಿದ್ದರೆ ನಾನು ಸತ್ತಂತೆ. ಪಕ್ಷಾತೀತ ಮತ್ತು ಜಾತ್ಯತೀತವಾಗಿ ಅವಕಾಶ ಮಾಡಿಕೊಡುವಂತೆ ಎಂ. ಲಕ್ಷ್ಮಣ್‌ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X