Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ಯಾನ್ಸರ್ ರೋಗ ಇಲ್ಲದ ಮಹಿಳೆ ಮೇಲೆ...

ಕ್ಯಾನ್ಸರ್ ರೋಗ ಇಲ್ಲದ ಮಹಿಳೆ ಮೇಲೆ ಕೀಮೊಥೆರಪಿ ಪ್ರಯೋಗಿಸಿದ ವೈದ್ಯ; 4.5 ಲಕ್ಷ ರೂ. ಪರಿಹಾರ ನೀಡಲು ಗ್ರಾಹಕರ ನ್ಯಾಯಾಲಯ ಆದೇಶ

ವಾರ್ತಾಭಾರತಿವಾರ್ತಾಭಾರತಿ5 Aug 2023 6:10 PM IST
share
ಕ್ಯಾನ್ಸರ್ ರೋಗ ಇಲ್ಲದ ಮಹಿಳೆ ಮೇಲೆ ಕೀಮೊಥೆರಪಿ ಪ್ರಯೋಗಿಸಿದ ವೈದ್ಯ; 4.5 ಲಕ್ಷ ರೂ. ಪರಿಹಾರ ನೀಡಲು ಗ್ರಾಹಕರ ನ್ಯಾಯಾಲಯ ಆದೇಶ

ಲಕ್ನೊ: ರೋಗಿಯೊಬ್ಬರಿಗೆ ಕ್ಯಾನ್ಸರ್ ಇರದಿದ್ದರೂ ಅವರ ಮೇಲೆ ಕೀಮೊಥೆರಪಿ ಪ್ರಯೋಗಿಸಿದ್ದರಿಂದ ಕೂದಲು ನಷ್ಟ, ದೃಷ್ಟಿ ಮಾಂದ್ಯತೆ, ದುರ್ಬಲ ರೋಗ ಪ್ರತಿರೋಧಕ ಶಕ್ತಿ ಹಾಗೂ ಇನ್ನಿತರ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತುತ್ತಾಗಿದ್ದ ಮಹಿಳಾ ರೋಗಿಯೊಬ್ಬರಿಗೆ ವಾರ್ಷಿಕ ಶೇ. 7ರಷ್ಟು ಬಡ್ಡಿಯೊಂದಿಗೆ ರೂ. 4.5 ಲಕ್ಷ ಹಾಗೂ ಅದರೊಂದಿಗೆ ಹೆಚ್ಚುವರಿಯಾಗಿ ರೂ. 50,000 ಪರಿಹಾರ ಮೊತ್ತವನ್ನು ನೀಡುವಂತೆ ಲಖೀಂಪುರ್ ಖೇರಿಯ ಗ್ರಾಹಕರ ನ್ಯಾಯಾಲಯವೊಂದು ಕಿಂಗ್ ಜಾನ್ಸ್ ವೈದ್ಯಕೀಯ ವಿಶ್ವವಿದ್ಯಾಲಯದ ಕ್ಷಕಿರಣ ವಿಭಾಗದ ಪ್ರಾಧ್ಯಾಪಕರೊಬ್ಬರಿಗೆ ಆದೇಶಿಸಿದೆ ಎಂದು timesofindia.com ವರದಿ ಮಾಡಿದೆ.

ಈ ಅದೇಶವನ್ನು ಶುಕ್ರವಾರ ಮಧ್ಯಾಹ್ನದಂದು ಲಖೀಂಪುರ್ ಖೇರಿಯ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷ ಶಿವ್ ಮೇನಾ ಶುಕ್ಲಾ, ಹಾಗೂ ಡಾ. ಅಲೋಕ್ ಕುಮಾರ್ ಶರ್ಮ ಮತ್ತು ಜೂಹಿ ಕುದ್ದುಸಿ ಅವರನ್ನೊಳಗೊಂಡ ನ್ಯಾಯಪೀಠವು ನೀಡಿದೆ.

ಈ ಪ್ರಕರಣವು ಲಖೀಂಪುರ ನಿವಾಸಿ ಎಂದು ಗುರುತಿಸಲಾಗಿರುವ ರಾಣಿ ಗುಪ್ತಾ ಎಂಬ ಸಂತ್ರಸ್ತ ಮಹಿಳೆಗೆ ಸಂಬಂಧಿಸಿದ್ದಾಗಿದೆ. ಆಕೆ ನವೆಂಬರ್ 2007ರಲ್ಲಿ ಲಖೀಂಪುರ್ ಜಿಲ್ಲೆಯ ಖಾಸಗಿ ನರ್ಸಿಂಗ್ ಹೋಮ್ ಒಂದರಲ್ಲಿ ಸ್ತನದಲ್ಲಿನ ಗಡ್ಡೆಯನ್ನು ತೆಗೆಸಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಡಿಸೆಂಬರ್, 2007ರಲ್ಲಿ ರಾಣಿ ಗುಪ್ತ ಅವರು ಕಿಂಗ್ ಜಾನ್ಸ್ ವೈದ್ಯಕೀಯ ಮಹಾವಿದ್ಯಾಲಯದ ಹೊರ ರೋಗಿ ವಿಭಾಗಕ್ಕೆ ಭೇಟಿ ನೀಡಿ, ಆಗ ಅಲ್ಲಿನ ಕ್ಷಕಿರಣ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ಹಿರಿಯ ವೈದ್ಯರಿಗೆ ತಮ್ಮ ವೈದ್ಯಕೀಯ ವರದಿಗಳನ್ನು ತೋರಿಸಿದ್ದರು. ನಂತರ ಆ ವೈದ್ಯರು, ಮತ್ತಷ್ಟು ರಕ್ತ ಪರೀಕ್ಷೆ ಹಾಗೂ ಕ್ಷಕಿರಣ ಮತ್ತು ಅಲ್ಟ್ರಾಸೌಂಡ್ ಪರೀಕ್ಷೆಗೆ ಒಳಗಾಗಲು ಸೂಚಿಸಿದ್ದರು. ಆ ವರದಿಗಳು ಬಂದ ನಂತರ ರೋಗಿ ರಾಣಿ ಗುಪ್ತ ಅವರಿಗೆ ಕೀಮೊಥೆರಪಿಗೆ ಒಳಗಾಗುವಂತೆ ಸಲಹೆ ನೀಡಿದ್ದರು.

ಈ ಸಲಹೆಯನ್ನು ಆಧರಿಸಿ ಜನವರಿ 1, 2008ರಿಂದ ಜನವರಿ 3, 2008ರ ನಡುವೆ ರಾಣಿ ಗುಪ್ತ ಕೀಮೊಥೆರಪಿಗೆ ಒಳಗಾಗಿದ್ದರು. ನಂತರ ಫೆಬ್ರವರಿಯಲ್ಲಿ ಮರುಭೇಟಿ ನೀಡುವಂತೆ ಅವರಿಗೆ ಸೂಚಿಸಲಾಗಿತ್ತು. ಆದರೆ, ಕೀಮೊಥೆರಪಿಗೆ ಒಳಗಾದ ನಂತರ ಅವರು ತೀವ್ರ ಮಾನಸಿಕ ಅಸ್ವಸ್ಥತೆಗೆ ಗುರಿಯಾಗಿದ್ದರು. ಹೀಗಾಗಿ ಎರಡನೆಯ ಸಲಹೆ ಪಡೆಯಲು ನಿರ್ಧರಿಸಿದ ಅವರು, ಮುಂಬೈನ ಖಾಸಗಿ ಕ್ಯಾನ್ಸರ್ ಆಸ್ಪತ್ರೆಯ ಹಿರಿಯ ವೈದ್ಯರಿಂದ ಸಲಹೆ ಪಡೆದಿದ್ದರು. ರಾಣಿ ಗುಪ್ತರ ವೈದ್ಯಕೀಯ ವರದಿಗಳನ್ನು ಪರಿಶೀಲಿಸಿದ್ದ ವೈದ್ಯರು, ರಾಣಿ ಗುಪ್ತ ಆರೋಗ್ಯವಾಗಿರುವುದನ್ನು ದೃಢಪಡಿಸಿದ್ದರು. ಇದಾದ ನಂತರ ರಾಣಿ ಗುಪ್ತಾರು ಗ್ರಾಹಕರ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X