Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏರ್ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರಿಗೆ...

ಏರ್ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರಿಗೆ ವಿಮಾನದೊಳಗೆ ಸಹ ಪ್ರಯಾಣಿಕನಿಂದ ಕಪಾಳಮೋಕ್ಷ, ನಿಂದನೆ

ವಾರ್ತಾಭಾರತಿವಾರ್ತಾಭಾರತಿ16 July 2023 12:11 PM IST
share
ಏರ್ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರಿಗೆ ವಿಮಾನದೊಳಗೆ ಸಹ ಪ್ರಯಾಣಿಕನಿಂದ ಕಪಾಳಮೋಕ್ಷ, ನಿಂದನೆ

ಹೊಸದಿಲ್ಲಿ: ಸಿಡ್ನಿ-ದಿಲ್ಲಿ ವಿಮಾನದಲ್ಲಿ ಜುಲೈ 9 ರಂದು ಪ್ರಯಾಣಿಕನೊಬ್ಬ ಏರ್ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರಿಗೆ ನಿಂದಿಸಿ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ. ಇದರೊಂದಿಗೆ ಇತ್ತೀಚೆಗಿನ ದಿನಗಳಲ್ಲಿ ವಿಮಾನದೊಳಗೆ ಅಶಿಸ್ತಿನ ವರ್ತನೆ ಮುಂದುವರಿದಿದೆ.

ತನ್ನ ಸೀಟು ಸರಿಯಿಲ್ಲದ ಕಾರಣ ಏರ್ ಇಂಡಿಯಾ ಅಧಿಕಾರಿ ಬಿಸಿನೆಸ್ ಕ್ಲಾಸ್ ಸೀಟಿನಿಂದ ಎಕಾನಮಿ ಕ್ಲಾಸ್ ಸೀಟಿಗೆ ತೆರಳಬೇಕಾದಾಗ ಆರೋಪಿಗೆ ಮೃದುವಾಗಿ ಮಾತನಾಡಲು ವಿನಂತಿಸಿದಾಗ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಏರ್ ಇಂಡಿಯಾ ಅಧಿಕಾರಿಗೆ ಎಕಾನಮಿ ಕ್ಲಾಸ್ ನಲ್ಲಿ 30-ಸಿ ಸೀಟು ನೀಡಲಾಗಿತ್ತು. ಇತರ ಪ್ರಯಾಣಿಕರು ಇದ್ದ ಕಾರಣ, ಅವರು 25 ನೇ ಸಾಲಿನಲ್ಲಿ ಕುಳಿತುಕೊಳ್ಳಲು ಆಯ್ಕೆ ಮಾಡಿಕೊಂಡರು ಎಂದು ಮೂಲಗಳು ತಿಳಿಸಿವೆ.

"ಅಧಿಕಾರಿಯು ತನ್ನ ಸಹ-ಪ್ರಯಾಣಿಕನನ್ನು ಮೃದುವಾಗಿ ಮಾತನಾಡಲು ವಿನಂತಿಸಿದರು. ಆದರೆ ಆತ ಅಧಿಕಾರಿಗೆ ಕಪಾಳಮೋಕ್ಷ ಮಾಡಿದನು, ಹಲ್ಲೆ ನಡೆಸಿ ನಿಂದಿಸಿದನು" ಎಂದು ಮೂಲಗಳು ತಿಳಿಸಿವೆ.

ಐವರು ಕ್ಯಾಬಿನ್ ಸಿಬ್ಬಂದಿಗಳು ರೌಡಿ ಪ್ರಯಾಣಿಕನನ್ನು ನಿಯಂತ್ರಿಸಲು ವಿಫಲವಾದಾಗ ಅಧಿಕಾರಿ ಹಿಂದಿನ ಸೀಟುಗಳಿಗೆ ಧಾವಿಸಿದರು ಎಂದು ಮೂಲಗಳು ತಿಳಿಸಿವೆ.

ಕ್ಯಾಬಿನ್ ಮೇಲ್ವಿಚಾರಕರನ್ನು ಕರೆಸಲಾಗಿದ್ದು, ಪ್ರಯಾಣಿಕನಿಗೆ "ಮೌಖಿಕ ಮತ್ತು ಲಿಖಿತ ಎಚ್ಚರಿಕೆಯನ್ನು ನೀಡಲಾಗಿದೆ" ಎಂದು ಮೂಲಗಳು ತಿಳಿಸಿವೆ, ದೈಹಿಕ ಹಲ್ಲೆಯ ಹೊರತಾಗಿಯೂ, ಅಶಿಸ್ತಿನ ಪ್ರಯಾಣಿಕನನ್ನು ನಿಯಂತ್ರಿಸಲು ಸಿಬ್ಬಂದಿ ಯಾವುದೇ ನಿಗ್ರಹ ಸಾಧನಗಳನ್ನು ಬಳಸಲಿಲ್ಲ ಎಂದು ವರದಿಯಾಗಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಏರ್ ಇಂಡಿಯಾ "ಜುಲೈ 9, 2023 ರಂದು ಸಿಡ್ನಿ-ದಿಲ್ಲಿಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ AI-301 ವಿಮಾನದಲ್ಲಿದ್ದ ಪ್ರಯಾಣಿಕ ಮೌಖಿಕ ಮತ್ತು ಲಿಖಿತ ಎಚ್ಚರಿಕೆಗಳ ಹೊರತಾಗಿಯೂ ವಿಮಾನದ ಸಮಯದಲ್ಲಿ ಸ್ವೀಕಾರಾರ್ಹವಲ್ಲದ ರೀತಿಯಲ್ಲಿ ವರ್ತಿಸಿದ್ದ , ಇದರಿಂದಾಗಿ ಇತರ ಪ್ರಯಾಣಿಕರು, ನಮ್ಮ ಉದ್ಯೋಗಿಯೊಬ್ಬರಿಗೂ ತೊಂದರೆಯಾಯಿತು ಎಂದಿದೆ.

"ವಿಮಾನವನ್ನು ದಿಲ್ಲಿಯಲ್ಲಿ ಸುರಕ್ಷಿತವಾಗಿ ಇಳಿಸಿದ ನಂತರ, ಪ್ರಯಾಣಿಕನನ್ನು ಭದ್ರತಾ ಏಜೆನ್ಸಿಗೆ ಹಸ್ತಾಂತರಿಸಲಾಯಿತು. ನಂತರ ಆತ ಲಿಖಿತವಾಗಿ ಕ್ಷಮೆಯಾಚಿಸಿದ" ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X