Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಹಳೆಯ...

ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಹಳೆಯ ನಿಯಮಕ್ಕೆ ಮರಳಿದ ಚುನಾವಣಾ ಆಯೋಗ: ಅಂಚೆ ಮತಪತ್ರಗಳ ಬಳಿಕವೇ ಇವಿಎಂ ಎಣಿಕೆ

ವಾರ್ತಾಭಾರತಿವಾರ್ತಾಭಾರತಿ26 Sept 2025 5:49 PM IST
share
ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಹಳೆಯ ನಿಯಮಕ್ಕೆ ಮರಳಿದ ಚುನಾವಣಾ ಆಯೋಗ: ಅಂಚೆ ಮತಪತ್ರಗಳ ಬಳಿಕವೇ ಇವಿಎಂ ಎಣಿಕೆ

ಹೊಸದಿಲ್ಲಿ: ಅಂಚೆ ಮತಪತ್ರಗಳು ಮತ್ತು ಇವಿಎಂಗಳಲ್ಲಿ ಚಲಾಯಿಸಲಾದ ಮತಗಳ ಎಣಿಕೆಯನ್ನು ಪ್ರತ್ಯೇಕಿಸುವ ತನ್ನ 2019ರ ನಿರ್ಧಾರವನ್ನು ಕೈಬಿಟ್ಟಿರುವ ಚುನಾವಣಾ ಆಯೋಗವು ಎಲ್ಲ ಅಂಚೆ ಮತಪತ್ರಗಳ ಎಣಿಕೆಯ ಬಳಿಕವೇ ಇವಿಎಂ ಮತ ಎಣಿಕೆ ಪೂರ್ಣಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಮತಎಣಿಕೆ ಪ್ರಕ್ರಿಯೆಯನ್ನು ಬದಲಿಸಲು ಗುರುವಾರ ನಿರ್ಧರಿಸಿದೆ ಎಂದು indianexpress.com ವರದಿ ಮಾಡಿದೆ.

ಎಣಿಕೆ ಕೇಂದ್ರಗಳಲ್ಲಿ ಅಂಚೆ ಮತಪತ್ರಗಳ ಎಣಿಕೆ ಪೂರ್ಣಗೊಳ್ಳುವವರೆಗೂ ಇವಿಎಂ/ವಿವಿಪ್ಯಾಟ್‌ಗಳ ಎಣಿಕೆಯ ಉಪಾಂತ್ಯ ಸುತ್ತನ್ನು ಕೈಗೆತ್ತಿಕೊಳ್ಳಬಾರದು ಎಂದು ಚುನಾವಣಾ ಆಯೋಗವು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಹೊರಡಿಸಿರುವ ಸೂಚನೆಗಳಲ್ಲಿ ತಿಳಿಸಿದೆ. ಎಣಿಕೆ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಲು ಮತ್ತು ಅಂಚೆ ಮತಪತ್ರಗಳ ಎಣಿಕೆಯಲ್ಲಿ ಅಗತ್ಯ ಸ್ಪಷ್ಟತೆಯನ್ನು ಒದಗಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಆಯೋಗವು ಹೇಳಿದೆ.

ಸಂಸದೀಯ ಕ್ಷೇತ್ರದ ಮತಎಣಿಕೆ ಸಂದರ್ಭದಲ್ಲಿ ಹಲವಾರು ಎಣಿಕೆ ಕೇಂದ್ರಗಳಲ್ಲಿ ವಿಧಾನಸಭಾ ಕ್ಷೇತ್ರವಾರು ಎಣಿಕೆ ನಡೆದರೆ ಅಂಚೆ ಮತಪತ್ರಗಳ ಎಣಿಕೆ ನಡೆಯುವವರೆಗೆ ಎಲ್ಲ ಎಣಿಕೆ ಕೇಂದ್ರಗಳಲ್ಲಿ ಇವಿಎಂ/ವಿವಿಪ್ಯಾಟ್ ಎಣಿಕೆಯ ಉಪಾಂತ್ಯ ಸುತ್ತನ್ನು ನಿಲ್ಲಿಸುವ ಅಗತ್ಯವಿಲ್ಲ. ಅಂಚೆ ಮತಪತ್ರಗಳ ಎಣಿಕೆ ಪ್ರಗತಿಯಲ್ಲಿರುವ ಕೇಂದ್ರಗಳಲ್ಲಿ ಮಾತ್ರ ಅದನ್ನು ನಿಲ್ಲಿಸಲಾಗುವುದು ಎಂದು ಆಯೋಗವು ವಿವರಿಸಿದೆ.

ರಾಜಕೀಯ ಪಕ್ಷಗಳ ಬೇಡಿಕೆಗೆ ಅನುಗುಣವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಈ ಬದಲಾವಣೆಗಾಗಿ ಆಗ್ರಹಿಸುತ್ತಿದ್ದ ಪ್ರತಿಪಕ್ಷಗಳು ಕೊನೆಯ ಕ್ಷಣದಲ್ಲಿ ಅಂಚೆ ಮತಪತ್ರಗಳ ತಿರಸ್ಕರಣೆ ಅಥವಾ ಸಿಂಧುತ್ವವು ನಿಕಟ ಹಣಾಹಣಿಗೆ ಕಾರಣವಾಗಬಹುದು ಮತ್ತು ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರಬಹುದು ಎಂದು ಕಳವಳ ವ್ಯಕ್ತಪಡಿಸಿದ್ದವು.

2024ರ ಲೋಕಸಭಾ ಚುನಾವಣೆಗಳ ಸಂದರ್ಭದಲ್ಲಿ 2019ರ ನಿರ್ಧಾರವನ್ನು ಕೈಬಿಡುವಂತೆ ಮತ್ತು ಎಲ್ಲ ಅಂಚೆ ಮತಪತ್ರಗಳ ಎಣಿಗೆ ಪೂರ್ಣಗೊಳ್ಳುವವರೆಗೆ ಇವಿಎಂ ಎಣಿಕೆಯ ಉಪಾಂತ್ಯ ಸುತ್ತನ್ನು ತಡೆಹಿಡಿಯುವ ಹಳೆಯ ಪದ್ಧತಿಗೆ ಮರಳುವಂತೆ ಇಂಡಿಯಾ ಮೈತ್ರಿಕೂಟವು ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು. ಆಯೋಗದ 2019ರ ನಿರ್ದೇಶನಗಳು 1961ರ ಚುನಾವಣಾ ನಿಯಮಾವಳಿಯ ನಿಯಮ 54ಎ ನಿಯಮಕ್ಕೆ ವಿರುದ್ಧವಾಗಿವೆ ಎಂದು ಅದು ವಾದಿಸಿತ್ತು. ಆದರೆ ಆಗಿನ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಈ ಬೇಡಿಕೆಯನ್ನು ತಿರಸ್ಕರಿಸಿದ್ದರು. ಚುನಾವಣೆ ನಡೆಯುತ್ತಿರುವಾಗ ಮಧ್ಯದಲ್ಲಿ ಪ್ರಕ್ರಿಯೆಯನ್ನು ಬದಲಿಸಲು ಸಾಧ್ಯವಿಲ್ಲ ಎಂದು ಅವರು ಸಮಜಾಯಿಷಿ ನೀಡಿದ್ದರು.

2019ರವರೆಗೂ ಎಲ್ಲ ಅಂಚೆ ಮತಪತ್ರಗಳ ಎಣಿಕೆಯ ಬಳಿಕವೇ ಇವಿಎಂ ಮತ ಎಣಿಕೆಯ ಉಪಾಂತ್ಯ ಸುತ್ತನ್ನು ಕೈಗೆತ್ತಿಕೊಳ್ಳುವ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಅನುಸರಿಸುತ್ತಿತ್ತು. ಮೇ 18,2019ರಂದು ಚುನಾವಣಾ ಆಯೋಗವು ಅಂಚೆ ಮತಪತ್ರಗಳ ಸಂಖ್ಯೆಯಲ್ಲಿ ಏರಿಕೆಯನ್ನು ಉಲ್ಲೇಖಿಸಿ ಮತ ಎಣಿಕೆ ಕಾರ್ಯವಿಧಾನವನ್ನು ಬದಲಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X