Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತ್ತಷ್ಟು ಹಳಸಿದ ಅಜಿತ್ ಪವಾರ್-...

ಮತ್ತಷ್ಟು ಹಳಸಿದ ಅಜಿತ್ ಪವಾರ್- ಆರೆಸ್ಸೆಸ್ ಸಂಬಂಧ

ವಾರ್ತಾಭಾರತಿವಾರ್ತಾಭಾರತಿ13 Jun 2024 8:49 AM IST
share
ಮತ್ತಷ್ಟು ಹಳಸಿದ ಅಜಿತ್ ಪವಾರ್- ಆರೆಸ್ಸೆಸ್ ಸಂಬಂಧ

ಮುಂಬೈ: ಅಜಿತ್ ಪವಾರ್ ನೇತೃತ್ವದ ಎನ್ಸಿಪಿಯನ್ನು ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಸೇರಿಸಿಕೊಂಡ ಕ್ರಮ ಅವಿವೇಕದ ಕ್ರಮ ಎಂದು ಆರೆಸ್ಸೆಸ್ ಮುಖವಾಣಿಯಲ್ಲಿ ಪ್ರಕಟವಾದ ಇತ್ತೀಚಿನ ಲೇಖನವೊಂದು ಪ್ರತಿಪಾದಿಸಿದೆ. ಇದು ಬಿಜೆಪಿಯ ತಳಹಂತದ ಕಾರ್ಯಕರ್ತರಿಗೆ ನೋವು ತಂದಿದೆ ಎಂದು ಹೇಳಿದೆ. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ರಾಜಕೀಯ ಸಭ್ಯತೆಯ ಕೊರತೆ ಕಂಡುಬಂದಿತ್ತು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿಕೆ ನೀಡಿದ ಬೆನ್ನಲ್ಲೇ ಈ ಲೇಖನ ಪ್ರಕಟವಾಗಿದೆ.

ಸ್ಥಳೀಯ ನಾಯಕತ್ವವನ್ನು ಕಡೆಗಣಿಸಿ ತ್ಯಾಗಿಗಳಂತೆ ಸೋಗು ಹಾಕಿದವರಿಗೆ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ ಎಂದು ಅಂಕಣಕಾರ ಮತ್ತು ಆರೆಸ್ಸೆಸ್ ಸದಸ್ಯ ರತನ್ ಶರ್ದಾ ಅವರ ಲೇಖನದಲ್ಲಿ ಪ್ರತಿಪಾದಿಸಲಾಗಿದೆ.

ತಡವಾಗಿ ಆಗಮಿಸಿದವರಿಗೆ ಸ್ಥಾನ ಕಲ್ಪಿಸುವ ಸಲುವಾಗಿ ಉತ್ತಮ ಸಾಧನೆ ಮಾಡಿದ ಸಂಸದರನ್ನು ಕಡೆಗಣಿಸಲಾಗಿದೆ. ಮೋದಿಯವರ ಪ್ರಭಾವಳಿಯ ವಲಯದ ಹೊಳಪನ್ನು ಆಸ್ವಾದಿಸಿದ ಪಕ್ಷ ಬೀದಿಯ ಧ್ವನಿಗಳಿಗೆ ಕಿವಿಕೊಡಲಿಲ್ಲ" ಎಂದು ಟೀಕಿಸಿದೆ.

"ಅನಗತ್ಯ ರಾಜಕಿಯ ಮತ್ತು ತಪ್ಪಿಸಬಹುದಾಗಿದ್ದ ಪರಿವರ್ತನೆಗೆ ಮಹಾರಾಷ್ಟ್ರ ಉತ್ತಮ ಉದಾಹರಣೆ. ಬಿಜೆಪಿ ಹಾಗೂ ಶಿವಸೇನೆ ಬಣ ಬಹುಮತ ಹೊಂದಿದ್ದರೂ, ಅಜಿತ್ ಪವಾರ್ ಬಣವನ್ನು ಸೇರಿಸಿಕೊಳ್ಳಲಾಯಿತು. ಶರದ್ ಪವಾರ್ ಎರಡು ಮೂರು ವರ್ಷಗಳಲ್ಲಿ ಮಬ್ಬಾದ ಬಳಿಕ ಎನ್ಸಿಪಿ ಆಂತರಿಕ ಕಚ್ಚಾಟದಿಂದ ಶಕ್ತಿಗುಂದುತ್ತಿತ್ತು. ಈ ಅವಿವೇಕದ ಹೆಜ್ಜೆಯನ್ನು ಇಟ್ಟಿದ್ದೇಕೆ? ಕಾಂಗ್ರೆಸ್ ಸಿದ್ಧಾಂತದ ವಿರುದ್ಧ ಹಲವು ವರ್ಷ ಹೋರಾಡಿದ ಬಿಜೆಪಿ ಕಾರ್ಯಕರ್ತರನ್ನು ಗೋಳಾಡಿಸಲಾಯಿತು. ಒಂದೇ ಹೊಡೆತದಲ್ಲಿ ಬಿಜೆಪಿ ತನ್ನ ಬ್ರಾಂಡ್ ಮೌಲ್ಯ ಕಳೆದುಕೊಂಡಿತು" ಎಂದು ಬಣ್ಣಿಸಲಾಗಿದೆ.

ಇದಕ್ಕೆ ಎನ್ಸಿಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. "ಆರ್ಗನೈಸರ್ ಅರೆಸ್ಸೆಸ್ನ ಅಧಿಕೃತ ಮುಖವಾಣಿಯಲ್ಲ. ಇದು ಆರೆಸ್ಸೆಸ್ ಸಿದ್ಧಾಂತವನ್ನು ಪ್ರತಿಬಿಂಬಿಸುವುದಿಲ್ಲ. ಈ ಲೇಖನಕ್ಕೆ ಬಿಜೆಪಿ ಮುಖಂಡರ ಸಹಮತ ಇಲ್ಲ ಎನ್ನುವುದು ನನ್ನ ಭಾವನೆ. ವೈಫಲ್ಯಕ್ಕೆ ಭಿನ್ನ ಕಾರಣಗಳನ್ನು ಹುಡುಕಲಾಗುತ್ತಿದೆ. ಪರಸ್ಪರ ವಿರುದ್ಧ ಪಕ್ಷಗಳು ದೋಷವನ್ನು ಹಾಗೂ ಆರೋಪಗಳನ್ನು ಕಂಡುಹಿಡಿಯುತ್ತಿವೆ. ರಾಜಕೀಯದಲ್ಲಿ ಆರೋಪಗಳ ಎರಚಾಟ ಸಾಮಾನ್ಯ. ಪ್ರತಿಯೊಂದೂ ಫಲಿತಾಂಶವನ್ನು ಅವಲಂಬಿಸಿರುತ್ತದೆ. ಅರೆಸ್ಸೆಸ್ ಹೇಳಿಕೆಯಲ್ಲಿ ಸತ್ಯ ಇಲ್ಲ ಎನ್ನುವುದು ನನ್ನ ಭಾವನೆ" ಎಂದು ವಕ್ತಾರ ಅನುಮೇಶ್ ಪಾಟೀಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X