Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ...

ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಬಹಿಷ್ಕರಿಸಿದ ಪತ್ರಕರ್ತರಿಂದ ತೀಕ್ಷ್ಣ ಪ್ರತಿಕ್ರಿಯೆ

ಯಾರ್ಯಾರು ಏನು ಹೇಳಿದರು?

ವಾರ್ತಾಭಾರತಿವಾರ್ತಾಭಾರತಿ15 Sept 2023 5:34 PM IST
share
ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಬಹಿಷ್ಕರಿಸಿದ ಪತ್ರಕರ್ತರಿಂದ ತೀಕ್ಷ್ಣ ಪ್ರತಿಕ್ರಿಯೆ

ಹೊಸದಿಲ್ಲಿ: ವಿಪಕ್ಷ ಇಂಡಿಯಾ ಮೈತ್ರಿಕೂಟವು ಆಡಳಿತ ಬಿಜೆಪಿ ಪರ ಎಂದು ಗುರುತಿಸಿ 14 ನ್ಯೂಸ್‌ ಟಿವಿ ನಿರೂಪಕರನ್ನು ಬಹಿಷ್ಕರಿಸಿದ ಕ್ರಮವನ್ನು ಬಿಜೆಪಿ ಕಟುವಾಗಿ ಟೀಕಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆಗೊಳಿಸಿದ ಬಿಜೆಪಿ ರಾಷ್ಟ್ರೀಯ ಮಾಧ್ಯಮ ಘಟಕದ ಮುಖ್ಯಸ್ಥ ಅನಿಲ್‌ ಬಲೂನಿ, “ಕೆಲ ಪತ್ರಕರ್ತರನ್ನು ಬಹಿಷ್ಕರಿಸಲು ಮತ್ತು ಅವರನ್ನು ಬೆದರಿಸಲು ಘಮಂಡಿಯಾ (ಅಹಂಕಾರಿ) ಮೈತ್ರ ಕೂಟ ನಿರ್ಧರಿಸಿರುವುದು ಖಂಡನಾರ್ಹ. ಇಂತಹ ನಿರ್ಧಾರವನ್ನು ಕೈಗೊಳ್ಳುವ ಮೂಲಕ ಈ ಘಮಂಡಿಯಾ ಮೈತ್ರಿಕೂಟ ತಾನು ತೀರಾ ಸರ್ವಾಧಿಕಾರಿ ಮನೋಭಾವ ಮತ್ತು ಋಣಾತ್ಮಕ ಚಿಂತನೆ ಹೊಂದಿದೆ ಎಂಬುದನ್ನು ತೋರ್ಪಡಿಸಿದೆ,” ಎಂದು ಹೇಳಿದರು.

“ಸತ್ಯವನ್ನು ಹೇಳುವ ಮಾಧ್ಯಮಕ್ಕೆ ವಿಪಕ್ಷಗಳು ನೇರ ಬೆದರಿಕೆಯೊಡ್ಡಿವೆ, ಈ ಮೈತ್ರಿಕೂಟಕ್ಕೆ ಸತ್ಯವನ್ನು ಎದುರಿಸುವ ಧೈರ್ಯವಿಲ್ಲ. ದೇಶದಲ್ಲಿ ಪ್ರಜಾಪ್ರಭುತ್ವವಿದೆ, ಮಾಧ್ಯಮದ ಹಕ್ಕುಗಳನ್ನು ಸೆಳೆಯಲು ಯಾರಿಗೂ ಅನುಮತಿಸಲಾಗುವುದಿಲ್ಲ,” ಎಂದು ಬಿಜೆಪಿ ಹೇಳಿದೆ.

ವಿಪಕ್ಷ ಇಂಡಿಯಾ ಮೈತ್ರಿಕೂಟದಿಂದ ಬಹಿಷ್ಕಾರಕ್ಕೊಳಗಾಗಿರುವ ಆಜ್‌ ತಕ್‌ನ ಸುಧೀರ್‌ ಚೌಧರಿ ಪ್ರತಿಕ್ರಿಯಿಸಿ, “ಚರಣ್‌ ಚುಂಬಕ್‌ ಆಗಲು ನಿರಾಕರಿಸಿದ ಪತ್ರಕರ್ತರ ಪಟ್ಟಿಯನ್ನು ಇಂಡಿಯಾ ಮೈತ್ರಿಕೂಟ ಬಿಡುಗಡೆಗೊಳಿಸಿದೆ. ಈಗ ಈ ಪತ್ರಕರ್ತರನ್ನು ಬಹಿಷ್ಕರಿಸಿರುವುದರಿಂದ ಭಾರತೀಯ ಮಾಧ್ಯಮ ಇದಕ್ಕೇನು ಉತ್ತರ ನೀಡಲಿದೆ ಎಂದು ನೋಡಬೇಕಿದೆ,” ಎಂದು ಹೇಳಿದ್ದಾರೆ.

ಪಟ್ಟಿಯಲ್ಲಿ ತಮ್ಮ ಹೆಸರು ಮೊದಲು ಇದೆ ಎಂದು ಹೇಳಿದ ಭಾರತ್‌ ಎಕ್ಸ್‌ಪ್ರೆಸ್‌ನ ಅದಿತಿ ತ್ಯಾಗಿ, “ದೇಶಕ್ಕಾಗಿ ಪ್ರಶ್ನೆ ಕೇಳಿದ್ದಕ್ಕೆ ಹೀಗಾಗಿದೆ., ತ್ಯಾಗಿಗಳು ಭಯಪಡುವುದಿಲ್ಲ, ಜೈ ಹಿಂದ್” ಎಂದು ಟ್ವೀಟ್‌ ಮಾಡಿದ್ದಾರೆ.

ವಿಪಕ್ಷಗಳಿಂದ ಬಹಿಷ್ಕೃತಗೊಂಡ ಇನ್ನೋರ್ವ ನಿರೂಪಕಿ ‘ಭಾರತ್‌ 24’ನ ರುಬಿಕಾ ಲಿಯಾಖತ್‌ ತಮ್ಮ ಪೋಸ್ಟ್‌ನಲ್ಲಿ ಹೀಗೆ ಬರೆದಿದ್ದಾರೆ. “ಇದಕ್ಕೆ ನಿಷೇಧವೆನ್ನಲಾಗುವುದಿಲ್ಲ, ಇದು ಭಯ. ಇದು ಪ್ರಶ್ನೆಗಳಿಂದ ಓಡಿ ಹೋಗುವುದು,” ಎಂದು ಅವರು ಹೇಳಿದ್ದಾರೆ.

ದೂರದರ್ಶನ ಸುದ್ದಿಯ ಅಶೋಕ್‌ ಶ್ರೀವಾಸ್ತವ ಪ್ರತಿಕ್ರಿಯಿಸಿ “28 ಪಕ್ಷಗಳು 14 ಪತ್ರಕರ್ತರ ಬಗ್ಗೆ ಭಯಪಟ್ಟಿವೆ,” ಎಂದು ವ್ಯಂಗ್ಯವಾಡಿದ್ದಾರೆ.

ಟೈಮ್ಸ್‌ ನೌ ಸಂಪಾದಕಿ, ನಿರೂಪಕಿ ನವಿಕಾ ಕುಮಾರ್‌ ಈ ಕುರಿತು ಟ್ವೀಟ್‌ ಮಾಡಿ “ವಾಕ್‌ ಸ್ವಾತಂತ್ರ್ಯ ಹೋರಾಟಗಾರರ ನಿಜ ಬಣ್ಣ ಬಯಲಾಗಿದೆ, ಇಂಡಿಯಾ 14 ಟಿವಿ ಆಂಕರ್‌ಗಳನ್ನು ಬಹಿಷ್ಕರಿಸಿದೆ. ಅವರಿಗೆ ಸರದಿ ಇಷ್ಟವಿಲ್ಲ, ಅದಕ್ಕೆ ಶೋ ಬಹಿಷ್ಕರಿಸಿದ್ದಾರೆ, ದೌರ್ಜನ್ಯಕಾರಿ, ಸರ್ವಾಧಿಕಾರಿ ಮನಃಸ್ಥಿತಿ, ಮಾಧ್ಯಮ ಸ್ವಾತಂತ್ರ್ಯ ಈಗ ಮರೆತುಹೋಯಿತೇ?” ಎಂದು ಟ್ವೀಟ್‌ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X