Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ವರದಿ : ಪತ್ರಕರ್ತ ಅಜಿತ್ ಅಂಜುಮ್ ವಿರುದ್ಧ ಪ್ರಕರಣ ದಾಖಲು

ಬಿಎಲ್ಒ ಮೇಲೆ ಒತ್ತಡ ಹೇರಿ ಎಫ್ಐಆರ್ ದಾಖಲಿಸಲಾಗಿದೆ ಎಂದ ಪತ್ರಕರ್ತ

ವಾರ್ತಾಭಾರತಿವಾರ್ತಾಭಾರತಿ14 July 2025 10:46 PM IST
share
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ವರದಿ : ಪತ್ರಕರ್ತ ಅಜಿತ್ ಅಂಜುಮ್ ವಿರುದ್ಧ ಪ್ರಕರಣ ದಾಖಲು

ಪಾಟ್ನಾ : ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಸ್ವತಂತ್ರ ಪತ್ರಕರ್ತ ಅಜಿತ್ ಅಂಜುಮ್ ವಿರುದ್ಧ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಜುಲೈ 12ರಂದು ಯೂಟ್ಯೂಬ್ ಚಾನೆಲ್‌ನಲ್ಲಿನ ವೀಡಿಯೊವೊಂದರಲ್ಲಿ, ಬೇಗುಸರಾಯ್‌ನ ಸಾಹೇಬ್ಪುರ ಕಮಲ್ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಅಜಿತ್ ಅಂಜುಮ್ ಆರೋಪಿಸಿದ್ದಾರೆ.ಜಿಲ್ಲಾಡಳಿತವು ಅವರ ಹೇಳಿಕೆಯನ್ನು ಆಧಾರರಹಿತ ಎಂದು ತಳ್ಳಿ ಹಾಕಿದೆ. ಸಾರ್ವಜನಿಕರ ಭಾವನೆಯನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದೆ.

ಬೂತ್ ಮಟ್ಟದ ಅಧಿಕಾರಿ ಮುಹಮ್ಮದ್ ಅನ್ಸಾರುಲ್ಹಕ್ ಅವರ ದೂರಿನ ಆಧಾರದ ಮೇಲೆ ಜುಲೈ 13ರಂದು ಬಾಲಿಯಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಿಸಲಾಗಿದೆ.

ʼಆ್ಯಪ್‌ನಲ್ಲಿ ಡೇಟಾವನ್ನು ಅಪ್ಲೋಡ್ ಮಾಡುತ್ತಿದ್ದಾಗ ಅಜಿತ್ ಅಂಜುಮ್ ಮತ್ತು ಅವರ ಸಹೋದ್ಯೋಗಿಗಳು ಬಂದು ಆ ಪ್ರದೇಶದ ಮುಸ್ಲಿಂ ಮತದಾರರ ಬಗ್ಗೆ ಪ್ರಶ್ನೆ ಕೇಳಿದರು. ಮುಸ್ಲಿಂ ಮತದಾರರಿಗೆ ತೊಂದರೆ ನೀಡಲಾಗುತ್ತಿದೆ ಎಂಬ ಅಂಜುಂ ಅವರ ಆರೋಪ ಸುಳ್ಳುʼ ಎಂದು ಮುಹಮ್ಮದ್ ಅನ್ಸಾರುಲ್ಹಕ್ ಹೇಳಿದರು.

ಬೇಗುಸರಾಯ್ ಎಸ್ಪಿ ಎಫ್ಐಆರ್ ದಾಖಲಿಸಿರುವುದನ್ನು ದೃಢಪಡಿಸಿದ್ದಾರೆ.

ಎಫ್ಐಆರ್ ಬಗ್ಗೆ ಪ್ರತಿಕ್ರಿಯಿಸಿದ ಅಜಿತ್ ಅಂಜುಮ್, ನನ್ನ ವಿರುದ್ಧ ಮುಸ್ಲಿಂ ಬಿಎಲ್ಒ ಓರ್ವರನ್ನು ಬಲಿಪಶುವಾಗಿ ಬಳಸಲಾಗುತ್ತಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ʼಬೇಗುಸರೈನಲ್ಲಿ ಬಿಎಲ್ಒ ಮೇಲೆ ಒತ್ತಡ ಹೇರಿ ನನ್ನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ವೀಡಿಯೊವನ್ನು ನೋಡಿ ಮತ್ತು ನಾನು ಆ ಮುಸ್ಲಿಂ ಬಿಎಲ್ಒಗೆ ಕೋಮು ಸಾಮರಸ್ಯವನ್ನು ಕದಡುವ ಏನಾದರೂ ಹೇಳಿದ್ದೇನೆಯೇ ಎಂದು ನೀವೇ ನಿರ್ಧರಿಸಿ. ಅವರಿಗೆ ಬೇರೆ ಏನೂ ಸಿಗದಿದ್ದಾಗ, ಅವರು ಈ ಮಾರ್ಗವನ್ನು ಆಯ್ಕೆ ಮಾಡಿಕೊಂಡರು. ನನ್ನ ವಿರುದ್ಧ ಮುಸ್ಲಿಂ ಬಿಎಲ್ಒ ಓರ್ವರನ್ನು ಬಲಿಪಶುವಾಗಿ ಬಳಸಲಾಗುತ್ತಿದೆ. ವೀಡಿಯೊದಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಆಡಳಿತವು ಬೆದರಿಕೆ ಹಾಕುತ್ತಿದೆ. ನಾನು ಇನ್ನೂ ಬೇಗುಸರೈನಲ್ಲಿದ್ದೇನೆ. ಅಗತ್ಯಬಿದ್ದರೆ, ನಾನು ಈ ಹೋರಾಟವನ್ನು ಸುಪ್ರೀಂ ಕೋರ್ಟ್‌ವರೆಗೆ ಕೊಂಡೊಯ್ಯುತ್ತೇನೆ. ನಾನು ಹೆದರುವುದಿಲ್ಲʼ ಎಂದು ಹೇಳಿದ್ದಾರೆ.

ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟವಾದ ವೀಡಿಯೊ ಬಾಲಿಯಾ ಬ್ಲಾಕ್‌ನಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣಾ ಅಭಿಯಾನದ ಕುರಿತ ವರದಿಯಾಗಿದೆ. ಇದರಲ್ಲಿ ಅಗತ್ಯ ದಾಖಲೆಗಳು ಅಥವಾ ಪೋಟೊಗಳಿಲ್ಲದೆ ಹೆಚ್ಚಿನ ಸಂಖ್ಯೆಯ ಮತದಾರರ ಫಾರ್ಮ್‌ಗಳನ್ನು ಹೇಗೆ ಭರ್ತಿ ಮಾಡಲಾಗುತ್ತಿದೆ ಮತ್ತು ಅಪ್ಲೋಡ್ ಮಾಡಲಾಗುತ್ತಿದೆ ಎಂಬುದನ್ನು ತೋರಿಸಲಾಗಿದೆ.

ವರದಿಯು ಬಾಲಿಯಾದ ಬಿಎಲ್ಒ ಮತ್ತು ಮೇಲ್ವಿಚಾರಕರೊಂದಿಗೆ ನೇರ ಸಂಭಾಷಣೆಗಳನ್ನು ಒಳಗೊಂಡಿದೆ. ಇದರಲ್ಲಿ ಅನೇಕ ಫಾರ್ಮ್‌ಗಳು ಅಪೂರ್ಣವಾಗಿವೆ, ಕೆಲವು ಹೆಸರುಗಳು, ಸಹಿಗಳು ಅಥವಾ ಯಾವುದೇ ರೀತಿಯ ಗುರುತಿನ ಪುರಾವೆಗಳು ಇಲ್ಲ ಎಂದು ಹೇಳಲಾಗಿದೆ. ʼಮುಸ್ಲಿಂ ಬಹುಸಂಖ್ಯಾತʼ ಬೂತ್‌ಗಳ ಶೇಕಡಾ 80 ಕ್ಕೂ ಹೆಚ್ಚು ಜನರು ಸರಿಯಾದ ದಾಖಲೆಗಳೊಂದಿಗೆ ಫಾರ್ಮ್‌ಗಳನ್ನು ಸಲ್ಲಿಸಿದ್ದಾರೆ ಎಂದು ವೀಡಿಯೊದಲ್ಲಿ ಹೇಳಲಾಗಿದೆ. ಬಾಂಗ್ಲಾದೇಶಿಗಳು ಅಥವಾ ರೋಹಿಂಗ್ಯಾಗಳನ್ನು ಮತದಾರರಾಗಿ ಪಟ್ಟಿ ಮಾಡಲಾಗಿದೆ ಎಂಬುದನ್ನು ಸಂಪೂರ್ಣವಾಗಿ ಸುಳ್ಳು ಎಂದು ಬಿಎಲ್ಒ ಸ್ಪಷ್ಟಪಡಿಸುವುದು ವೀಡಿಯೊದಲ್ಲಿ ಕಂಡು ಬಂದಿದೆ.

ಸೌಜನ್ಯ: newslaundry.com

साहेबपूर कमाल विधान सभा क्षेत्र ( बलिया अनुमंडल, बेगूसराय) मे चल रहे SIR कार्यो के आलोक में एक Youtube Handle द्वारा फैलाए जा रहे भ्रामक ख़बरों के खंडन के संबंध में जारी प्रेस विज्ञप्ति। @IPRDBihar@ECISVEEP@CEOBihar #begusarai pic.twitter.com/E74tHQIui7

— जिला प्रशासन बेगूसराय (@DM_Begusarai) July 13, 2025



share
ವಾರ್ತಾಭಾರತಿ
ವಾರ್ತಾಭಾರತಿ
Next Story
X