Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ...

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತರಾಟೆಗೆ ತೆಗೆದುಕೊಂಡ ಸಿಎಂ ಪಿಣರಾಯಿ ವಿಜಯನ್

ಕೇರಳ: ಪ್ರಾರ್ಥನಾ ಕೇಂದ್ರದಲ್ಲಿನ ಸ್ಫೋಟದ ಕುರಿತ ಸಾಮಾಜಿಕ ಮಾಧ್ಯಮ ಪೋಸ್ಟ್

ವಾರ್ತಾಭಾರತಿವಾರ್ತಾಭಾರತಿ29 Oct 2023 11:50 PM IST
share
  • ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್  ತರಾಟೆಗೆ ತೆಗೆದುಕೊಂಡ ಸಿಎಂ ಪಿಣರಾಯಿ ವಿಜಯನ್

    Photo- PTI

  • ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್  ತರಾಟೆಗೆ ತೆಗೆದುಕೊಂಡ ಸಿಎಂ ಪಿಣರಾಯಿ ವಿಜಯನ್

    Photo- PTI

ತಿರುವನಂತಪುರಂ: ಕಲಮಶ್ಶೆರಿಯ ಪ್ರಾರ್ಥನಾ ಕೇಂದ್ರವೊಂದರಲ್ಲಿ ನಡೆದ ಸ್ಫೋಟದ ಕುರಿತು ತಮ್ಮನ್ನು ಟೀಕಿಸಿ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅದು ಅವರ ಕೋಮುವಾದಿ ನಿಲುವಿನ ಭಾಗವಾಗಿದೆ ಎಂದು ಕಿಡಿ ಕಾರಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ರಾಜೀವ್ ಚಂದ್ರಶೇಖರ್ ಅವರನ್ನು ಹೆಸರಿಸದೆ, ಕೇಂದ್ರ ಸಚಿವರು ಯಾವ ಮಾಹಿತಿಯನ್ನು ಆಧರಿಸಿ ನನ್ನ ವಿರುದ್ಧ ಅಂತಹ ಪೋಸ್ಟ್ ಮಾಡಿದ್ದಾರೆ? ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ತನಿಖೆಯು ಪ್ರಗತಿಯಲ್ಲಿರುವಾಗ ಅಂತಹ ಹೇಳಿಕೆಯನ್ನು ನೀಡಲು ಹೇಗೆ ಸಾಧ್ಯ? ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶ್ನಿಸಿದರು.

ವಿಧಾನಸಭಾ ಕಾರ್ಯಾಲಯ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ವಿವರಣಾ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, x ಸಾಮಾಜಿಕ ಮಾಧ್ಯಮದಲ್ಲಿ ಇಂಗ್ಲಿಷ್ ಹಾಗೂ ಮಲಯಾಳಂ ಭಾಷೆಯಲ್ಲಿ ರಾಜೀವ್ ಚಂದ್ರಶೇಖರ್ ಪೋಸ್ಟ್ ಮಾಡಿರುವ ಹೇಳಿಕೆಯನ್ನು ಓದಿ ಹೇಳಿದರು.

ಆ ಪೋಸ್ಟ್ನಲ್ಲಿ, "ಬೆಲೆ ಕಳೆದುಕೊಂಡ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಾದ @pinarayivijayan ಅವರಿಂದ ನಾಚಿಕೆಗೇಡು. ತುಷ್ಟೀಕರಣ ರಾಜಕಾರಣ ನಡೆಯುತ್ತಿದ್ದು, ಭ್ರಷ್ಟಾಚಾರದ ಆರೋಪಗಳಲ್ಲಿ ಸಿಲುಕಿದ್ದಾರೆ. ಕೇರಳದಲ್ಲಿ ಜಿಹಾದ್ಗಾಗಿನ ಹಮಾಸ್ ಭಯೋತ್ಪಾದಕರು ಮುಗ್ಧ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸುವಾಗ ದಿಲ್ಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟಿಸುತ್ತಿದ್ದಾರೆ" ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದರು.

ಈ ಪೋಸ್ಟ್ ಅನ್ನು ಉಲ್ಲೇಖಿಸಿದ ಪಿಣರಾಯಿ ವಿಜಯನ್, ಆ ಹೇಳಿಕೆಯು ಸಂಪೂರ್ಣವಾಗಿ ಕೋಮುವಾದಿ ಮನಸ್ಥಿತಿಯ ಪ್ರತಿಫಲನವಾಗಿದೆ ಎಂದು ಆರೋಪಿಸಿದರು.

"ಸಚಿವ ಸ್ಥಾನವನ್ನು ಹೊಂದಿರುವ ವ್ಯಕ್ತಿಯೊಬ್ಬ, ತನಿಖಾ ಸಂಸ್ಥೆಗಳಿಗೆ ಕನಿಷ್ಠ ಗೌರವವನ್ನಾದರೂ ನೀಡಬೇಕು. ಘಟನೆಯ ಕುರಿತು ಕೇರಳ ಪೊಲೀಸರು ತನಿಖೆ ನಡೆಸುತ್ತಿದ್ದರೂ, ಕೇಂದ್ರ ತನಿಖಾ ಸಂಸ್ಥೆಗಳು ಘಟನಾ ಸ್ಥಳವನ್ನು ತಲುಪಿವೆ ಎಂಬ ವರದಿಗಳನ್ನು ನಾವೆಲ್ಲ ನೋಡುತ್ತಿದ್ದೇವೆ" ಎಂದು ಅವರು ಹರಿಹಾಯ್ದರು.

ಅವರು ನಿರ್ಧಿಷ್ಟ ಗುಂಪೊಂದನ್ನು ಗುರಿಯಾಗಿಸಿಕೊಂಡಿದ್ದು, ಅದು ಅವರ ಕೋಮುವಾದಿ ನಿಲುವಿನ ಭಾಗವಾಗಿದೆ. ಆದರೆ, ಕೇರಳವೆಂದೂ ಅವರ ಕಾರ್ಯಸೂಚಿಯ ಪರವಿಲ್ಲ ಎಂದು ಅವರು ಟೀಕಿಸಿದರು.

ಅಂತಹ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿಲ್ಲ ಎಂದಿರುವ ಪಿಣರಾಯಿ ವಿಜಯನ್, ಅಂತಹ ಅಭಿಯಾನಗಳಿಗೆ ಬಲಿಯಾಗಬಾರದು ಎಂದು ಕೇರಳ ಜನತೆಗೆ ಮನವಿ ಮಾಡಿದರು.

Tags

CM Pinarayi VijayanUnion MinisterRajiv Chandrasekhar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X