Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಘ ಪರಿವಾರದ ಕೋಮುವಾದಿ ಕಾರ್ಯಸೂಚಿಯು...

ಸಂಘ ಪರಿವಾರದ ಕೋಮುವಾದಿ ಕಾರ್ಯಸೂಚಿಯು ಅಪಾಯವನ್ನು ಎತ್ತಿ ತೋರಿಸಿದೆ: ಪಿಣರಾಯಿ ವಿಜಯನ್ ಕಳವಳ

ಮುಸ್ಲಿಂ ವಿದ್ಯಾರ್ಥಿಗೆ ಸಹಪಾಠಿಗಳಿಂದ ಕಪಾಳಮೋಕ್ಷ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 Aug 2023 10:52 PM IST
share
ಸಂಘ ಪರಿವಾರದ ಕೋಮುವಾದಿ ಕಾರ್ಯಸೂಚಿಯು ಅಪಾಯವನ್ನು ಎತ್ತಿ ತೋರಿಸಿದೆ: ಪಿಣರಾಯಿ ವಿಜಯನ್ ಕಳವಳ

ತಿರುವನಂತಪುರಂ: ಸಂಘ ಪರಿವಾರದ ಕೋಮುವಾದಿ ಕಾರ್ಯಸೂಚಿಯು ವ್ಯಕ್ತಿಯೊಬ್ಬನನ್ನು ಹೇಗೆ ಪೈಶಾಚಿಕಗೊಳಿಸಬಹುದು ಎಂಬ ಅಪಾಯವನ್ನು ಮುಝಾಫ್ಪರ್ ನಗರದ ಶಾಲಾ ಪ್ರಕರಣವು ಎತ್ತಿ ತೋರಿಸಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿರುವುದಾಗಿ indianexpress.com ವರದಿ ಮಾಡಿದೆ.

ಉತ್ತರ ಪ್ರದೇಶದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬಳು ತನ್ನ ತರಗತಿಯಲ್ಲಿನ ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯುವಂತೆ ಇತರ ಮಕ್ಕಳಿಗೆ ಸೂಚಿಸಿರುವ ಘಟನೆಯನ್ನು ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಉಲ್ಲೇಖಿಸಿರುವ ಪಿಣರಾಯಿ ವಿಜಯನ್, “ಕೋಮುವಾದವು ಯಾವುದೇ ವ್ಯಕ್ತಿ ತನ್ನನ್ನು ತಾನು ತೀರಾ ಕೆಳ ಮಟ್ಟಕ್ಕಿಳಿಸಿಕೊಳ್ಳುವ ಮನಸ್ಥಿತಿಯನ್ನು ಬೆಳೆಸುತ್ತದೆ ಎಂಬುದನ್ನು ಈ ಘಟನೆಯು ನಮಗೆ ಮನವರಿಕೆ ಮಾಡಿಕೊಟ್ಟಿದೆ. ಸಂಘ ಪರಿವಾರದ ಸೈದ್ಧಾಂತಿಕತೆಗೆ ವಿರುದ್ಧವಾಗಿ ನಾವು ಬಲಿಷ್ಠ ಪ್ರತಿರೋಧವನ್ನು ನಿರ್ಮಿಸಬೇಕು ಎಂಬ ಎಚ್ಚರಿಕೆಯನ್ನು ಈ ಘಟನೆ ನೀಡಿದೆ. ಈ ಹೊಣೆಗಾರಿಕೆಯನ್ನು ಸಾಕಾರಗೊಳಿಸಲು ಎಲ್ಲ ಪ್ರಜಾಸತ್ತಾತ್ಮಕ ಜಾತ್ಯತೀತ ವ್ಯಕ್ತಿಗಳು ಕೈಜೋಡಿಸಬೇಕಿದೆ” ಎಂದು ಪಿಣರಾಯಿ ಕರೆ ನೀಡಿದ್ದಾರೆ.

“ಈ ಘಟನೆಯು, ಕೋಮುವಾದ ಹಾಗೂ ನಿರಂಕುಶವಾದವು ಮನುಷ್ಯನಲ್ಲಿನ ಪ್ರೀತಿ ಹಾಗೂ ಸಹಾನುಭೂತಿಯ ಕೊನೆ ಹನಿಯನ್ನೂ ಇಂಗಿಸಬಲ್ಲವು ಎಂಬುದನ್ನು ನಮಗೆ ಮತ್ತೆ ನೆನಪಿಸಿದೆ. ಏಳು ವರ್ಷದ ಬಾಲಕನನ್ನು ಆತನ ಧರ್ಮದ ಕಾರಣಕ್ಕೆ ಶಿಕ್ಷಿಸಿರುವುದು ಮಾತ್ರವಲ್ಲದೆ, ಆ ಶಿಕ್ಷೆಯನ್ನು ಅನ್ಯ ಧರ್ಮದ ವಿದ್ಯಾರ್ಥಿಗಳನ್ನು ಬಳಸಿಕೊಂಡು ಕಾರ್ಯಗತಗೊಳಿಸಿರುವ ಆ ಶಿಕ್ಷಕಿಯಲ್ಲಿ ಅದೆಂಥ ಕೋಮುವಾದದ ವಿಷ ಮನೆ ಮಾಡಿಬಹುದು?” ಎಂದು ಅವರು ತಮ್ಮ ಆಘಾತ ವ್ಯಕ್ತಪಡಿಸಿದ್ದಾರೆ.

ಸಂಘ ಪರಿವಾರವು ಮಾಡಿರುವ ಆಳವಾದ ಗಾಯಕ್ಕೆ ಮುಝಾಫ್ಪರ್ ನಗರದ ಘಟನೆಯೊಂದೇ ಏಕೈಕ ನಿದರ್ಶನವಲ್ಲ. ಪ್ರಜಾಪ್ರಭುತ್ವದ ಬಹು ದೊಡ್ಡ ಉದಾಹರಣೆಯಾದ ಭಾರತವನ್ನು ದ್ವೇಷದ ನೆಲವಾಗಿಸಲು ಹಿಂದುತ್ವ ಕೋಮುವಾದ ಪ್ರಯತ್ನಿಸುತ್ತಿದೆ. ಉತ್ತರ ಪ್ರದೇಶ, ಹರ್ಯಾಣ ಹಾಗೂ ಮಣಿಪುರದಲ್ಲಿನ ವರದಿಗಳು ಈ ಮಾತನ್ನು ಸಮರ್ಥಿಸುತ್ತಿವೆ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X