Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಟ್ಟಿ ಮಾಡಿದ ಅಪರಾಧದಲ್ಲಿ...

ಪಟ್ಟಿ ಮಾಡಿದ ಅಪರಾಧದಲ್ಲಿ ಭಾಗಿಯಾಗಿದ್ದರೆ ಮಾತ್ರ PMLA ಅಡಿಯಲ್ಲಿ ಪಿತೂರಿ ಆರೋಪ ಮಾನ್ಯ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಾರ್ತಾಭಾರತಿವಾರ್ತಾಭಾರತಿ30 Nov 2023 3:09 PM IST
share
ಪಟ್ಟಿ ಮಾಡಿದ ಅಪರಾಧದಲ್ಲಿ ಭಾಗಿಯಾಗಿದ್ದರೆ ಮಾತ್ರ PMLA ಅಡಿಯಲ್ಲಿ ಪಿತೂರಿ ಆರೋಪ ಮಾನ್ಯ

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಿರ್ದಿಷ್ಟವಾಗಿ ಪಟ್ಟಿ ಮಾಡಲಾಗಿರುವ ಅನುಸೂಚಿತ ಅಪರಾಧದ ಪಿತೂರಿಯಲ್ಲಿ ಭಾಗಿಯಾಗಿದ್ದರೆ ಮಾತ್ರ ಯಾವುದೇ ವ್ಯಕ್ತಿಯ ವಿರುದ್ಧ ಆ ಕಾಯ್ದೆಯಡಿ ಕ್ರಿಮಿನಲ್ ಪಿತೂರಿ ಪ್ರಕರಣವನ್ನು ದಾಖಲಿಸಿಕೊಳ್ಳಬಹುದಾಗಿದೆ ಎಂದು ಬುಧವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂದು thehindu.com ವರದಿ ಮಾಡಿದೆ.

“ಒಂದು ವೇಳೆ ಕಾಯ್ದೆಯ ಅನುಸೂಚಿಯಲ್ಲಿ ನಿರ್ದಿಷ್ಟವಾಗಿ ಸೇರ್ಪಡೆ ಮಾಡಲಾಗಿರುವ ಅಪರಾಧವನ್ನು ನಡೆಸಿದ ಪಿತೂರಿ ಆರೋಪವಿದ್ದಾಗ ಮಾತ್ರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120ಬಿ (ಕ್ರಿಮಿನಲ್ ಪಿತೂರಿ) ಅಡಿ ದಂಡನಾರ್ಹ ಅಪರಾಧವಾಗಲಿದೆ” ಎಂದು ನ್ಯಾ. ಎ.ಎಸ್.ಓಕಾ ನೇತೃತ್ವದ ನ್ಯಾಯಪೀಠ ತೀರ್ಪು ನೀಡಿದೆ.

ಇದೇ ವೇಳೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅನುಸೂಚಿತ ಅಪರಾಧಗಳ ಭಾಗ Aಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120B ಅನ್ನು ಸೇರ್ಪಡೆ ಮಾಡಲಾಗಿದೆ ಎಂಬ ಜಾರಿ ನಿರ್ದೇಶನಾಲಯದ ವಾದವನ್ನು ನ್ಯಾಯಾಲಯವು ತಳ್ಳಿ ಹಾಕಿತು. ಈ ವಾದದ ಪ್ರಕಾರ, ಅಪರಾಧವನ್ನೆಸಗಲು ನಡೆಸಿದ ಕ್ರಿಮಿನಲ್ ಪಿತೂರಿಯು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅನುಸೂಚಿಯ ಭಾಗವಾಗಿರದಿದ್ದರೂ, ಆ ಅಪರಾಧವನ್ನು ಅನುಸೂಚಿತ ಅಪರಾಧವೆಂದು ಪರಿಗಣಿಸಬಹುದಾಗಿದೆ.

“ಈ ತರ್ಕದನ್ವಯ, ಅಪರಾಧವು ಅನುಸೂಚಿಯ ಭಾಗವಾಗಿರದಿದ್ದರೂ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120Bಯನ್ನು ಅನ್ವಯಿಸುವ ಮೂಲಕ, ಯಾವುದೇ ದಂಡ ಸಂಹಿತೆಯ ಅಡಿ ಅಪರಾಧವೆಸಗಲು ಪಿತೂರಿ ನಡೆಸಿದ ಆರೋಪದಲ್ಲಿ ವಿಚಾರಣಾ ಪ್ರಕ್ರಿಯೆಯನ್ನು ಹುಟ್ಟು ಹಾಕಬಹುದಾಗಿದೆ. ಆದರೆ, ಇದು ಶಾಸನದ ಉದ್ದೇಶವಾಗಿರಲು ಸಾಧ್ಯವಿಲ್ಲ” ಎಂದು ನ್ಯಾ. ಓಕಾ ತಮ್ಮ ತೀರ್ಪಿನಲ್ಲಿ ಬರೆದಿದ್ದಾರೆ.

ಕೆಲವು ಆಯ್ದ ಅಪರಾಧಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಅನುಸೂಚಿತ ಅಪರಾಧಗಳನ್ನಾಗಿಸಬಹುದು ಎಂಬ ಜಾರಿ ನಿರ್ದೇಶನಾಲಯದ ವ್ಯಾಖ್ಯಾನವು ಶಾಸನಾತ್ಮಕ ಉದ್ದೇಶವನ್ನು ಪರಾಭವಗೊಳಿಸಲಿದೆ ಎಂದೂ ನ್ಯಾಯಾಲಯ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X