Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2036ರ ವೇಳೆಗೆ 150 ಕೋಟಿ ದಾಟಲಿರುವ ದೇಶದ...

2036ರ ವೇಳೆಗೆ 150 ಕೋಟಿ ದಾಟಲಿರುವ ದೇಶದ ಜನಸಂಖ್ಯೆ: ವರದಿ

ವಾರ್ತಾಭಾರತಿವಾರ್ತಾಭಾರತಿ13 Aug 2024 7:44 AM IST
share
2036ರ ವೇಳೆಗೆ 150 ಕೋಟಿ ದಾಟಲಿರುವ ದೇಶದ ಜನಸಂಖ್ಯೆ: ವರದಿ

ಹೊಸದಿಲ್ಲಿ: ಭಾರತದ ಜನಸಂಖ್ಯೆ 2036ರ ವೇಳೆಗೆ 152.2 ಕೋಟಿಯನ್ನು ತಲುಪುವ ನಿರೀಕ್ಷೆ ಇದ್ದು, ಮಹಿಳೆಯರ ಪ್ರಮಾಣ ಹಾಲಿ ಇರುವ 48.5ಕ್ಕಿಂತ ಸ್ವಲ್ಪ ಸುಧಾರಣೆ ಕಂಡು 48.8ಕ್ಕೆ ತಲುಪಲಿದೆ ಎಂದು ಅಂಕಿ ಅಂಶಗಳು ಮತ್ತು ಯೋಜನಾ ಅನುಷ್ಠಾನ ಸಚಿವಾಲಯ ಪ್ರಕಟಿಸಿದ ವರದಿಯೊಂದು ಅಂದಾಜಿಸಿದೆ.

'ವುಮನ್ ಅಂಡ್ ಮೆನ್ ಇನ್ ಇಂಡಿಯಾ-2023' ವರದಿಯ ಪ್ರಕಾರ, ದೇಶದಲ್ಲಿ ಫಲವತ್ತತೆ ದರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 15 ವರ್ಷದೊಳಗಿನವರ ಪ್ರಮಾಣ ಗಣನೀಯವಾಗಿ ಕುಸಿಯುವ ಸಾಧ್ಯತೆ ಇದೆ. ಇದಕ್ಕೆ ವಿರುದ್ಧವಾಗಿ 60 ವರ್ಷ ಮೇಲ್ಪಟ್ಟವರ ಸಂಖ್ಯೆ ಗಣನೀಯವಾಗಿ ಹೆಚ್ಚಲಿದೆ.

2011ರ ಅಂಕಿ ಅಂಶಕ್ಕೆ ಹೋಲಿಸಿದರೆ ದೇಶದಲ್ಲಿ ಲಿಂಗಾನುಪಾತ 2036ರ ವೇಳೆಗೆ 952ಕ್ಕೆ ಹೆಚ್ಚಲಿದೆ. ಹಾಲಿ 1000 ಪುರುಷರಿಗೆ 943 ಮಹಿಳೆಯರಿದ್ದರೆ, ಇದು ಸುಧಾರಣೆಯಾಗಲಿದೆ ಎಂದು ಲಿಂಗ ಸಮಾನತೆ ಕುರಿತ ಧನಾತ್ಮಕ ಪ್ರವೃತ್ತಿಯನ್ನು ವರದಿ ಬಿಂಬಿಸಿದೆ.

ಈ ವರದಿ ಭಾರತದಲ್ಲಿ ಪುರುಷರು ಮತ್ತು ಮಹಿಳೆಯರ ಸ್ಥಿತಿಗತಿ ಬಗೆಗಿನ ಸಮಗ್ರ ದೃಷ್ಟಿಕೋನವನ್ನು ನೀಡುವುದಾಗಿದ್ದು, ಜನಸಂಖ್ಯೆ, ಶಿಕ್ಷಣ, ಆರೋಗ್ಯ, ಆರ್ಥಿಕ ಪಾಲ್ಗೊಳ್ಳುವಿಕೆ ಹಾಗೂ ನಿರ್ಧಾರ ಕೈಗೊಳ್ಳುವ ಬಗೆಗಿನ ಮಾಹಿತಿಯನ್ನು ಒಳಗೊಂಡಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಲಿಂಗ ಅಸಮಾನತೆ ಬಗ್ಗೆಯೂ ಬೆಳಕು ಚೆಲ್ಲುತ್ತದೆ. ವಿವಿಧ ಸಚಿವಾಲಯಗಳು, ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಪ್ರಕಟಿಸಿದ ಅಂಕಿ ಅಂಶಗಳನ್ನು ಆಧರಿಸಿ ವರದಿ ಸಿದ್ಧಪಡಿಸಲಾಗಿದೆ.

ದೇಶದಲ್ಲಿ ವಯೋನಿರ್ದಿಷ್ಟ ಫಲವತ್ತತೆ ದರದ ಮಾಹಿತಿಯನ್ನೂ ವರದಿ ಒಳಗೊಂಡಿದ್ದು, 2016ರಿಂದ 2020ರ ಅವಧಿಯಲ್ಲಿ 20-24 ಹಾಗೂ 25-29 ವಯೋವರ್ಗದ ಫಲವತ್ತತೆ ದರ ಅನುಕ್ರಮವಾಗಿ 135.4 ಮತ್ತು 166.0 ಯಿಂದ 113.6 ಹಾಗೂ 139.6ಕ್ಕೆ ಕುಸಿದಿದೆ. 35-39ನೇ ವಯೋವರ್ಗದಲ್ಲಿ ಫಲವತ್ತತೆ ಪ್ರಮಾಣ 32.7 ರಿಂದ 35.6ಕ್ಕೆ ಹೆಚ್ಚಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X