Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಚೀತಾಗಳ ಸಾವಿಗೆ ನಿರ್ಲಕ್ಷ್ಯ ಕಾರಣ’:...

‘ಚೀತಾಗಳ ಸಾವಿಗೆ ನಿರ್ಲಕ್ಷ್ಯ ಕಾರಣ’: ಮರಣೋತ್ತರ ವರದಿಯನ್ನು ಹಂಚಿಕೊಂಡ ಸಾಕೇತ್‌ ಗೋಖಲೆ

ವಾರ್ತಾಭಾರತಿವಾರ್ತಾಭಾರತಿ18 July 2023 2:08 PM IST
share
‘ಚೀತಾಗಳ ಸಾವಿಗೆ ನಿರ್ಲಕ್ಷ್ಯ ಕಾರಣ’: ಮರಣೋತ್ತರ ವರದಿಯನ್ನು ಹಂಚಿಕೊಂಡ ಸಾಕೇತ್‌ ಗೋಖಲೆ

ಹೊಸದಿಲ್ಲಿ: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ವಿದೇಶಗಳಿಂದ ತಂದ ಎಂಟು ಚೀತಾಗಳು ಮೃತಪಟ್ಟಿರುವ ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಆರ್‌ಟಿಐ ಕಾರ್ಯಕರ್ತ ಹಾಗೂ ಟಿಎಂಸಿ ರಾಜ್ಯಸಭಾ ಸಂಸದ ಸಾಕೇತ್‌ ಗೋಖಲೆ ಅವರು ಮೃತ ಚೀತಾದ ಮರಣೋತ್ತರ ವರದಿಯನ್ನು ಹಂಚಿಕೊಂಡು ಚೀತಾ ನಿರ್ವಹಣೆಯಲ್ಲಿ ಗಂಭೀರ ಲೋಪವಾಗಿದೆ ಎಂದು ಆರೋಪಿಸಿದ್ದಾರೆ.

“ಕಳೆದ ವಾರ, ತೇಜಸ್ ಮತ್ತು ಸೂರಜ್ ಎಂಬ ಹೆಸರಿನ 2 ಚಿರತೆಗಳು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕೇವಲ 2 ದಿನಗಳ ಅವಧಿಯಲ್ಲಿ ಸಾವನ್ನಪ್ಪಿದ್ದವು. ಕಳೆದ 5 ತಿಂಗಳಲ್ಲಿ ಒಟ್ಟು 8 ಚೀತಾಗಳು ಸಾವನ್ನಪ್ಪಿವೆ. ಮೋದಿ ಸರ್ಕಾರವು ಅವುಗಳ ಸಾವಿಗೆ ಕಾದಾಟವನ್ನು ದೂಷಿಸಿತ್ತು. ಆದರೆ ಚೀತಾಗಳ ಕುತ್ತಿಗೆಗೆ ಹಾಕಿರುವ ರೇಡಿಯೋ ಕಾಲರ್‌ಗಳು ಅವುಗಳಿಗೆ ಹೊಂದಿಕೆಯಾಗುವುದಿಲ್ಲ, ಹಾಗೂ ಅದರಿಂದ ಅವುಗಳ ಕುತ್ತಿಗೆ ಮೇಲೆ ಗಾಯಗಳಾಗಿವೆ, ರೇಡಿಯೋ ಕಾಲರ್‌ಗಳು ಕುತ್ತಿಗೆ ಚರ್ಮದ ಮೇಲೆ ಉಜ್ಜಿ ಗಾಯವಾಗಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಕಂಡುಬಂದಿದೆ ಎಂದು ವರದಿಗಳು ಈಗ ಬಹಿರಂಗಪಡಿಸಿವೆ” ಎಂದು ಸಾಕೇತ್‌ ಗೋಖಲೆ ಟ್ವೀಟ್‌ ಮಾಡಿದ್ದಾರೆ.

ಮುಂದುವರೆದು, “ತೇವಾಂಶದ ಕಾರಣದಿಂದಾಗಿ ಈ ಗಾಯಗಳಲ್ಲಿ ಸೋಂಕುಂಟಾಗಿ ಹುಳುಗಳಾಗಿವೆ. ಇದು "ಸೆಪ್ಟಿಸೆಮಿಯಾ" ಅಥವಾ "ಹಠಾತ್ ಆಘಾತ" ಕ್ಕೆ ಕಾರಣವಾಗಿದ್ದು, ಇದರಿಂದ ಚಿರತೆಗಳು ಸಾವನ್ನಪ್ಪಿವೆ” ಎಂದು ಗೋಖಲೆ ತಿಳಿಸಿದ್ದಾರೆ.

“ಚೀತಾಗಳ ಸ್ಥಳಾಂತರ ಯೋಜನೆಯನ್ನು ಮೋದಿ ಸರ್ಕಾರವು ಸಂಪೂರ್ಣವಾಗಿ ಫೋಟೋಶೂಟ್‌ ಎಂದಷ್ಟೇ ಪರಿಗಣಿಸಿದೆ, ಬಳಿಕ ಅವುಗಳನ್ನು ನಿರ್ಲಕ್ಷಿಸಲಾಗಿದೆ. ಚೀತಾಗಳ ಸಾವುಗಳನ್ನು ತಡೆಗಟ್ಟಲು ಸಾಧ್ಯವಿರುವಾಗ ಅವುಗಳನ್ನು ಸಾಯಲು ಬಿಟ್ಟಿರುವುದು ಸ್ವೀಕಾರಾರ್ಹವಲ್ಲ, ಈ ಬಗ್ಗೆ ಸಚಿವರಿಗೆ ಪತ್ರ ಬರೆದಿದ್ದೇನೆ. ಸಚಿವ ಬೂಪೇಂದ್ರ ಯಾದವ್‌ ಅವರು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಚೀತಾಗಳ ಜೀವವನ್ನು ರಕ್ಷಿಸುವ ಬಗ್ಗೆ ಅವರ ಸಚಿವಾಲಯ ಮತ್ತು ಸರ್ಕಾರದ ಸಡಿಲವಾದ ಧೋರಣೆಯನ್ನು ಬದಲಾಯಿಸುವಂತೆ ಒತ್ತಾಯಿಸಿದ್ದೇನೆ” ಎಂದು ಸಾಕೇತ್‌ ಗೋಖಲೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X