Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ ಶಿವಸೇನೆ ಶಾಸಕನಿಂದ...

ಮಹಾರಾಷ್ಟ್ರ ಶಿವಸೇನೆ ಶಾಸಕನಿಂದ ಕ್ಯಾಂಟೀನ್ ನೌಕರನಿಗೆ ಹಲ್ಲೆ: ಸಿಎಂ ಫಡ್ನವೀಸ್ ಖಂಡನೆ

ವಾರ್ತಾಭಾರತಿವಾರ್ತಾಭಾರತಿ9 July 2025 4:53 PM IST
share
ಮಹಾರಾಷ್ಟ್ರ ಶಿವಸೇನೆ ಶಾಸಕನಿಂದ ಕ್ಯಾಂಟೀನ್ ನೌಕರನಿಗೆ ಹಲ್ಲೆ: ಸಿಎಂ ಫಡ್ನವೀಸ್ ಖಂಡನೆ

ಮುಂಬೈ: ಇಲ್ಲಿಯ ಆಕಾಶವಾಣಿ ಶಾಸಕರ ಭವನದ ಕ್ಯಾಂಟೀನ್ ನೌಕರನ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಶಿವಸೇನೆ ಶಾಸಕ ಸಂಜಯ ಗಾಯಕ್ವಾಡ್ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಬುಧವಾರ ಕಟುವಾಗಿ ಖಂಡಿಸಿದ್ದಾರೆ.

ಇಂತಹ ವರ್ತನೆಯು ಸರಿಯಾದ ಸಂದೇಶವನ್ನು ರವಾನಿಸುವುದಿಲ್ಲ. ಇದು ರಾಜ್ಯ ವಿಧಾನಸಭೆಯ ಮತ್ತು ಓರ್ವ ಶಾಸಕನಾಗಿ ಅವರ ವರ್ಚಸ್ಸಿಗೆ ಧಕ್ಕೆಯನ್ನುಂಟು ಮಾಡುತ್ತದೆ ಎಂದು ಫಡ್ನವೀಸ್ ಹೇಳಿದರು. ಗಾಯಕ್ವಾಡ್ ಕ್ಯಾಂಟೀನ್ ನೌಕರನಿಗೆ ಕಪಾಳಮೋಕ್ಷ ಮಾಡಿದ ಮತ್ತು ಮುಷ್ಟಿಯಿಂದ ಗುದ್ದಿದ ವೀಡಿಯೊ ವೈರಲ್ ಆಗಿದೆ.

ಶಿವಸೇನೆ(ಯುಬಿಟಿ) ಶಾಸಕ ಅನಿಲ್ ಪರಬ್ ಅವರು ವಿಧಾನ ಪರಿಷತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾವಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಫಡ್ನವೀಸ್,ಇಂತಹ ಸಮಸ್ಯೆಗಳ ಬಗ್ಗೆ ಯಾರೇ ಆದರೂ ಔಪಚಾರಿಕವಾಗಿ ದೂರು ಸಲ್ಲಿಸಬಹುದು ಮತ್ತು ಆ ಬಗ್ಗೆ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.

ಶಾಸಕರ ಭವನದಲ್ಲಿಯ ಸಮಸ್ಯೆಗಳ ಬಗ್ಗೆ ಗಮನ ಹರಿಸುವಂತೆ ವಿಧಾನ ಪರಿಷತ್ ಸಭಾಪತಿ ರಾಮ ಶಿಂದೆ ಅವರನ್ನು ಕೋರಿಕೊಂಡ ಫಡ್ನವೀಸ್, ಅಲ್ಲಿ ಸಮಸ್ಯೆಗಳಿದ್ದರೆ ಪರಿಹಾರ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ. ಆದರೆ ಜನಪ್ರತಿನಿಧಿಯಿಂದ ಹಲ್ಲೆಯು ಸರಿಯಾದ ಸಂದೇಶವನ್ನು ರವಾನಿಸುವುದಿಲ್ಲ. ಇದು ಗಂಭೀರ ವಿಷಯವಾಗಿದೆ. ನೀವು(ಶಿವಸೇನೆ ಮುಖ್ಯಸ್ಥ ಏಕನಾಥ ಶಿಂದೆ) ಮತ್ತು ಸ್ಪೀಕರ್ ರಾಹುಲ್ ನಾರ್ವೇಕರ್ ಇದನ್ನು ಗಮನಕ್ಕೆ ತೆಗೆದುಕೊಂಡು ಮುಂದಿನ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ತನ್ನ ಕೋಣೆಗೆ ಪೂರೈಸಲಾಗಿದ್ದ ಊಟದಲ್ಲಿ ಹಳಸಿದ ದಾಲ್ ಮತ್ತು ಅನ್ನವನ್ನು ನೀಡಲಾಗಿದೆ ಎಂದು ಗಾಯಕ್ವಾಡ್ ಆರೋಪಿಸಿದ ಬಳಿಕ ಕೋಲಾಹಲ ಸೃಷ್ಟಿಯಾಗಿತ್ತು. ಸಿಟ್ಟಿನಿಂದ ಕ್ಯಾಂಟೀನ್‌ಗೆ ತೆರಳಿದ್ದ ಅವರು ದಾಲ್ ಪ್ಯಾಕೆಟ್‌ನ್ನು ಮೂಸಿ ನೋಡುವಂತೆ ನೌಕರನಿಗೆ ಬಲವಂತಗೊಳಿಸಿದ್ದರು. ಬಳಿಕ ಆತನಿಗೆ ಕಪಾಳಮೋಕ್ಷ ಮಾಡಿ ಮುಷ್ಟಿಯಿಂದ ಗುದ್ದಿದ್ದ ಗಾಯಕ್ವಾಡ್ ಇತರ ಸಿಬ್ಬಂದಿಗಳ ಮೇಲೂ ಹಲ್ಲೆ ನಡೆಸಿದ್ದನ್ನು ವೀಡಿಯೊ ತೋರಿಸಿದೆ.

ಘಟನೆಯ ಕುರಿತು ಸುದ್ದಿಸಂಸ್ಥೆ ಜೊತೆ ಮಾತನಾಡಿದ ಗಾಯಕ್ವಾಡ್, ‘ಉತ್ತಮ ಗುಣಮಟ್ಟದ ಆಹಾರವನ್ನು ನೀಡುವಂತೆ ನಾನು ಕ್ಯಾಂಟೀನ್ ಸಿಬ್ಬಂದಿಗಳಿಗೆ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಅದಕ್ಕೆ ಅವರು ಕಿವಿಗೊಟ್ಟಿಲ್ಲ. ನಾನು ಕಳೆದ 30 ವರ್ಷಗಳಿಂದಲೂ ಆಕಾಶವಾಣಿ ಕ್ಯಾಂಟೀನ್‌ಗೆ ಬರುತ್ತಿದ್ದು, ಐದೂವರೆ ವರ್ಷಗಳಿಂದ ಇಲ್ಲಿಯೇ ವಾಸವಿದ್ದೇನೆ. ಇಲ್ಲಿ ಮೊಟ್ಟೆಗಳು 15 ದಿನ, ಮಾಂಸಾಹಾರ 15-20 ದಿನ ಮತ್ತು ತರಕಾರಿಗಳು 2ರಿಂದ 4 ದಿನಗಳಷ್ಟು ಹಳೆಯದಾಗಿರುತ್ತವೆ. ಇಲ್ಲಿ ಸುಮಾರು ಐದರಿಂದ ಹತ್ತು ಸಾವಿರ ಜನರು ಊಟ ಮಾಡುತ್ತಾರೆ ಮತ್ತು ಪ್ರತಿಯೊಬ್ಬರದೂ ಇದೇ ದೂರು ಆಗಿದೆ. ಆಹಾರದಲ್ಲಿ ಹಲ್ಲಿ,ಇಲಿ ಇರುವುದು ಸಾಮಾನ್ಯವಾಗಿಬಿಟ್ಟಿದೆ ’ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X