Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆನಡಾ RSS ಅನ್ನು ನಿಷೇಧಿಸಿದೆಯೆ?;...

ಕೆನಡಾ RSS ಅನ್ನು ನಿಷೇಧಿಸಿದೆಯೆ?; ವೈರಲ್ ಆಗುತ್ತಿರುವ ವಿಡಿಯೋದ ವಾಸ್ತವಾಂಶ ಇಲ್ಲಿದೆ…

ವಾರ್ತಾಭಾರತಿವಾರ್ತಾಭಾರತಿ22 Sept 2023 12:55 PM IST
share
ಕೆನಡಾ RSS ಅನ್ನು ನಿಷೇಧಿಸಿದೆಯೆ?; ವೈರಲ್ ಆಗುತ್ತಿರುವ ವಿಡಿಯೋದ ವಾಸ್ತವಾಂಶ ಇಲ್ಲಿದೆ…

ಹೊಸದಿಲ್ಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ‌ (RSS)ವನ್ನು ಕೆನಡಾದಲ್ಲಿ ನಿಷೇಧಿಸಲಾಗಿದೆ ಎಂದು ವ್ಯಕ್ತಿಯೊಬ್ಬರು ಹೇಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಈ ನಿರ್ಧಾರವನ್ನು ಕೆನಡಾ ಸರ್ಕಾರ ಪ್ರಕಟಿಸಿದೆ ಎಂದು ಪ್ರತಿಪಾದಿಸಲಾಗುತ್ತಿದೆ.

ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿರುವ ಸಂದರ್ಭದಲ್ಲಿ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿಡಾದುತ್ತಿದೆ.

ಸದ್ಯ ವೈರಲ್ ಆಗಿರುವ ವಿಡಿಯೊದಲ್ಲಿ ಎನ್ಸಿಸಿಎಂ ನಾಲ್ಕು ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಹೇಳಲಾಗಿದೆ. ಅವುಗಳೆಂದರೆ:

► ಕೆನಡಾ ರಾಯಭಾರಿಯನ್ನು ತಕ್ಷಣವೇ ಭಾರತದಿಂದ ಹಿಂದಕ್ಕೆ ಕರೆಸಿಕೊಳ್ಳುವುದು.

►ಕೆನಡಾದಿಂದ ಭಾರತದ ರಾಯಭಾರಿಯನ್ನು ಉಚ್ಚಾಟಿಸುವುದು.

►ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ ಸೀಮಿತವಲ್ಲದಂತೆ ಎರಡೂ ದೇಶಗಳ ನಡುವಿನ ವ್ಯಾಪಾರ ಮಾತುಕತೆಗಳನ್ನು ಅಮಾನತುಗೊಳಿಸುವುದು.

► ಆರೆಸ್ಸೆಸ್ ಅನ್ನು ನಿಷೇಧಿಸಿ, ಅವರ ಪ್ರತಿನಿಧಿಗಳನ್ನು ಕೆನಡಾದಿಂದ ಹೊರದಬ್ಬುವುದು.

ವಾಸ್ತವಾಂಶವೇನು?:

ಕೆನಡಾ ಸರ್ಕಾರವು ಆರೆಸ್ಸೆಸ್ ಅನ್ನು ನಿಷೇಧಿಸಿಯೂ ಇಲ್ಲ ಅಥವಾ ನ್ಯಾಶನಲ್ ಕೌನ್ಸಿಲ್ ಆಫ್ ಕೆನಡಿಯನ್ ಮುಸ್ಲಿಂ ಸಿಇಒ ಸ್ಟೀಫನ್ ಬ್ರೌನ್ ಅವರ ಆಗ್ರಹಕ್ಕೆ ಪ್ರತಿಕ್ರಿಯಿಸಿಯೂ ಇಲ್ಲ ಎಂದು thequint.com ಸತ್ಯಶೋಧನಾ ವೇದಿಕೆಯು ದೃಢಪಡಿಸಿದೆ.

ಎನ್ಸಿಸಿಎಂ ಯೂಟ್ಯೂಬ್ ಖಾತೆಯನ್ನು ಪತ್ತೆ ಹಚ್ಚಿದ thequint.com ಸತ್ಯಶೋಧನಾ ವೇದಿಕೆಯು ಈ ಖಾತೆಯು ವೈರಲ್ ಆಗಿರುವ ವಿಡಿಯೊದ ವಿಸ್ತೃತ ಸ್ವರೂಪವನ್ನು ಹೊಂದಿತ್ತು ಹಾಗೂ ಎನ್ಸಿಸಿಎಂ ನ ಸಿಇಒ ಸ್ಟೀಫನ್ ಬ್ರೌನ್ ಅವರು ಎನ್ಸಿಸಿಎಂ ಹಾಗೂ ವರ್ಲ್ಡ್ ಸಿಖ್ ಆರ್ಗನೈಸೇಷನ್ ಆಫ್ ಕೆನಡಾ ಜಂಟಿಯಾಗಿ ಆಯೋಜಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿರುವುದು ಕಂಡು ಬಂದಿದೆ.

ಈ ವಿಡಿಯೊವನ್ನು ಸೆಪ್ಟೆಂಬರ್ 21ರಂದು ಹಂಚಿಕೊಳ್ಳಲಾಗಿದೆ.

ಈ ವಿಡಿಯೊದಲ್ಲಿ ಸ್ಟೀಫನ್ ಬ್ರೌನ್ ನಾಲ್ಕು ಮುಖ್ಯ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ. (ಅದನ್ನು ಮೇಲೆ ನೀಡಲಾಗಿದೆ).

ಈ ದೃಶ್ಯಾವಳಿಯು ಎನ್ಸಿಸಿಎಂ ಅಧಿಕೃತ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಅಪ್ಲೋಡ್ ಆಗಿದೆ.

ಈ ವೈರಲ್ ವಿಡಿಯೊವು ಎನ್ಸಿಸಿಎಂನ ಟಿಕ್ ಟಾಕ್ ಖಾತೆಯ ವಾಟರ್ ಮಾರ್ಕ್ ಆದ @nccmuslims ಅನ್ನೂ ಹೊಂದಿದೆ.

ಸೆಪ್ಟೆಂಬರ್ 20ರಂದು ಈ ಭಾಷಣವನ್ನು ಸ್ಟೀಫನ್ ಬ್ರೌನ್ ಮಾಡಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಮೇಲಿನ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು.

ಅಲ್ಲದೆ thequint.com ಸತ್ಯಶೋಧನಾ ವೇದಿಕೆಯು ಅದರ ಅಧಿಕೃತ ಅಂತರ್ಜಾಲ ತಾಣವನ್ನು ಪರಿಶೀಲಿಸಿದಾಗ ಆ ಸಂಸ್ಥೆಯು ಕೆನಡಾ ಸರ್ಕಾರದೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ ಎಂಬುದು ದೃಢಪಟ್ಟಿದೆ. ಹೀಗಾಗಿ ಕೆನಡಾದಲ್ಲಿ ಆರೆಸ್ಸೆಸ್ ಅನ್ನು ನಿಷೇಧಿಸಲಾಗಿದೆ ಎಂಬುದು ಸುಳ್ಳು ಸುದ್ದಿ ಎಂದು thequint.com ಸತ್ಯಶೋಧನಾ ವೇದಿಕೆ ಬಯಲು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X