Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ | TMC ನಿಧಿಯಿಂದ 160 ಕೋಟಿ ರೂ....

ದಿಲ್ಲಿ | TMC ನಿಧಿಯಿಂದ 160 ಕೋಟಿ ರೂ. ವರ್ಗಾವಣೆ? : ವಿಮಾನಯಾನ ಸಂಸ್ಥೆ ವಿರುದ್ಧ ED ತನಿಖೆ

ವಾರ್ತಾಭಾರತಿವಾರ್ತಾಭಾರತಿ17 Aug 2026 7:12 AM IST
share
ದಿಲ್ಲಿ | TMC ನಿಧಿಯಿಂದ 160 ಕೋಟಿ ರೂ. ವರ್ಗಾವಣೆ? : ವಿಮಾನಯಾನ ಸಂಸ್ಥೆ ವಿರುದ್ಧ ED ತನಿಖೆ

ಹೊಸದಿಲ್ಲಿ : ಕೋಲ್ಕತ್ತಾ ಮೂಲದ ವಿಮಾನಯಾನ ಸಂಸ್ಥೆಯೊಂದರ ವಿರುದ್ಧ ಜಾರಿ ನಿರ್ದೇಶನಾಲಯ (ED) ನಡೆಸುತ್ತಿರುವ ತನಿಖೆಯಲ್ಲಿ ಗಂಭೀರ ಆರೋಪವೊಂದು ಬೆಳಕಿಗೆ ಬಂದಿದೆ. ತನಿಖೆಯ ಪ್ರಕಾರ, ಹೆಚ್ಚು ಪರಿಚಿತವಲ್ಲದ ‘ಕೇರ್ವೆಲ್ ಏವಿಯೇಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಎಂಬ ಸಂಸ್ಥೆಗೆ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ನಿಧಿಯಿಂದ ಸುಮಾರು 160 ಕೋಟಿ ರೂ. ಹಣ ನೀಡಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಹಣವನ್ನು ಎಂಬ್ರೇರ್ ಜೆಟ್ ಹಾಗೂ ಅಗಸ್ಟಾ ವಿಐಪಿ ಹೆಲಿಕಾಪ್ಟರ್ ಖರೀದಿಸಲು ಬಳಸಲಾಗಿತ್ತು ಎಂದು ತಿಳಿದುಬಂದಿದೆ. ಬಳಿಕ ಇದೇ ವಿಮಾನಯಾನ ಸಂಸ್ಥೆಯು ಖರೀದಿಸಿದ ವಿಮಾನಗಳು ಮತ್ತು ಹೆಲಿಕಾಪ್ಟರ್ ಗಳನ್ನು 187 ಕೋಟಿ ರೂ. ಗೆ ಟಿಎಂಸಿಗೆ ಬಾಡಿಗೆಗೆ ನೀಡಿತ್ತು ಎಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ.

ಈ ಹಣದ ವಹಿವಾಟಿನ ಸ್ವರೂಪ ಹಾಗೂ ಅದರ ಹಿಂದಿನ ಉದ್ದೇಶದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

ಜೆಟ್ ಮತ್ತು ಹೆಲಿಕಾಪ್ಟರ್ ಖರೀದಿಸಲು ಸ್ವಂತ ಬಂಡವಾಳವಿಲ್ಲದ ಕೇರ್ವೆಲ್ ಏವಿಯೇಷನ್ ಸಂಸ್ಥೆಗೆ ಟಿಎಂಸಿ 88.5 ಕೋಟಿ ರೂ. ಬಡ್ಡಿರಹಿತ ಭದ್ರತಾ ಠೇವಣಿ ಒದಗಿಸಿರುವ ಆರೋಪದ ಸುತ್ತ ಅಕ್ರಮ ಹಣ ವರ್ಗಾವಣೆ ತನಿಖೆ ಕೇಂದ್ರೀಕೃತವಾಗಿದೆ ಎಂದು ಮೂಲಗಳು ತಿಳಿಸಿವೆ.

ಭದ್ರತಾ ಠೇವಣಿ ಪಡೆದ ಬಳಿಕ, ಕೇರ್ವೆಲ್ ಏವಿಯೇಷನ್ ಸಂಸ್ಥೆಯು ಗುಜರಾತ್ ನ ಗಿಫ್ಟ್‌ ಸಿಟಿಯಲ್ಲಿ ನೋಂದಾಯಿತವಾಗಿರುವ ತನ್ನ ಅಂಗಸಂಸ್ಥೆ ಕೇರ್ವೆಲ್ ಫ್ಲೈಜೆಟ್ ಐಎಫ್ಎಸ್ಸಿ ಪ್ರೈವೇಟ್ ಲಿಮಿಟೆಡ್ ಗೆ ಈ ಹಣವನ್ನು ವರ್ಗಾಯಿಸಿ, ಜೆಟ್ ಹಾಗೂ ಹೆಲಿಕಾಪ್ಟರ್ ಖರೀದಿಗೆ ಬಳಸಿಕೊಂಡಿದೆ ಎಂದು ED ಆರೋಪಿಸಿದೆ.

ಇದಲ್ಲದೆ, ಈ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಮನ್ ದ್ವೀಪಗಳಿಂದ ವರ್ಗಾವಣೆಯಾದ 16 ಕೋಟಿ ರೂ.ಗೂ ಅಧಿಕ ಮೊತ್ತದ ಹಣದ ವಹಿವಾಟು ಕೂಡ ತನಿಖೆಯ ವ್ಯಾಪ್ತಿಯಲ್ಲಿದೆ ಎಂದು ತಿಳಿದುಬಂದಿದೆ.

ಜೆಟ್ ಅನ್ನು 72 ತಿಂಗಳುಗಳ ಕಾಲ ಹಾಗೂ ಹೆಲಿಕಾಪ್ಟರ್ ಅನ್ನು 56 ತಿಂಗಳುಗಳ ಕಾಲ ಬಳಸಿದ್ದಕ್ಕಾಗಿ, ಜಿಎಸ್ಟಿ ಹೊರತುಪಡಿಸಿ 186.9 ಕೋಟಿ ರೂ.ಬಾಡಿಗೆ ಪಾವತಿಸಬೇಕಿತ್ತು ಎಂದು ಮೂಲಗಳು ತಿಳಿಸಿವೆ. ಆದರೆ, ಚಾರ್ಟರ್ ಒಪ್ಪಂದದಲ್ಲಿ ನಿಗದಿಪಡಿಸಲಾಗಿದ್ದ ಕನಿಷ್ಠ ಗ್ಯಾರಂಟಿ ಹಾರಾಟದ ಸಮಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗಿಲ್ಲ ಎಂದು ಹೇಳಲಾಗಿದೆ.

ಇದರ ನಡುವೆಯೇ, 2021ರಿಂದ 2026ರ ಅವಧಿಯಲ್ಲಿ ಇತರೆ ಕಂಪನಿಗಳಿಂದ ವಿಮಾನ ಹಾಗೂ ಹೆಲಿಕಾಪ್ಟರ್ ಗಳನ್ನು ಬಾಡಿಗೆಗೆ ಪಡೆಯಲು ಟಿಎಂಸಿ ಹೆಚ್ಚುವರಿಯಾಗಿ 149 ಕೋಟಿ ರೂ. ವ್ಯಯಿಸಿದೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X