Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. FACT CHECK - ಸೂರತ್ ನ ಹಳೆಯ ವೀಡಿಯೊ...

FACT CHECK - ಸೂರತ್ ನ ಹಳೆಯ ವೀಡಿಯೊ ಹಂಚಿಕೊಂಡು ಮುಂಬೈನಲ್ಲಿ ಬಸ್ ಗೆ ಹಾನಿ ಎಂದು ಪ್ರತಿಪಾದನೆ; ವಾಸ್ತವವೇನು?

ವಾರ್ತಾಭಾರತಿವಾರ್ತಾಭಾರತಿ25 Sept 2023 11:31 PM IST
share
FACT CHECK - ಸೂರತ್ ನ ಹಳೆಯ ವೀಡಿಯೊ ಹಂಚಿಕೊಂಡು ಮುಂಬೈನಲ್ಲಿ ಬಸ್ ಗೆ ಹಾನಿ ಎಂದು ಪ್ರತಿಪಾದನೆ; ವಾಸ್ತವವೇನು?

ಹೊಸದಿಲ್ಲಿ: ಗುಂಪೊಂದು ಕಲ್ಲು ತೂರಾಟ ನಡೆಸಿ ಬಸ್ ಒಂದಕ್ಕೆ ಹಾನಿ ಮಾಡಿರುವ ವಿಡಿಯೊವನ್ನು ಕೆಲವು ಜನರು ಹಂಚಿಕೊಂಡು, ಮುಂಬೈನ ಬಾಂದ್ರಾದಲ್ಲಿ ಬಸ್ ಒಂದರ ಮೇಲೆ ಮುಸ್ಲಿಂ ಆಟೋರಿಕ್ಷಾ ಚಾಲಕರ ಗುಂಪೊಂದು ದಾಳಿ ನಡೆಸಿದ್ದಾರೆ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದ್ದಾರೆ. ಈ ವಿಡಿಯೊವನ್ನು, “ಬಾಂದ್ರಾದಿಂದ ಬಿಕೆಸಿ ಮಾರ್ಗವಾಗಿ ಬಸ್ ಮಾರ್ಗವನ್ನು ಕಾರ್ಯಾಚರಿಸುವುದನ್ನು ಆ ಮಾರ್ಗದಲ್ಲಿ ಪ್ರಯಾಣಿಕರ ಆಸನಗಳನ್ನು ಹಂಚಿಕೊಂಡು ಕಾರ್ಯಾಚರಿಸುತ್ತಿರುವ ಮುಸ್ಲಿಂ ಆಟೋರಿಕ್ಷಾ ಚಾಲಕರು ವಿರೋಧಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಆದರೆ ಈ ಪ್ರತಿಪಾದನೆಯು ಸುಳ್ಳು ಎಂದು boomlive.in ವರದಿ ಮಾಡಿದೆ.

ಇದೇ ವಿಡಿಯೊದ ತುಣುಕನ್ನು ಹಲವಾರು ಮಂದಿ ʼxʼ ಸಾಮಾಜಿಕ ಮಾಧ್ಯಮದಲ್ಲಿ ಮೇಲಿನ ಶೀರ್ಷಿಕೆಯೊಂದಿಗೇ ಹಂಚಿಕೊಂಡಿದ್ದು, ಆ ಪೋಸ್ಟ್ ಗೆ ಪ್ರತಿಕ್ರಿಯಿಸಿರುವವರು ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಮುಂಬೈ ಪೊಲೀಸರನ್ನು ಆಗ್ರಹಿಸಿದ್ದಾರೆ.

ಆ ವಿಡಿಯೊವನ್ನು ಮುಖ್ಯ ಚೌಕಟ್ಟುಗಳನ್ನಾಗಿ ಬೇರ್ಪಡಿಸಿರುವ boomlive.in ಸತ್ಯಶೋಧನಾ ವೇದಿಕೆಯು, ರಿವರ್ಸ್ ಇಮೇಜ್ ಸರ್ಚ್ ಮೂಲಕ ಆ ವಿಡಿಯೊ ಗುಜರಾತ್ ರಾಜ್ಯದ ಸೂರತ್ ನ ವಿಡಿಯೊ ಎಂಬುದನ್ನು ಪತ್ತೆ ಹಚ್ಚಿದೆ.

ಮಾಧ್ಯಮ ವರದಿಗಳ ಪ್ರಕಾರ, ಈ ಘಟನೆಯು ಜುಲೈ 5, 2019ರಂದು ಗುಂಪು ಹಲ್ಲೆಯ ವಿರುದ್ಧ ವಿರುದ್ಧ ನಡೆದಿದ್ದ ರ್ಯಾಲಿಯ ಸಂದರ್ಭದಲ್ಲಿ ಗುಜರಾತ್ ನ ಸೂರತ್ ಪ್ರದೇಶದಲ್ಲಿ ನಡೆದಿತ್ತು ಎನ್ನಲಾಗಿದೆ. ಅನುಮತಿ ಇಲ್ಲದೆ ರ್ಯಾಲಿ ನಡೆಸುತ್ತಿರುವುದರಿಂದ ರ್ಯಾಲಿಯನ್ನು ನಿಲ್ಲಿಸಬೇಕು ಎಂದು ಪೊಲೀಸರು ಪ್ರತಿಭಟನಾಕಾರರಿಗೆ ಸೂಚಿಸಿದಾಗ, ಆ ರ್ಯಾಲಿಯು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿತ್ತು ಎಂದು ಹೇಳಲಾಗಿದೆ.

ಈ ಘಟನೆಯ ಕುರಿತು ವರದಿ ಮಾಡಿರುವ Ahmedabad Mirror ಪತ್ರಿಕೆಯು, “ಆ ಸಂದರ್ಭದಲ್ಲಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸತೊಡಗಿದರು ಹಾಗೂ ಪೊಲೀಸರು ಗುಂಡಿನ ದಾಳಿ ಮತ್ತು ಅಶ‍್ರುವಾಯು ಶೆಲ್ ದಾಳಿಯ ಮೊರೆ ಹೋಗಬೇಕಾಯಿತು” ಎಂದು ಹೇಳಿದೆ.

ಹೀಗಾಗಿ, ವೈರಲ್ ಆಗಿರುವ ವಿಡಿಯೊವು ಗುಜರಾತ್ ನ ಸೂರತ್ ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದ್ದೇ ಹೊರತು, ಮುಂಬೈನಲ್ಲಿ ನಡೆದಿರುವುದಲ್ಲ ಎಂಬ ಸಂಗತಿಯನ್ನು boomlive.in ಸತ್ಯಶೋಧನಾ ವೇದಿಕೆ ಬಯಲು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X