Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ನೇಮಕಾತಿ ಪರೀಕ್ಷೆ | ಅ.27ರಂದು...

ಸರಕಾರಿ ನೇಮಕಾತಿ ಪರೀಕ್ಷೆ | ಅ.27ರಂದು ಅಸ್ಸಾಂನಾದ್ಯಂತ ಮೊಬೈಲ್ ಅಂತರ್ಜಾಲ ಸೇವೆಗಳ ಅಮಾನತು

ವಾರ್ತಾಭಾರತಿವಾರ್ತಾಭಾರತಿ25 Oct 2024 10:09 PM IST
share
ಸರಕಾರಿ ನೇಮಕಾತಿ ಪರೀಕ್ಷೆ | ಅ.27ರಂದು ಅಸ್ಸಾಂನಾದ್ಯಂತ ಮೊಬೈಲ್ ಅಂತರ್ಜಾಲ ಸೇವೆಗಳ ಅಮಾನತು

ಗುವಾಹಟಿ : ರವಿವಾರ (ಅಕ್ಟೋಬರ್ 27) ಸರಕಾರಿ ನೇಮಕಾತಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಅಂದು ಬೆಳಗ್ಗೆ 8.30ರಿಂದ ಸಂಜೆ 4 ಗಂಟೆವರೆಗೆ ಅಸ್ಸಾಂನಾದ್ಯಂತ ಮೊಬೈಲ್ ಅಂತರ್ಜಾಲ ಸೇವೆಗಳನ್ನು ಅಮಾನತುಗೊಳಿಸಲಾಗಿದೆ ಎಂದು ಶುಕ್ರವಾರ ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.

ಕಳೆದ ಎರಡು ತಿಂಗಳಲ್ಲಿ ಮೊಬೈಲ್ ಅಂತರ್ಜಾಲ ಸೇವೆಗಳನ್ನು ಅಮಾನತುಗೊಳಿಸುತ್ತಿರುವುದು ಇದು ಮೂರನೆಯ ಬಾರಿಯಾಗಿದೆ.

ರಾಜ್ಯ ಮಟ್ಟದ ನೇಮಕಾತಿ ಆಯೋಗವು ಇಂತಹುದೇ ಪರೀಕ್ಷೆಯನ್ನು ಸೆಪ್ಟೆಂಬರ್ ನಲ್ಲಿ ಹಮ್ಮಿಕೊಂಡಿದ್ದಾಗ ಎರಡು ದಿನಗಳ ಕಾಲ ಮೊಬೈಲ್ ಅಂತರ್ಜಾಲ ಸೇವೆಯನ್ನು ಅಮಾನತುಗೊಳಿಸಲಾಗಿತ್ತು.

ಅಸ್ಸಾಂ ರಾಜ್ಯ ಶಾಲಾ ಶಿಕ್ಷಣ ಮಂಡಳಿಯು ರವಿವಾರದಂದು 4ನೇ ದರ್ಜೆಯ ಹುದ್ದೆಗಳಿಗೆ 28 ಜಿಲ್ಲೆಗಳಲ್ಲಿ ಎರಡು ಪಾಳಿಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಿದೆ.

ಎಚ್ಎಸ್ಎಲ್ಸಿ ಹಂತದ ಹುದ್ದೆಗಳಿಗಾಗಿ ನಡೆಯುತ್ತಿರುವ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಒಟ್ಟಾರೆ 8,27,130 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅವರೆಲ್ಲ ಮೊದಲ ಪಾಳಿಯಲ್ಲಿ ಬೆಳಗ್ಗೆ 9 ಗಂಟೆಯಿಂದ 11.30ರವರೆಗೆ 1,484 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.

8ನೇ ತರಗತಿ ಹಂತದ ಹುದ್ದೆಗಳಿಗಾಗಿ ನಡೆಯುತ್ತಿರುವ ಪರೀಕ್ಷೆಗೆ ಹಾಜರಾಗಲು ಒಟ್ಟು 5,52,002 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅವರೆಲ್ಲ ಎರಡನೆ ಪಾಳಿಯಲ್ಲಿ ಮಧ್ಯಾಹ್ನ 1.30ರಿಂದ 4 ಗಂಟೆವರೆಗೆ 808 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.

“ದುಷ್ಟ ಶಕ್ತಿಗಳು ಮೊಬೈಲ್ ಫೋನ್ ತಂತ್ರಾಂಶಗಳನ್ನು ಬಳಸಿಕೊಂಡು ಅಕ್ರಮವೆಸಗದಂತೆ ಖಾತರಿ ಪಡಿಸಲು ಹಾಗೂ ಸಾರ್ವಜನಿಕರಲ್ಲಿ ಅಪನಂಬಿಕೆಯುಂಟಾಗುವಂತಹ ಪರೀಕ್ಷಾ ನ್ಯೂನತೆಗಳಿರದಂತೆ ಮಾಡಲು ಮೊಬೈಲ್ ಅಂತರ್ಜಾಲ ಸೇವೆಯನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಗೃಹ ಹಾಗೂ ರಾಜಕೀಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಯ್ ತಿವಾರಿ ಸಹಿ ಮಾಡಿರುವ ಆದೇಶದಲ್ಲಿ ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X