Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನನಗೆ ಮನೆಗೆ ಮರಳಬೇಕು": ಪ್ರಧಾನಿ...

"ನನಗೆ ಮನೆಗೆ ಮರಳಬೇಕು": ಪ್ರಧಾನಿ ಮೋದಿಯವರಿಂದ ನೆರವು ಯಾಚಿಸಿದ ಉಕ್ರೇನ್ ಸೆರೆಯಲ್ಲಿರುವ ಗುಜರಾತ್ ವಿದ್ಯಾರ್ಥಿ

ವಾರ್ತಾಭಾರತಿವಾರ್ತಾಭಾರತಿ22 Dec 2025 2:46 PM IST
share
ನನಗೆ ಮನೆಗೆ ಮರಳಬೇಕು: ಪ್ರಧಾನಿ ಮೋದಿಯವರಿಂದ ನೆರವು ಯಾಚಿಸಿದ ಉಕ್ರೇನ್ ಸೆರೆಯಲ್ಲಿರುವ ಗುಜರಾತ್ ವಿದ್ಯಾರ್ಥಿ

ಹೊಸದಿಲ್ಲಿ: ರಶ್ಯ ಪರವಾಗಿ ಯುದ್ಧದಲ್ಲಿ ಭಾಗಿಯಾದ ಆರೋಪದಲ್ಲಿ ಉಕ್ರೇನ್ ಸೇನೆಯಿಂದ ಸೆರೆ ಹಿಡಿಯಲ್ಪಟ್ಟಿರುವ 23 ವರ್ಷದ ಗುಜರಾತ್‌ನ ಮೊರ್ಬಿ ಜಿಲ್ಲೆಯ ಯುವಕನೊಬ್ಬ, ತನ್ನನ್ನು ಬಿಡುಗಡೆಗೊಳಿಸಲು ನೆರವು ನೀಡುವಂತೆ ಭಾರತ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾನೆ.

ತನ್ನ ಕುಟುಂಬಕ್ಕೆ ವಿಡಿಯೊ ಸಂದೇಶ ರವಾನಿಸಿರುವ ಉಕ್ರೇನ್ ಸೇನೆಯ ಸೆರೆಯಲ್ಲಿರುವ ಸಾಹಿಲ್ ಮುಹಮ್ಮದ್ ಹುಸೈನ್ ಮಜೋತಿ ಎಂಬ ಯುವಕ, ರಶ್ಯಕ್ಕೆ ವ್ಯಾಸಂಗ ಮಾಡಲು ಅಥವಾ ಉದ್ಯೋಗಕ್ಕಾಗಿ ಆಗಮಿಸುವ ಯೋಜನೆ ಇರುವವರು ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದ್ದಾನೆ.

"ಸದ್ಯ ನಾನು ಯುದ್ಧಾಪರಾಧಿಯಾಗಿ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದೇನೆ. ನನಗೀಗ ಯಾವುದೇ ಭರವಸೆ ಉಳಿದಿಲ್ಲ ಹಾಗೂ ಮುಂದೇನಾಗುತ್ತದೋ ತಿಳಿದಿಲ್ಲ. ರಶ್ಯಕ್ಕೆ ವ್ಯಾಸಂಗ ಮಾಡಲು ಅಥವಾ ಉದ್ಯೋಗಕ್ಕಾಗಿ ಬರುವವರು ಎಚ್ಚರಿಕೆಯಿಂದ ಇರಬೇಕು. ಇಲ್ಲಿ ಬಹಳಷ್ಟು ವಂಚಕರಿದ್ದಾರೆ. ನೀವಿಲ್ಲಿ ಕ್ರಿಮಿನಲ್, ಮಾದಕ ದ್ರವ್ಯ ಅಥವಾ ಕಾನೂನುಬಾಹಿರ ಪ್ರಕರಣಗಳಲ್ಲಿ ಸಿಲುಕಿಕೊಳ್ಳಬಹುದು. ಎಷ್ಟು ಸಾಧ್ಯವೋ ಅಷ್ಟು ಇವೆಲ್ಲದರಿಂದ ದೂರ ಉಳಿಯಿರಿ" ಎಂದು ತನ್ನ ಕುಟುಂಬದ ಸದಸ್ಯರಿಗೆ ರವಾನಿಸಿರುವ ಎರಡು ವಿಡಿಯೊ ಸಂದೇಶದಲ್ಲಿ ಸಾಹಿಲ್ ಮುಹಮ್ಮದ್ ಹುಸೈನ್ ಕಿವಿಮಾತು ಹೇಳಿದ್ದಾನೆ.

"ನನಗೆ ಸಹಾಯ ಮಾಡುವಂತೆ ಭಾರತ ಸರಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರಿಗೆ ಮನವಿ ಮಾಡುತ್ತೇನೆ" ಎಂದೂ ಆತ ಈ ವಿಡಿಯೊ ಸಂದೇಶದಲ್ಲಿ ಹೇಳಿದ್ದಾನೆ. ಈ ವಿಡಿಯೊ ಸಂದೇಶಗಳು ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳೆರಡರಲ್ಲೂ ಇವೆ.

ರಶ್ಯನ್ ಭಾಷೆ ಮತ್ತು ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಲು ಸೇಂಟ್ ಪೀಟರ್ಸ್‌ಬರ್ಗ್‌ನಿಂದ ಐಟಿಎಂಒ ವಿಶ್ವವಿದ್ಯಾಲಯಕ್ಕೆ ಮಜೋತಿ ಪ್ರಯಾಣ ಬೆಳೆಸಿದ್ದನು. ಆದರೆ, ಬಳಿಕ ಆತ ರಶ್ಯದಲ್ಲಿ ಕಾನೂನಾತ್ಮಕ ಸಮಸ್ಯೆಗೆ ಸಿಲುಕಿಕೊಂಡಿದ್ದ. ಆತ ಉಕ್ರೇನ್ ಸೇನೆಯಿಂದ ಸೆರೆಯಾಗುವುದಕ್ಕೂ ಮುನ್ನ, ಆತನನ್ನು ರಶ್ಯ ಸೇನೆ ಬಲವಂತವಾಗಿ ತನ್ನ ಸೇನೆಗೆ ಸೇರ್ಪಡೆ ಮಾಡಿಕೊಂಡಿತ್ತು.

Tags

GujaratstudentUkraineRussia-Ukraine
share
ವಾರ್ತಾಭಾರತಿ
ವಾರ್ತಾಭಾರತಿ
Next Story
X